ರಾಮ ಮಂದಿರದಲ್ಲಿ ವೈಕುಂಠ ಏಕಾದಶಿ, ವಿಷ್ಣು ಸಹಸ್ರನಾಮ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ ದಿವ್ಯ ಸತ್ಸಂಗ ಕಾರ್ಯಕ್ರಮ ನಡೆಯಿತು.
ಸೋಮವಾರಪೇಟೆ: ಇಲ್ಲಿನ ಶ್ರೀರಾಮ ಮಂದಿರದ ಕುರುಹಿನಶೆಟ್ಟಿ ಸಮಾಜದ ವತಿಯಿಂದ ರಾಮ ಮಂದಿರದಲ್ಲಿ ವೈಕುಂಠ ಏಕಾದಶಿ, ವಿಷ್ಣು ಸಹಸ್ರನಾಮ ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ ದಿವ್ಯ ಸತ್ಸಂಗ ಕಾರ್ಯಕ್ರಮ ನಡೆಯಿತು.
ದಿನದ ಅಂಗವಾಗಿ ದೇವರಿಗೆ ವಿಶೇಷ ಅಲಂಕಾರ, ಸ್ವರ್ಗದ ಬಾಗಿಲ ಪ್ರವೇಶ, ಶ್ರೀ ದೇವರ ದರ್ಶನ ನಡೆಯಿತು. ರಾಮಮಂದಿರದ ಅರ್ಚಕ ಮೋಹನ್ ಮೂರ್ತಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿತು.ಸಂಜೆ ಸೀತಾ ಬಳಗದ ವತಿಯಿಂದ ವಿಷ್ಣು ಸಹಸ್ರನಾಮ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ದಿವ್ಯ ಸತ್ಸಂಗ ನಡೆಯಿತು. ಸಮಾಜದ ಅಧ್ಯಕ್ಷ ಬಿ.ಎಂ. ರಾಮ್ ಪ್ರಸಾದ್, ಯುವಕ ಸಂಘದ ಅಧ್ಯಕ್ಷ ಬಿ.ಜಿ. ರವಿ, ಸೀತಾ ಬಳಗದ ಅಧ್ಯಕ್ಷೆ ಯಶೋಧ, ಆರ್ಟ್ ಆಫ್ ಲಿವಿಂಗ್ನ ಶಿಕ್ಷಕಿ ರಾಗಿಣಿ ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.