ರೋಗಿಗಳಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳುಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿ ಕಳೆದ ವಾರ ನಿರಂತರವಾಗಿ ಸುರಿದ ಮಳೆ ಹಾಗೂ ಬೀಸಿದ ಶೀತಗಾಳಿಯಿಂದಾಗಿ ಮಕ್ಕಳು, ವೃದ್ಧರಿಗೆ ಇನ್ನಿಲ್ಲದ ಅನಾರೋಗ್ಯ ಸಮಸ್ಯೆಗಳು ಕಾಡಲಾರಂಭಿಸಿವೆ. ಮಳೆ ನಿಂತು ಮೂರ್ನಾಲ್ಕು ದಿನಗಳಾದರೂ ಆಸ್ಪತ್ರೆಗೆ ಬರುವವರ ಸಂಖ್ಯೆ ಕಡಿಮೆಯೇ ಆಗುತ್ತಿಲ್ಲ. ಅದರಲ್ಲೂ ಕೆಮ್ಮು, ನೆಗಡಿ, ಜ್ವರ ಎಂದು ಜಿಲ್ಲಾಸ್ಪತ್ರೆ ರೋಗಿಗಳಿಂದ ತುಂಬಿ ತುಳುಕುತ್ತಿದ್ದು, ಕಳೆದೊಂದು ವಾರದಲ್ಲಿ ಶೇ.20ರಷ್ಟು ಹೊರ ಹಾಗೂ ಒಳ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.