• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ್ಯವಿವಾಹ, ದೇವದಾಸಿ ಪದ್ಧತಿ ಇನ್ನೂ ಜೀವಂತ
ಬಳ್ಳಾರಿ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಬಿಡಿಎ ಫುಟ್‍ಬಾಲ್‌ ಸಭಾಂಗಣದಲ್ಲಿ ಬಾಲ್ಯವಿವಾಹ ಮತ್ತು ದೇವದಾಸಿ ಪದ್ಧತಿಯ ತಡೆಗಟ್ಟುವಲ್ಲಿನ ಸವಾಲುಗಳು ಮತ್ತು ಪರಿಹಾರ ಕುರಿತು ಎರಡನೇ ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಚ್. ಪುಷ್ಪಾಂಜಲಿ ದೇವಿ ಉದ್ಘಾಟಿಸಿದರು. ಬಾಲ್ಯವಿವಾಹ, ದೇವದಾಸಿ ಪದ್ಧತಿ ಇನ್ನೂ ಜೀವಂತ ಇರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಅಲ್ಲದೆ ಕಾನೂನು ಬಗ್ಗೆ ಮಾಹಿತಿ ನೀಡಿದರು.
ಕೋವಿಡ್ ಎದುರಿಸಲು ಸನ್ನದ್ಧರಾಗಿ
ಹರಪನಹಳ್ಳಿ ತಾಲೂಕಿನಲ್ಲಿ ಕೋವಿಡ್ ಎದುರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಸೂಚಿಸಿದರು. ವಿವಿಧ ಇಲಾಖೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ ಅವರು, ಇರುವ ಸೌಲಭ್ಯಗಳ ಮಾಹಿತಿ ಪಡೆದರು.
ಸರಿ ಹೊತ್ತಿನಲ್ಲೂ ಹಸಿದು ಬಂದವರಿಗೆ ಅನ್ನ ಹಾಕುವ ಕಾನಾಮಡಗು ದಾಸೋಹ ಮಠ
ಕೂಡ್ಲಿಗಿ ತಾಲೂಕಿನ ಕಾನಾಮಡಗು ಶ್ರೀ ಶರಣಬಸವೇಶ್ವರ ಸ್ವಾಮಿ ರಥೋತ್ಸವ ಡಿ. 22ರಂದು ಸಂಜೆ 4 ಗಂಟೆಗೆ ನಡೆಯಲಿದೆ. ದಾಸೋಹ ಮಠದ ಆರಾಧ್ಯದೈವ ಶ್ರೀ ಶರಣಬಸವೇಶ್ವರ ಸ್ವಾಮಿಯ ಸುಂದರ ರಥೋತ್ಸವ ಕಾರ್ತೀಕ ಮಾಸದಲ್ಲಿ ನಡೆಯುವುದು ಈ ಭಾಗದಲ್ಲಿ ಅಪರೂಪವೇ ಸರಿ. ಈ ಭಾಗದ ರೈತರು, ಭಕ್ತರು ತಮ್ಮ ಜಮೀನುಗಳಲ್ಲಿ ಬೆಳೆದ ಮೊದಲ ಫಸಲು ಇಲ್ಲಿಯ ದಾಸೋಹಮಠಕ್ಕೆ ತಂದು ಅರ್ಪಿಸುತ್ತಾರೆ.
ಅನಗತ್ಯವಾಗಿ ಅರ್ಜಿ ವಿಲೇವಾರಿ ವಿಳಂಬ ಮಾಡಿದರೆ ಕ್ರಮ
ಹಗರಿಬೊಮ್ಮನಹಳ್ಳಿ ಪಟ್ಟಣದ ಆಡಳಿತ ಸೌಧದಲ್ಲಿ ಬುಧವಾರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಕೆಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಯಾವುದೇ ಅರ್ಜಿ ಅನಗತ್ಯ ವಿಳಂಬ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಎಚ್ಚರಿಸಿದರು. ಇದಕ್ಕೂ ಮುನ್ನ ಪಟ್ಟಣದಲ್ಲಿ ಸೈಕಲ್‌ ಸವಾರಿ ನಡೆಸಿ, ವೀಕ್ಷಿಸಿದರು.
ಸಮಾಜವಾದ, ಧರ್ಮ ನಿರಪೇಕ್ಷತೆ ನಂಬಿದ ಡಾ.ಅಂಬೇಡ್ಕರ್
ಕಳೆದ ಹೊಸ ಸಂಸತ್ತಿನ ಭವನ ಉದ್ಘಾಟನೆ ಸಮಯದಲ್ಲಿ ಹಂಚಿದ ಸಂವಿಧಾನ ಪ್ರತಿಗಳಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಎರಡು ಪದ ತೆಗೆದುಹಾಕಿದ್ದಾರೆ. ಇದನ್ನು ನಾವು ಸೂಕ್ಷ್ಮವಾಗಿ ಗಮನಿಸಬೇಕು.
ಸಂತೆ ಮಾರುಕಟ್ಟೆ ಕಾಮಗಾರಿ ನನೆಗುದಿಗೆ, ಜನರ ಆಕ್ರೋಶ
ಹರಪನಹಳ್ಳಿ ಪಟ್ಟಣದ ಪುರಸಭೆ ಹಿಂಭಾಗ ನಿರ್ಮಿಸುತ್ತಿರುವ ದಿನವಹಿ, ವಾರದ ಸಂತೆ ನಿರ್ಮಾಣ ಕಾಮಗಾರಿ ಅಪೂರ್ಣಗೊಂಡು ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದೆ. ಪುರಸಭೆ ವತಿಯಿಂದ ₹2.75 ಕೋಟಿಗೆ ಗುತ್ತಿಗೆದಾರರಿಗೆ ಟೆಂಡರ್‌ ನೀಡಲಾಗಿತ್ತು. 2022 ಸೆ. 7ರಂದು ಭೂಮಿಪೂಜೆ ನೆರವೇರಿಸಲಾಗಿತ್ತು. ಆದರೆ 9 ತಿಂಗಳಿಂದ ಕಾಮಗಾರಿ ನಡೆದಿಲ್ಲ. ಸಾರ್ವಜನಿಕರಿಗೆ ತರಕಾರಿ ಖರೀದಿಗೆ 2-3 ಕಿಲೋಮೀಟರ್ ದೂರ ಹೋಗಬೇಕಿದ್ದು, ಕೂಡಲೇ ಕಾಮಗಾರಿ ಮುಗಿಸುವಂತೆ ಆಗ್ರಹಿಸಿದ್ದಾರೆ.
ಹೋರಾಟಗಾರರು ಸಮಾಜದ ಒಂದು ಭಾಗ
ಹೋರಾಟಗಾರರು ಸಮಾಜದ ಒಂದು ಭಾಗ ಎಂದು ಚಿತ್ರದುರ್ಗದ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು. ಅವರು ಹರಪನಹಳ್ಳಿ ಪಟ್ಟಣದ ಹೊರವಲಯದ ಸಮತಾ ರೆಸಾರ್ಟ್ ಸಭಾಂಗಣದಲ್ಲಿ ಸಾಮೂಹಿಕ ಸಂಘಟನೆಗಳ ಹೋರಾಟ ಸಮಿತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಜನಪರ ಚಳವಳಿ ಹೋರಾಟಗಾರ ಪುಣಬಗಟ್ಟ ಎಸ್. ನಿಂಗಪ್ಪ ಅವರ ನುಡಿ-ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯರು ಪುಣಬಗಟ್ಟ ಎಸ್. ನಿಂಗಪ್ಪ ಅವರ ಸೇವೆ ಸ್ಮರಿಸಿದರು.
ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಶರಣರು
ಹೂವಿನಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿ ಮಠದ ಜಂಗಮ ಕ್ಷೇತ್ರದಲ್ಲಿ ಮೈಲಾರ ಬಸವ ಲಿಂಗ ಶರಣರ ಸ್ಮರಣೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಡವರು ದೇವಸ್ಥಾನಗಳನ್ನು ನಿರ್ಮಿಸಲು ಅಸಾಧ್ಯದ ಮಾತು. ಆದ್ದರಿಂದ ಅಂದು ಬಸವಣ್ಣನವರು ತಮ್ಮ ಮನದಲ್ಲೇ ದೇಗುಲದ ಪರಿಕಲ್ಪನೆಯನ್ನು ಮೂಡಿಸಿದ್ದಾರೆ. ಅನುಭವ ಮಂಟಪದ ಮೂಲಕ ಸಾಮಾಜಿಕ ಕ್ರಾಂತಿ ಮಾಡಿರುವ ಅವರು, ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದ್ದಾರೆ ಎಂದು ಹೇಳಿದರು.
9 ವಿವಿಗಳಿಗೆ ಪಠ್ಯವಾದ ಅರುಣ್ ಜೋಳದಕೂಡ್ಲಿಗಿ ಬರೆಹ
ಕಲಬುರಗಿಯ ಡಾ. ಅಂಬೇಡ್ಕರ್ ಕಲಾ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅರುಣ್ ಜೋಳದಕೂಡ್ಲಿಗಿ ಅವರು ಬರೆದ ಬರೆಹಗಳು 9 ವಿಶ್ವವಿದ್ಯಾಲಯಗಳಲ್ಲಿ ಪಠ್ಯಗಳಾಗಿವೆ! ಅರುಣ್ ತನ್ನ ಅಜ್ಜಿಯ ಮಹದಾಸೆಯನ್ನು ಈಡೇರಿಸುವ ಸಲುವಾಗಿ ಸ್ನಾತಕ್ಕೋತ್ತರ ಪದವಿ ಪಡೆದು 12 ಮಹತ್ತರ ಕೖತಿಗಳನ್ನು ರಚಿಸಿದ್ದಾರೆ.
ಬಡವರಿಗೆ ಸಾಮೂಹಿಕ ವಿವಾಹ ವರದಾನ
ದುಂದುವೆಚ್ಚಗಳಿಗೆ ಕಡಿವಾಣ ಹಾಕಲು ಉಚಿತ ಸಾಮೂಹಿಕ ವಿವಾಹಗಳು ಸಹಕಾರಿಯಾಗಲಿವೆ. ಜೀವನದಲ್ಲಿ ಎದುರಾಗುವ ಏರುಪೇರುಗಳನ್ನು ಎದುರಿಸುವ ಜತೆಗೆ ಸುಖ ದುಃಖಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಮಾದರಿ ಜೀವನ ನಡೆಸಬೇಕು.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • 251
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved