ಸಾರಾಂಶ
ರಥ ಬೀದಿಯಲ್ಲಿ ಎಲ್ಲ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಿ(ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮಂಗಳೂರು ಬಜಪೆ ಕಡೆಯಿಂದ ಕಟೀಲಿಗೆ ಬರುವ ವಾಹನಗಳು ಮಲ್ಲಿಗೆಯಂಗಡಿ ಕ್ರಾಸ್ನಿಂದ ಏಕಮುಖವಾಗಿ ಚಲಿಸಿ, ಗಿಡಿಗೆರೆ ರಸ್ತೆ ಮೂಲಕ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರಬೇಕು. ಕಟೀಲಿನಿಂದ ಮಂಗಳೂರು ಕಡೆಗೆ ಹೋಗುವ ಎಲ್ಲ ವಾಹನಗಳು ದೇವಸ್ಥಾನದ ಪದವಿ ಪೂರ್ವ ಕಾಲೇಜು ಮೈದಾನದ ಮೂಲಕ ಬ್ಯಾಂಕ್ ಆಫ್ ಬರೋಡಾ ಎದುರುಗಡೆ ರಸ್ತೆಯಲ್ಲಿ ಚಲಿಸಿ ಬಜಪೆ-ಮಂಗಳೂರು ಕಡೆಗೆ ಸಂಚರಿಸಬೇಕು. ಉಲ್ಲಂಜೆ ರಸ್ತೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಮತ್ತು ಮಲ್ಲಿಗೆಯಂಗಡಿಯಿಂದ ಕಟೀಲು/ಮಂಗಳೂರು ಕಡೆಗೆ ಹೋಗುವ ವಾಹನಗಳು ಮಲ್ಲಿಗೆಯಂಗಡಿ ಜಂಕ್ಷನ್ನಿಂದ ಗಿಡಿಗೆರೆ ರಸ್ತೆಗೆ ಏಕಮುಖವಾಗಿ ಚಲಿಸಿ ಕಟೀಲು ಕಾಲೇಜು ಮುಖ್ಯ ರಸ್ತೆಯನ್ನು ಸೇರಬೇಕು.
ಕಾರು ಹಾಗೂ ಇತರ ವಾಹನಗಳಿಗೆ ಪದವಿ ಪೂರ್ವ ಕಾಲೇಜು ಮೈದಾನ, ಸಿದ್ಧ ಪ್ರದೇಶಗಳಲ್ಲಿ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ರಥ ಬೀದಿಯಲ್ಲಿ ಎಲ್ಲ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಿ(ವಾಹನ ಪೂಜೆಗೆ ಸಂಬಂಧಿಸಿದ ವಾಹನಗಳನ್ನು ಹೊರತುಪಡಿಸಿ) ಆದೇಶಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.;Resize=(128,128))
;Resize=(128,128))
;Resize=(128,128))
;Resize=(128,128))