ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ ಎಚ್. ಆರ್‌. ಹೇಮಂತ್ ಕುಮಾರ್‌ ನೇತೃತ್ವದಲ್ಲಿ ಅರಣ್ಯಇಲಾಖೆ ಸಿಬ್ಬಂದಿಗಳೊಂದಿಗೆ ಈ ಕಾರ್ಯಾಚರಣೆ ನಡೆಸಿ ವಾಹನವೊಂದರಲ್ಲಿ ಅಕ್ರಮವಾಗಿ ಬಿಲ್ಲೆಟ್ಸ್‌ಗಳನ್ನು ಸಾಗಿಸುತ್ತಿರುವುದು ಪತ್ತೆ ಮಾಡಿದ್ದಾರೆ. ಈ ವಾಹನವನ್ನು ತಕ್ಷಣ ವಶಕ್ಕೆ ಪಡೆದಿದ್ದು, ಈ ಸಂಬಂಧ ಅರಣ್ಯ ಇಲಾಖೆಯಿಂದ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಕೆ. ಮೋಹನ್ ಕುಮಾರ್‌, ಅರ್ಜುನ್, ಗಸ್ತು ಅರಣ್ಯಪಾಲಕರಾದ ಉಮೇಶ್, ಕುಮಾರ್, ಅರಣ್ಯ ವೀಕ್ಷಕರಾದ ಲೋಕೇಶ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ ಅಕ್ರಮವಾಗಿ ಬಿಲ್ಲೆಟ್ಸ್‌ಗಳನ್ನು ಸಾಗಿಸುತ್ತಿದ್ದ ವಾಹನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ವಲಯ ವ್ಯಾಪ್ತಿಯಲ್ಲಿ ಸೋಮವಾರ ಈ ಘಟನೆ ನಡೆದಿದೆ.ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ ಎಚ್. ಆರ್‌. ಹೇಮಂತ್ ಕುಮಾರ್‌ ನೇತೃತ್ವದಲ್ಲಿ ಅರಣ್ಯಇಲಾಖೆ ಸಿಬ್ಬಂದಿಗಳೊಂದಿಗೆ ಈ ಕಾರ್ಯಾಚರಣೆ ನಡೆಸಿ ವಾಹನವೊಂದರಲ್ಲಿ ಅಕ್ರಮವಾಗಿ ಬಿಲ್ಲೆಟ್ಸ್‌ಗಳನ್ನು ಸಾಗಿಸುತ್ತಿರುವುದು ಪತ್ತೆ ಮಾಡಿದ್ದಾರೆ. ಈ ವಾಹನವನ್ನು ತಕ್ಷಣ ವಶಕ್ಕೆ ಪಡೆದಿದ್ದು, ಈ ಸಂಬಂಧ ಅರಣ್ಯ ಇಲಾಖೆಯಿಂದ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಕೆ. ಮೋಹನ್ ಕುಮಾರ್‌, ಅರ್ಜುನ್, ಗಸ್ತು ಅರಣ್ಯಪಾಲಕರಾದ ಉಮೇಶ್, ಕುಮಾರ್, ಅರಣ್ಯ ವೀಕ್ಷಕರಾದ ಲೋಕೇಶ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಭಾಗವಹಿಸಿದ್ದರು.