ಆಧುನಿಕ ಯುಗದಲ್ಲಿ ರೈತರು ಎಷ್ಟೇ ಕಷ್ಟ ಬಂದರೂ ಕೃಷಿ ಕ್ಷೇತ್ರ ಮರೆತಿಲ್ಲ. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರ ಕಷ್ಟಕ್ಕೆ ನೆರವಾಗಬೇಕಿದೆ ಎಂದು ಮಲ್ಲನಕೆರೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ತಿಳಿಸಿದರು.
ಪಾಲಕರು ಆಂಗ್ಲ ಮಾಧ್ಯಮಕ್ಕೆ ಮಾರುಹೋಗದೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿದಾಗ ಕನ್ನಡ ಭಾಷಾಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ನ್ಯಾಯವಾದಿ ಎಂಎಂಜೆ ಶರತ್ ಚಂದ್ರ ಅಭಿಪ್ರಾಯಪಟ್ಟರು.