• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
27ರಂದು ರೈತರ ಸಮಾವೇಶ
ಡಿ. 27ರಂದು ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ನಡೆಯಲಿರುವ ರೈತ ದಿನಾಚರಣೆ, ರೈತರ ಸಮಾವೇಶ ಹಾಗೂ ಸನ್ಮಾನ ಕಾರ್ಯಕ್ರಮದ ಪೋಸ್ಟರ್‌ ಬಿಡುಗಡೆಗೊಳಿಸಿ ಮಾತನಾಡಿ, ಇದೊಂದು ಅದ್ಭುತ ಕಾರ್ಯಕ್ರಮ ಆಗಿದೆ. ರೈತರನ್ನು ಒಗ್ಗೂಡಿಸುವ ಕಾರ್ಯ ಇದಾಗಿದೆ. ಜಿಲ್ಲೆಯ ಹಳ್ಳಿ, ಹಳ್ಳಿಗೆ ತೆರಳಿ ಸಮಾವೇಶದ ಬಗ್ಗೆ ತಿಳಿಯಪಡಿಸುತ್ತಿರುವುದು ಉತ್ತಮ ಕೆಲಸವಾಗಿದೆ.
ಹಂಪಿ ಕಮಲ ಮಹಲ್‌ ಆವರಣದಲ್ಲಿ ಶ್ರೀಗಂಧದ ಮರ ಕಳವು
ವಿಶ್ವವಿಖ್ಯಾತ ಹಂಪಿಯ ಕಮಲ ಮಹಲ್‌ ಆವರಣದಲ್ಲಿ ಬೆಳೆದು ನಿಂತಿದ್ದ ಶ್ರೀಗಂಧದ ಮರವನ್ನು ಕಳ್ಳರು ಶುಕ್ರವಾರ ತಡ ರಾತ್ರಿ ಕಳವು ಮಾಡಿಕೊಂಡು ಹೋಗಿದ್ದಾರೆ. ಮರಗಳ್ಳತನ ಕೇಂದ್ರ ಪುರಾತತ್ವ ಇಲಾಖೆಯ ಸೆಕ್ಯೂರಿಟಿ ಗಾರ್ಡ್‌ಗಳ ಕಣ್ಣಿಗೂ ಬಿದ್ದಿಲ್ಲ. ಇಲ್ಲಿ ಸಿಸಿ ಕ್ಯಾಮೆರಾ ಕಾರ್ಯನಿರ್ವಹಿಸುತ್ತಿಲ್ಲ.
ವಿಜಯನಗರ ಕಾಲುವೆಗಳಿಗೆ ನೀರು, ರೈತರ ಪ್ರತಿಭಟನೆ ಅಂತ್ಯ
ಹೊಸಪೇಟೆ ರೈತ ಸಂಘದ ನೇತೃತ್ವದಲ್ಲಿ ಆರಂಭಿಸಲಾಗಿದ್ದ ಮೂರು ದಿನಗಳ ಪ್ರತಿಭಟನಾ ಧರಣಿ ಶನಿವಾರ ಅಂತ್ಯವಾಗಿದೆ. ಪುರಾತನ ವಿಜಯನಗರ ಕಾಲುವೆಗಳಿಗೆ ವರ್ಷದ ೧೧ ತಿಂಗಳ ಕಾಲ ನೀರು ಹರಿಸಬೇಕು. ಈಗ ಜನವರಿ 16ರಿಂದ ಮೇ 31ರ ವರೆಗೆ ನೀರು ಹರಿಸಿ ಬೆಳೆಗಳನ್ನು ಉಳಿಸಬೇಕು ಎಂದು ಪ್ರತಿಭಟನೆ ಆರಂಭಿಸಿದ್ದರು.ಅಪರ ಜಿಲ್ಲಾಧಿಕಾರಿ ಅನುರಾಧಾ ಜಿ. ಅವರು ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಮನವರಿಕೆ ಮಾಡಿದ ಬಳಿಕ ಸ್ಥಗಿತಗೊಳಿಸಲಾಯಿತು.
ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಮತ್ತೊಂದು ಡ್ರಿಲ್‌ ಪ್ರಕರಣ ಬಯಲಿಗೆ!
ವಿಶ್ವ ಪರಂಪರೆ ತಾಣ ಹಂಪಿಯಲ್ಲಿ ಈಗ ಬರೀ ಸ್ಮಾರಕಗಳಿಗೆ ಡ್ರಿಲ್‌ ಮಾಡಿರುವ ಪ್ರಕರಣಗಳು ಒಂದೊಂದಾಗಿ ಹೊರ ಬರಲಾರಂಭಿಸಿವೆ. ಈಗ ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ಆವರಣದಲ್ಲೇ ಶುದ್ಧ ಕುಡಿಯುವ ನೀರಿನ ಘಟಕದ ನೀರಿನ ಹೊರ ಹರವಿಗಾಗಿ ವಿಜಯನಗರ ಕಾಲದ ಮಂಟಪ ಗೋಡೆಗೆ ಡ್ರಿಲ್‌ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸದ್ಧರ್ಮ ಪೀಠದಲ್ಲಿ ಹಲವು ಅಭಿವೃದ್ಧಿ ಕಾರ್ಯ
ಕೊಟ್ಟೂರು ತಾಲೂಕಿನ ಶ್ರೀ ಸದ್ಧರ್ಮ ಪೀಠದಲ್ಲಿ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ಪೀಠಾರೋಹಣದ ದ್ವಾದಶ ವರ್ಧಂತಿ ಆಚರಣೆ ಕಾರ್ಯಕ್ರಮ ಹಾಗೂ ನೂತನ ಪ್ರಸಾದ ನಿಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಭ್ರಷ್ಟಾಚಾರ ನಿರ್ಮೂಲನೆಗೆ ಬದ್ಧರಾಗಿ
ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ಮಾರಕವಾಗಿದ್ದು, ಇದರ ನಿರ್ಮೂಲನೆಗೆ ಅಧಿಕಾರಿಗಳು ಬದ್ಧರಾಗಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಹೇಳಿದರು. ವಿಜಯನಗರ ಜಿಲ್ಲಾಡಳಿತ ಹಾಗೂ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಜಯನಗರ ಹಿಂದುಳಿದ ಜಿಲ್ಲೆ ಘೋಷಣೆಗಾಗಿ ಸಿಎಂ ಬಳಿ ನಿಯೋಗ
ವಿಜಯನಗರ ನೂತನ ಜಿಲ್ಲೆಯನ್ನು ಹಿಂದುಳಿದ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ಹೋಗುತ್ತೇವೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದ್ದಾರೆ. ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಬಳಿ ಕೆಪಿಟಿಸಿಎಲ್‌ನಿಂದ ₹೯.೧೫ ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ೧೧೦/೧೧ ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.
ಹಂಪಿ ವಿಶ್ವವಿದ್ಯಾಲಯ ವಿರುದ್ಧ ನಿಂದನೆ, ವಿದ್ಯಾರ್ಥಿಗಳಿಂದ ಪ್ರತಿಭಟನೆ
ಹಂಪಿ ಕನ್ನಡ ವಿಶ್ವವಿದ್ಯಾಲಯ ನಕ್ಸಲರನ್ನು ಸೃಷ್ಟಿ ಮಾಡುವ ಕೇಂದ್ರ ಎಂದು ವ್ಯಕ್ತಿಯೋರ್ವ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದು, ವಿದ್ಯಾರ್ಥಿಗಳು ಕೆರಳಿದ್ದಾರೆ. ಹಂಪಿ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅವಹೇಳನ ಮಾಡಿದ ವ್ಯಕ್ತಿ ವಿರುದ್ಧ ಸುಮೊಟೊ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್‌ಗೆ ಜನಾದೇಶ ಇದೆ, ಆಪರೇಷನ್‌ ಕಮಲ ಪ್ರಮೇಯವೇ ಇಲ್ಲ
ರಾಜ್ಯದ ಜನತೆ ಕಾಂಗ್ರೆಸ್‌ಗೆ ಜನಾದೇಶ ನೀಡಿದ್ದಾರೆ. ಹಾಗಾಗಿ ಆಪರೇಷನ್‌ ಕಮಲ ಮಾಡುವ ಪ್ರಮೇಯವೇ ಉದ್ಭವವಾಗುವುದಿಲ್ಲ. ಈ ಸರ್ಕಾರ ಐದು ವರ್ಷ ಪೂರೈಸಲಿ ಎಂದು ನಾನು ತಾಯಿ ಚಾಮುಂಡೇಶ್ವರಿಯಲ್ಲಿ ಬೇಡಿಕೊಳ್ಳುವೆ. ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಖಾಸುಮ್ಮನೆ ಆರೋಪ ಹೊರಿಸಲಾಗುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಹೊಸಪೇಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಹೊಸದಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರು ತಮ್ಮ ನಾಯಕರನ್ನು ಮೆಚ್ಚಿಸಲು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಆಡಿಯೋ ಇದೆ ಎಂದು ಹೇಳುತ್ತಿದ್ದಾರೆ. ಬಿಜೆಪಿಗೆ ಆಪರೇಷನ್‌ ಕಮಲ ಮಾಡಿ, ಈ ಸರ್ಕಾರ ಬೀಳಿಸುವ ದರ್ದು ಇಲ್ಲ ಎಂದು ಹೇಳಿದರು.
ಹಂಪಿಯ ರಸ್ತೆಗಳಿಗೆ ನೀರು ಸಿಂಪರಣೆ!
ವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್‌ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved