ದೊಡ್ಡಬಳ್ಳಾಪುರ: ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಯೋಗದಲ್ಲಿ ಜಿಲ್ಲೆಯ ವಿವಿಧೆಡೆ ಸ್ವಚ್ಛತಾ ಪಾಕ್ಷಿಕ-2025 ಆಯೋಜಿಸಲಾಗಿತ್ತು.

ದೊಡ್ಡಬಳ್ಳಾಪುರ: ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಯೋಗದಲ್ಲಿ ಜಿಲ್ಲೆಯ ವಿವಿಧೆಡೆ ಸ್ವಚ್ಛತಾ ಪಾಕ್ಷಿಕ-2025 ಆಯೋಜಿಸಲಾಗಿತ್ತು. ರೈತರು, ಗ್ರಾಮೀಣ ಯುವಕರು, ಮಹಿಳೆಯರು ಮತ್ತು ಸಾರ್ವಜನಿಕರಲ್ಲಿ ಸ್ವಚ್ಛತೆ, ನೈರ್ಮಲ್ಯ, ಪರಿಸರ ಸುಸ್ಥಿರತೆ ಮತ್ತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸಿ ಅಭಿಯಾನಕ್ಕೆ ಚಾಲನೆ ನೀಡಿಲಾಯಿತು.ಹದಿನೈದು ದಿನಗಳಲ್ಲಿ ಹಲವು ಪರಿಣಾಮಕಾರಿ ಚಟುವಟಿಕೆಗಳನ್ನು ನಡೆಸಲಾಯಿತು. ಮಾನಸಿಕ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ತರಬೇತಿ ಕಾರ್ಯಕ್ರಮದ ಮೂಲಕ ಸ್ವಚ್ಛ ಪರಿಸರ ಮತ್ತು ಮಾನಸಿಕ

ಯೋಗಕ್ಷೇಮದ ಅರಿವು ಮೂಡಿಸಲಾಯಿತು.

ಕೃಷಿ ವಿಜ್ಞಾನ ಕೇಂದ್ರದ ಕಚೇರಿ ಆವರಣದಲ್ಲಿ ಹಾಗೂ ಕೆವಿಕೆ ದತ್ತು ಪಡೆದ ಗ್ರಾಮದಲ್ಲಿ ಶ್ರಮದಾನ ಅಥವಾ ಸ್ವಯಂಪ್ರೇರಿತ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಇದರಲ್ಲಿ ಕೆವಿಕೆ ಸಿಬ್ಬಂದಿ, ರೈತರು, ಗ್ರಾಮೀಣ ಯುವಕರು ಮತ್ತು ಸ್ಥಳೀಯ ಸ್ವಯಂಸೇವಕರು ಭಾಗವಹಿಸಿದ್ದರು. ತ್ಯಾಜ್ಯ ನಿರ್ವಹಣೆಯ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸವ ಮೂಲಕ ತ್ಯಾಜ್ಯವನ್ನು ಬೇರ್ಪಡಿಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಸುರಕ್ಷಿತ ವಿಲೇವಾರಿ ವಿಧಾನಗಳ ಕುರಿತು ತರಬೇತಿ ನೀಡಲಾಯಿತು.

ಕೃಷಿ ತ್ಯಾಜ್ಯಗಳ ಮರುಬಳಕೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಕೃಷಿ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸುವ ಕುರಿತು ಪ್ರಾಯೋಗಿಕ ತರಬೇತಿಯನ್ನು ನಡೆಸಲಾಯಿತು. ಆಚರಣೆಯ ಭಾಗವಾಗಿ, ರಾಷ್ಟ್ರೀಯ ರೈತ ದಿನಾಚರಣೆಯನ್ನು ನೆಲಮಂಗಲ ತಾಲೂಕಿನಲ್ಲಿ ಆಚರಿಸಲಾಯಿತು, ಇದು ರಾಷ್ಟ್ರಕ್ಕೆ ರೈತರ ಅಮೂಲ್ಯ ಕೊಡುಗೆಯನ್ನು ಗುರುತಿಸುವ ಕಾರ್ಯವಾಗಿದೆ ಹಾಗು ಸ್ವಚ್ಛ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಚರ್ಚಿಸಲು ಸಂವಾದ ಸಭೆಗಳು ಮತ್ತು ತಾಂತ್ರಿಕ ಅಧಿವೇಶನಗಳನ್ನು ನಡೆಸಲಾಯಿತು.

ತರಕಾರಿಗಳು ಮತ್ತು ಹಣ್ಣುಗಳ ಶುದ್ಧ ಮತ್ತು ಸುರಕ್ಷಿತ ಉತ್ಪಾದನೆಯ ಮೂಲಕ ಮನೆಯ ಮಟ್ಟದ ಪೌಷ್ಠಿಕಾಂಶ ಭದ್ರತೆಯನ್ನು ಉತ್ತೇಜಿಸಲು, ವಿಶೇಷವಾಗಿ ಮಹಿಳೆಯರು ಮತ್ತು ಕೃಷಿ ಕುಟುಂಬಗಳಿಗೆ ನ್ಯೂಟ್ರಿ ಗಾರ್ಡನ್ ಕುರಿತು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಬಿ. ಜಿ.ಹನುಮಂತರಾಯ ಮಾತನಾಡಿ, ಸ್ವಚ್ಛತಾ ಪಖ್ವಾಡ ಕೇವಲ ಸ್ವಚ್ಛತಾ ಅಭಿಯಾನವಲ್ಲ, ಗ್ರಾಮೀಣ ಸಮುದಾಯಗಳಲ್ಲಿ ಸುಸ್ಥಿರ ಅಭ್ಯಾಸಗಳನ್ನು ಬೆಳೆಸುವ ಒಂದು ಆಂದೋಲನವಾಗಿದೆ. ಕೃಷಿ ತ್ಯಾಜ್ಯದ ಗೊಬ್ಬರ ತಯಾರಿಕೆ, ಪೋಷಕಾಂಶಗಳ ತೋಟಗಳು ಮತ್ತು ಮಾನಸಿಕ ಆರೋಗ್ಯ ಜಾಗೃತಿಯಂತಹ ಚಟುವಟಿಕೆಗಳ ಮೂಲಕ, ಆರೋಗ್ಯ, ಪೋಷಣೆ ಮತ್ತು ಪರಿಸರ ಸಂರಕ್ಷಣೆಯೊಂದಿಗೆ ಸ್ವಚ್ಛತೆಯನ್ನು ಸಂಯೋಜಿಸುವ ಗುರಿಯನ್ನು ಹೊಂದಿದ್ದೇವೆ ಎಂದು ತಿಳಿಸಿದರು.

ಡಾ. ವೈ.ಎಂ.ಗೋಪಾಲ್ ಮಾತನಾಡಿ, ಸ್ವಚ್ಛತಾ ಪಖ್ವಾಡದ ಸಮಯದಲ್ಲಿ ರೈತರು, ಯುವಕರು ಮತ್ತು ಗ್ರಾಮ ಸಂಸ್ಥೆಗಳ ಸಕ್ರಿಯ ಭಾಗವಹಿಸುವಿಕೆಯು ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಜಾಗೃತಿ ತೋರಿಸುತ್ತದೆ ಹಾಗು ಗ್ರಾಮ ಮಟ್ಟದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವುದಕ್ಕಾಗಿ ಕೃಷಿ ವಿಜ್ಞಾನ ಕೇಂದ್ರದ ಬದ್ಧವಾಗಿದೆ ಎಂದು ತಿಳಿಸಿದರು.

31ಕೆಡಿಬಿಪಿ1-

ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರದಿಂದ ಸ್ವಚ್ಛತಾ ಪಾಕ್ಷಿಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.