ಆಪರೇಷನ್ ಸಿಂದೂರ : ತುಂಗಭದ್ರಾ ಜಲಾಶಯ, ಹಂಪಿಯಲ್ಲಿ ಭಾರೀ ಭದ್ರತೆಪಾಕಿಸ್ತಾನದ ಉಗ್ರರ ಅಡಗು ತಾಣಗಳ ಮೇಲೆ ಭಾರತ ಆಪರೇಷನ್ ಸಿಂದೂರ ನಡೆಸಿದ ಬಳಿಕ ಹಂಪಿ, ತುಂಗಭದ್ರಾ ಜಲಾಶಯ ಸೇರಿದಂತೆ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ವಿಜಯನಗರ ಪೊಲೀಸ್ ಇಲಾಖೆಯಿಂದ ಎಲ್ಲೆಡೆ ತಪಾಸಣೆ ನಡೆಸಲಾಗುತ್ತಿದೆ.