• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದ್ಧರ್ಮ ಪೀಠದಲ್ಲಿ ಹಲವು ಅಭಿವೃದ್ಧಿ ಕಾರ್ಯ
ಕೊಟ್ಟೂರು ತಾಲೂಕಿನ ಶ್ರೀ ಸದ್ಧರ್ಮ ಪೀಠದಲ್ಲಿ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ಪೀಠಾರೋಹಣದ ದ್ವಾದಶ ವರ್ಧಂತಿ ಆಚರಣೆ ಕಾರ್ಯಕ್ರಮ ಹಾಗೂ ನೂತನ ಪ್ರಸಾದ ನಿಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಭ್ರಷ್ಟಾಚಾರ ನಿರ್ಮೂಲನೆಗೆ ಬದ್ಧರಾಗಿ
ದೇಶದ ಅಭಿವೃದ್ಧಿಗೆ ಭ್ರಷ್ಟಾಚಾರ ಮಾರಕವಾಗಿದ್ದು, ಇದರ ನಿರ್ಮೂಲನೆಗೆ ಅಧಿಕಾರಿಗಳು ಬದ್ಧರಾಗಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಹೇಳಿದರು. ವಿಜಯನಗರ ಜಿಲ್ಲಾಡಳಿತ ಹಾಗೂ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಜಯನಗರ ಹಿಂದುಳಿದ ಜಿಲ್ಲೆ ಘೋಷಣೆಗಾಗಿ ಸಿಎಂ ಬಳಿ ನಿಯೋಗ
ವಿಜಯನಗರ ನೂತನ ಜಿಲ್ಲೆಯನ್ನು ಹಿಂದುಳಿದ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಬೇಕು ಎಂದು ಮನವಿ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ನಿಯೋಗ ಹೋಗುತ್ತೇವೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ಹೇಳಿದ್ದಾರೆ. ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಬಳಿ ಕೆಪಿಟಿಸಿಎಲ್‌ನಿಂದ ₹೯.೧೫ ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ೧೧೦/೧೧ ಕೆವಿ ವಿದ್ಯುತ್ ಉಪಕೇಂದ್ರ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.
ಹಂಪಿ ವಿಶ್ವವಿದ್ಯಾಲಯ ವಿರುದ್ಧ ನಿಂದನೆ, ವಿದ್ಯಾರ್ಥಿಗಳಿಂದ ಪ್ರತಿಭಟನೆ
ಹಂಪಿ ಕನ್ನಡ ವಿಶ್ವವಿದ್ಯಾಲಯ ನಕ್ಸಲರನ್ನು ಸೃಷ್ಟಿ ಮಾಡುವ ಕೇಂದ್ರ ಎಂದು ವ್ಯಕ್ತಿಯೋರ್ವ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದು, ವಿದ್ಯಾರ್ಥಿಗಳು ಕೆರಳಿದ್ದಾರೆ. ಹಂಪಿ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅವಹೇಳನ ಮಾಡಿದ ವ್ಯಕ್ತಿ ವಿರುದ್ಧ ಸುಮೊಟೊ ಕೇಸ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.
ಕಾಂಗ್ರೆಸ್‌ಗೆ ಜನಾದೇಶ ಇದೆ, ಆಪರೇಷನ್‌ ಕಮಲ ಪ್ರಮೇಯವೇ ಇಲ್ಲ
ರಾಜ್ಯದ ಜನತೆ ಕಾಂಗ್ರೆಸ್‌ಗೆ ಜನಾದೇಶ ನೀಡಿದ್ದಾರೆ. ಹಾಗಾಗಿ ಆಪರೇಷನ್‌ ಕಮಲ ಮಾಡುವ ಪ್ರಮೇಯವೇ ಉದ್ಭವವಾಗುವುದಿಲ್ಲ. ಈ ಸರ್ಕಾರ ಐದು ವರ್ಷ ಪೂರೈಸಲಿ ಎಂದು ನಾನು ತಾಯಿ ಚಾಮುಂಡೇಶ್ವರಿಯಲ್ಲಿ ಬೇಡಿಕೊಳ್ಳುವೆ. ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಖಾಸುಮ್ಮನೆ ಆರೋಪ ಹೊರಿಸಲಾಗುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಹೊಸಪೇಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಹೊಸದಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರು ತಮ್ಮ ನಾಯಕರನ್ನು ಮೆಚ್ಚಿಸಲು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಆಡಿಯೋ ಇದೆ ಎಂದು ಹೇಳುತ್ತಿದ್ದಾರೆ. ಬಿಜೆಪಿಗೆ ಆಪರೇಷನ್‌ ಕಮಲ ಮಾಡಿ, ಈ ಸರ್ಕಾರ ಬೀಳಿಸುವ ದರ್ದು ಇಲ್ಲ ಎಂದು ಹೇಳಿದರು.
ಹಂಪಿಯ ರಸ್ತೆಗಳಿಗೆ ನೀರು ಸಿಂಪರಣೆ!
ವಿಶ್ವವಿಖ್ಯಾತ ಹಂಪಿಯ ರಸ್ತೆಗಳಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಟ್ಯಾಂಕರ್‌ ಬಳಸಿ ನೀರು ಸಿಂಪರಣೆ ಮಾಡುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಈ ಕಾರ್ಯ ಮಾಡಲಾಗುತ್ತಿದೆ. ಹಂಪಿ ರಸ್ತೆಗಳಲ್ಲಿ ಧೂಳು ಏಳುತ್ತಿರುವ ಹಿನ್ನೆಲೆಯಲ್ಲಿ ದೇಶ-ವಿದೇಶಿ ಪ್ರವಾಸಿಗರಿಗೆ ತಿರುಗಾಡಲು ತೊಂದರೆಯಾಗುತ್ತಿದ್ದು, ಇದನ್ನರಿತು ಈಗ ಪ್ರಾಧಿಕಾರ ನೀರು ಸಿಂಪರಣೆ ಮೊರೆ ಹೋಗಿದೆ.
ಪೊಲೀಸ್ ಸಮವಸ್ತ್ರಕ್ಕಿದೆ ಗೌರವ, ರಕ್ಷಣೆ
ವಿಜಯನಗರ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಡಿಎಆರ್ ಹೊಸ ಪರೇಡ್ ಮೈದಾನದಲ್ಲಿ ಶನಿವಾರ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಿತು. ಭಾಗವಹಿಸಿದ್ದ ಗಣ್ಯರು ಪೊಲೀಸ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು.
ಕುಡಿಯುವ ನೀರಿಗಾಗಿ ಪ್ರತಿಭಟನೆ
ಕುಡಿಯುವ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ಮಹಿಳೆಯರು ಶನಿವಾರ ಕುರುಗೋಡು ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಐದು ದಿನಗಳಿಂದ ನೀರು ಸರಬರಾಜು ಮಾಡದ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ದಿನದಿಂದ ದಿನಕ್ಕೆ ಬಿಸಿಲು ಹೆಚ್ಚುತ್ತಿರುವುದರಿಂದ ಜನರು ಪರಿತಪಿಸುವಂತಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಮತ್ತು ಪುರಸಭೆ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನೆನಿರತರು ಆರೋಪ ಮಾಡಿದರು.
ಅಕ್ಟೋಬರ್‌ನಲ್ಲೇ ಬೇಸಿಗೆ ನೆನಪಿಸುವ ಕೆರೆಗಳು!
ಕೂಡ್ಲಿಗಿ ತಾಲೂಕಿನಲ್ಲಿ 80ಕ್ಕೂ ಹೆಚ್ಚು ಕೆರೆ, ಕಟ್ಟೆಗಳಿದ್ದು, ಪ್ರತಿವರ್ಷ ಜನವರಿ, ಫೆಬ್ರುವರಿ ತಿಂಗಳಲ್ಲಿ ನೀರು ಖಾಲಿಯಾಗುತ್ತಿದ್ದವು. ಆದರೆ ಈ ಬಾರಿ ಈಗಲೇ ಖಾಲಿಯಾಗುತ್ತಿದ್ದು, 50 ವರ್ಷಗಳ ಹಿಂದಿನ ಬರ ನೆನಪು ಆಗುತ್ತಿದೆ. ಅಕ್ಟೋಬರ್‌ನಲ್ಲಿಯೇ ತಾಲೂಕಿನ 75ಕ್ಕೂ ಹೆಚ್ಚು ಕೆರೆಗಳು ನೀರಿಲ್ಲದೇ ಬಣಗುಡುತ್ತಿವೆ. ಇದು ಭೀಕರ ಬರದ ಮುನ್ಸೂಚನೆ. ಈಗಲೇ ಕೆರೆಗಳಲ್ಲಿ ನೀರಿಲ್ಲದಿದ್ದರೆ ಈ ವರ್ಷದ ಬೇಸಿಗೆ ಕಳೆಯುವುದು ಹೇಗೆ ಎಂಬುದು ರೈತರ ಚಿಂತೆ.
ಕೈಕೊಟ್ಟ ಶೇಂಗಾ ಬೆಳೆ, ವಿಜಯನಗರ ಜಿಲ್ಲೆ ರೈತರು ಕಂಗಾಲು
ಈ ಬಾರಿ ಮಳೆ ಕೈಕೊಟ್ಟಿದ್ದರಿಂದ ವಿಜಯನಗರ ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆ ಹಾಳಾಗಿದೆ. ಕೂಡ್ಲಿಗಿ ತಾಲೂಕಿನಲ್ಲೇ 28 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬೆಳೆ ಕೈಕೊಟ್ಟಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಹೆಚ್ಚು ಶೇಂಗಾ ಬೆಳೆಯಲಾಗುತ್ತದೆ. ಆದರೆ ಈ ಬಾರಿ ರೈತರು ಮಳೆ ಇಲ್ಲದೆ ಭಾರಿ ನಷ್ಟ ಅನುಭವಿಸುವಂತಾಗಿದೆ.
  • < previous
  • 1
  • ...
  • 245
  • 246
  • 247
  • 248
  • 249
  • 250
  • 251
  • 252
  • 253
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved