ತಾಲೂಕಿನ ಪ್ರಮುಖ ದೇವಾಲಯಗಳಲ್ಲಿ ವೈಕುಂಠ ಏಕಾದಶಿಯ ಅಂಗವಾಗಿ ಸಹಸ್ರಾರು ಭಕ್ತಾದಿಗಳು ಸಾಲುಗಟ್ಟಿ ನಿಂತು ವೈಕುಂಠ ದ್ವಾರದ ಮೂಲಕ ವಿಶೇಷ ದರ್ಶನ ಪಡೆದರು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರವೈಕುಂಠ ಏಕಾದಶಿ ಅಂಗವಾಗಿ ಮಂಗಳವಾರ ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ದಿನವಿಡೀ ಸಾವಿರಾರು ಭಕ್ತಾದಿಗಳು ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದರು.ನಗರದ ಮತ್ತು ತಾಲೂಕಿನ ಪ್ರಮುಖ ದೇವಾಲಯಗಳಲ್ಲಿ ವೈಕುಂಠ ಏಕಾದಶಿಯ ಅಂಗವಾಗಿ ಸಹಸ್ರಾರು ಭಕ್ತಾದಿಗಳು ಸಾಲುಗಟ್ಟಿ ನಿಂತು ವೈಕುಂಠ ದ್ವಾರದ ಮೂಲಕ ವಿಶೇಷ ದರ್ಶನ ಪಡೆದರು.ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ, ವಜ್ರ ಕವಚಧಾರಣೆ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ವೈಕುಂಠ ಏಕಾದಶಿ ಅಂಗವಾಗಿ ದೇವಾಲಯದಲ್ಲಿ ಸಂಭ್ರಮ ಮನೆ ಮಾಡಿತ್ತು. ದೇವಾಲಯದಲ್ಲಿರುವ ಶ್ರೀಸ್ವಾಮಿಗೆ ವಿಶೇಷ ವಜ್ರಾಂಗಿ ಅಲಂಕಾರ ಮಾಡಲಾಗಿತ್ತು. ವಜ್ರಖಚಿತ ಆಭರಣಗಳಿಂದ ಶ್ರೀಸ್ವಾಮಿಯನ್ನು ಅಲಂಕರಿಸಿದ್ದ ದೃಶ್ಯ ಭಕ್ತಾದಿಗಳ ಆಕರ್ಷಣೆಗೆ ಪಾತ್ರವಾಯಿತು.ದೇವಾಲಯದ ಮೂಲದೇವರಾಗಿರುವ ಲಕ್ಷ್ಮೀ ಪದ್ಮಾವತಿ ಸಹಿತ ಶ್ರೀವೆಂಕಟೇಶ್ವರ ಸ್ವಾಮಿಗೆ ಕೂಡ ವಿಶೇಷ ಪೂಜಾಲಂಕಾರಗಳು ನಡೆದವು. ಬೆಳಗಿನ ಜಾವ 3 ಗಂಟೆಯಿಂದಲೇ ದೇವರ ದರ್ಶನಕ್ಕೆ ಸಾವಿರಾರು ಜನ ಆಗಮಿಸಿದ್ದರು. ಮೈಲುದ್ದದ ಸರತಿಯಲ್ಲಿ ಬೆಳಗ್ಗಿನಿಂದಲೂ ಸಾವಿರಾರು ಭಕ್ತಾದಿಗಳು ಗಂಟೆಗಟ್ಟಲೆ ನಿಂತು ದೇವರ ದರ್ಶನ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ವಿಶೇಷ ದರ್ಶನದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.ತೂಬಗೆರೆಯಲ್ಲಿ ಸಂಭ್ರಮ:ಅದೇ ರೀತಿ ತಾಲೂಕಿನ ತೂಬಗೆರೆ ಗ್ರಾಮದಲ್ಲಿರುವ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷಾಲಂಕಾರ ಮಾಡಲಾಗಿತ್ತು. ತಿರುಪತಿ ವೆಂಕಟರಮಣ ಎಂದೇ ಖ್ಯಾತವಾಗಿರುವ ಪುರಾತನ ದೇವಾಲಯಕ್ಕೆ ಭಕ್ತಾದಿಗಳು ಭೇಟಿ ನೀಡಿ ದರ್ಶನ ಪಡೆದರು. ವಿಶೇಷ ಪೂಜೆ, ಧಾರ್ಮಿಕ ಪಠಣ ಸೇರಿದಂತೆ ಅನೇಕ ಕಾರ್‍ಯಕ್ರಮಗಳು ಏರ್ಪಾಟಾಗಿದ್ದವು.ಕಾಡನೂರಿನಲ್ಲಿ ವೈಕುಂಠ ಏಕಾದಶಿ:ತಾಲೂಕಿನ ಮತ್ತೊಂದು ಇತಿಹಾಸ ಪ್ರಸಿದ್ದ ದೇವಾಲಯ ಎನಿಸಿರುವ ಕಾಡನೂರು ಗ್ರಾಮದ ಚನ್ನಕೇಶವ ದೇವಾಲಯದಲ್ಲೂ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪೂಜೆ, ಅಲಂಕಾರಗಳು ನಡೆದವು. ಭಕ್ತಾದಿಗಳು ನಿರಂತರವಾಗಿ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಕಿಲ್ಲೆ ವೇಣುಗೋಪಾಲ ದೇಗುಲ:ಇಲ್ಲಿನ ಇತಿಹಾಸ ಪ್ರಸಿದ್ದ ಕಿಲ್ಲೆ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಅಂಗವಾಗಿ ವೆಂಕಟರಮಣಸ್ವಾಮಿಗೆ ವಜ್ರಾಂಗಿ ಅಲಂಕಾರ ಮಾಡಲಾಗಿತ್ತು. ವೇಣುಗೋಪಾಲ ಸ್ವಾಮಿ ಮೂಲ ವಿಗ್ರಹಕ್ಕೆ ವಿಶೇಷ ಹೂವಿನ ಅಲಂಕಾರ, ವೈಕುಂಠ ದ್ವಾರ ದರ್ಶನ, ಉಯ್ಯಾಲೋತ್ಸವ ನಡೆಯಿತು.

ವಡ್ಡರಹಳ್ಳಿಯಲ್ಲಿ ವೈಕುಂಠ ದರ್ಶನ:

ತಾಲೂಕಿನ ವಡ್ಡರಹಳ್ಳಿ ತಿರುಮಲ ದೇವರ ದೇವಾಲಯ(ಭೂವೈಕುಂಠ ಕಲ್ಯಾಣ ವೆಂಕಟರಮಣ ದೇಗುಲ)ದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು. ಹಲವು ಜನಪ್ರತಿನಿಧಿಗಳು ಸೇರಿದಂತೆ ಸಹಸ್ರಾರು ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಮೈಲುಗಟ್ಟಲೆ ರಸ್ತೆಯಲ್ಲಿ ವಿದ್ಯುತ್‌ ದೀಪಾಲಂಕಾರ, ದೇವಾಲಯ ಸುತ್ತಮುತ್ತ ವಿಶೇಷ ಹೂವಿನ ಅಲಂಕಾರ, ಅತ್ಯಾಕರ್ಷಕ ಚಿತ್ತಾರಗಳು ಗಮನ ಸೆಳೆದವು.ಫೋಟೋ-30ಕೆಡಿಬಿಪಿ2-ದೊಡ್ಡಬಳ್ಳಾಪುರದ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀವೆಂಕಟರಮಣಸ್ವಾಮಿದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಆಕರ್ಷಕ ವಜ್ರಾಂಗಿ ಅಲಂಕಾರ.--30ಕೆಡಿಬಿಪಿ3- ದೊಡ್ಡಬಳ್ಳಾಪುರದ ಕಿಲ್ಲೆ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ವೈಕುಂಠಏಕಾದಶಿ ಅಂಗವಾಗಿ ವಜ್ರಾಂಗಿ ಅಲಂಕಾರ.

--30ಕೆಡಿಬಿಪಿ4- ದೊಡ್ಡಬಳ್ಳಾಪುರದ ತೂಬಗೆರೆ ಇತಿಹಾಸ ಪ್ರಸಿದ್ದ ವೆಂಕಟರಮಣ ಸ್ವಾಮಿದೇವಾಲಯದಲ್ಲಿ ವಿಶೇಷಾಲಂಕಾರ.

--30ಕೆಡಿಬಿಪಿ5- ದೊಡ್ಡಬಳ್ಳಾಪುರದ ವಡ್ಡರಹಳ್ಳಿ ಶ್ರೀ ತಿರುಮಲ ಕಲ್ಯಾಣ ವೆಂಕಟರಮಣ ದೇವಾಲಯದಲ್ಲಿ ವಿಶೇಷಾಲಂಕಾರ.