ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದವರ ಶೋಧದ ಕಾರ್ಯಾಚರಣೆಯಲ್ಲಿ ಬುಧವಾರ ಕೇರಳ ಮೂಲದ ಚಾಲಕ ಎನ್ನಲಾದ ಅರ್ಜುನನ ಶವ ಹಾಗೂ ಅವರು ಓಡಿಸುತ್ತಿದ್ದ ಭಾರತ ಬೆಂಜ್ ಲಾರಿ ಪತ್ತೆಯಾಗಿದೆ. ಆ ಮೂಲಕ 66 ದಿನಗಳ ಬಳಿಕ ಜಿಲ್ಲಾಡಳಿತಕ್ಕೆ ಕೊನೆಗೂ ದೊಡ್ಡ ಯಶಸ್ಸು ದೊರೆತಂತಾಗಿದೆ.