ಕಸದ ತೊಟ್ಟಿ ಆಗುತ್ತಿರುವ ಭಟ್ಕಳ ಸಾಗರ ರಸ್ತೆ!ಸಾಗರ ರಸ್ತೆಯ ಇಕ್ಕೆಲದಲ್ಲಿ ಕೆಲವರು ಕಸ, ತ್ಯಾಜ್ಯ ಹಾಕುತ್ತಿದ್ದು, ಸಂಚರಿಸುವವರಿಗೆ ತೊಂದರೆಯಾಗಿದೆ ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ಅದರಿಂದ ಈ ರಸ್ತೆಯಲ್ಲಿ ವಾಯುವಿಹಾರಕ್ಕೆ ಹೋಗುವ ಹಿರಿಯ ನಾಗರಿಕರು, ಮಹಿಳೆಯರು ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಬೇಕು ಎನ್ನುವ ಆಗ್ರಹ ಜನರಿಂದ ಕೇಳಿ ಬಂದಿದೆ.