• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರತಿ ಬೆಳಗಿ, ಹೂವು ನೀಡಿ ಪರೀಕ್ಷಾ ಕೇಂದ್ರಕ್ಕೆ ಸ್ವಾಗತ
ಕನ್ನಡಪ್ರಭ ವಾರ್ತೆ ವಿಜಯಪುರ ತಿಕೋಟಾ ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಮೊದಲ ದಿನದ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಹಲವು ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಭಯಮುಕ್ತ ಪರೀಕ್ಷೆ ಎದುರಿಸಲು ವಿಭಿನ್ನ ರೀತಿಯಲ್ಲಿ ಸ್ವಾಗತ ಕೋರಿದ್ದು, ಗಮನ ಸೆಳೆಯಿತು. ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಪ್ರಥಮ ಭಾಷೆ ಕನ್ನಡ ವಿಷಯ ದಿನ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಮುನ್ನ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು.
ಯಮನೂರೇಶ್ವರ ಜಾತ್ರೆಯಲ್ಲಿ ಕಸರತ್ತು ಪ್ರದರ್ಶನ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಾಲೂಕಿನ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ಜಾತ್ರೆಯಂಗವಾಗಿ ಗುರುವಾರ ವಿವಿಧ ಕಸರತ್ತಿನ ಸ್ಪರ್ಧೆ, ಜಂಗೀ ಕುಸ್ತಿ ಗಮನ ಸೆಳೆದವು. ಬೆಳಗ್ಗೆ ಜರುಗಿದ ಭಾರ ಎತ್ತುವ, ವಿವಿಧ ಕಸರತ್ತಿನ ಸ್ಪರ್ಧೆಯಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ಪೈಲ್ವಾನರು ಭಾಗವಹಿ ಶಕ್ತಿ ಪ್ರದರ್ಶಿಸಿದರು. ಉಸುಕಿನ ಚೀಲ ಎತ್ತುವ ಸ್ಪರ್ಧೆಯಲ್ಲಿ ಜೈ ಹನುಮಾನ ಪಾದನಕಟ್ಟೆ ಪ್ರಥಮ, ವಿಠ್ಠಲ ರಾಮಣ್ಣ ಹಡಲಗಿ ದ್ವಿತೀಯ, ಸಂತೋಷ ಜಟ್ಟಿಗಿ ತೃತೀಯ ಸ್ಥಾನ ಪಡೆದುಕೊಂಡರು.
ಮನಸ್ಸನ್ನು ಪರಿವರ್ತಿಸುವ ಶಕ್ತಿ ನಾಟಕ ಕಲೆಗಿದೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಕೆಟ್ಟ ಗುಣಗಳನ್ನು ಬಿಟ್ಟು ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಮನುಷ್ಯನ ಮನಸ್ಸನ್ನು ಪರಿವರ್ತಿಸುವ ಶಕ್ತಿ ನಾಟಕ ಕಲೆಯಲ್ಲಿ ಅಡಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಅಭಿಪ್ರಾಯಪಟ್ಟರು.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಜೈ ಹೋ
ಕನ್ನಡಪ್ರಭ ವಾರ್ತೆ ವಿಜಯಪುರ ಮಾ.21ರಿಂದ ಏ.4 ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ 22,908 ಬಾಲಕರು, 20,168 ಬಾಲಕಿಯರು ಸೇರಿದಂತೆ ಒಟ್ಟು 43,076 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಒಟ್ಟು131 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಟಿ.ಎಸ್.ಕೋಲಾರ ಪರೀಕ್ಷಾ ಪೂರ್ವ ಸಿದ್ಧತೆಯ ಬಗ್ಗೆ ಮಾಹಿತಿ ನೀಡಿದರು.
ಗುಮ್ಮಟನಗರಿಗೆ ಮಾರ್ಚ್‌ನಲ್ಲೇ ಬಿಸಿಲಾಘಾತ
ಕನ್ನಡಪ್ರಭ ವಾರ್ತೆ ವಿಜಯಪುರಮಾರ್ಚ್‌ ತಿಂಗಳು ಆರಂಭವಾಗಿದ್ದೆ ತಡ ಬಿಸಿಲ ಝಳ ಶುರುವಾಗಿದೆ. ರಾಜ್ಯದ ಜನರು ಬಿಸಿಯ ತಾಪಕ್ಕೆ ಹೈರಾಣಾಗಿ ವಿಲವಿಲ ಎನ್ನುತ್ತಿದ್ದಾರೆ. ಅದರಲ್ಲೂ ಈ ಬಾರಿ ಗುಮ್ಮಟ ನಗರಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ ತಾಪಮಾನ ದಾಖಲಾಗಿದ್ದು, ಜನರು ಆತಂಕಕ್ಕೊಳಗಾಗುವಂತೆ ಮಾಡಿದೆ. ಗೋಳಗುಮ್ಮಟ, ವಚನಗುಮ್ಮಟ, ಆಧ್ಯಾತ್ಮಿಕ ನೆಲೆಗಟ್ಟಿನಿಂದ ತನ್ನತ್ತ ಸೆಳೆಯುತ್ತಿದ್ದ ವಿಜಯಪುರ ಇದೀಗ ತಾಪಮಾನಕ್ಕೂ ಹೆಸರಾಗುವಂವತಾಗಿದೆ.
ವೈದ್ಯರ ಜೊತೆ ಫಾರ್ಮಸಿಸ್ಟ್‌ರದ್ದು ಸಮಾನ ಸೇವೆ
ಕನ್ನಡಪ್ರಭ ವಾರ್ತೆ ವಿಜಯಪುರ ದೇಶದ ಅಭಿವೃದ್ಧಿಯಲ್ಲಿ ಆರ್ಥಿಕ, ಆರೋಗ್ಯ, ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರಗಳು ಪ್ರಮುಖವಾಗಿದ್ದು, ಇವುಗಳಲ್ಲಿ ಫಾರ್ಮಸಿ ಮತ್ತು ಮೆಡಿಕೇಶನ್ ಮುಖ್ಯ ಪಾತ್ರ ವಹಿಸುತ್ತವೆ ಎಂದು ರಾಜ್ಯ ಅಕ್ಕ ಮಹಾದೇವಿ ವಿಶ್ವವಿದ್ಯಾಲಯದ ಕುಲಪತಿ ಡಾ.ಶಾಂತಾದೇವಿ ಟಿ. ಹೇಳಿದರು.
ಶರಣರ ವಚನಗಳಿಂದ ಮಹಿಳೆಯರಿಗೆ ಸಮಾನತೆ
ಕನ್ನಡಪ್ರಭ ವಾರ್ತೆ ವಿಜಯಪುರ ೧೨ನೇ ಶತಮಾನದಲ್ಲಿ ಶರಣರು ತಮ್ಮ ವಚನಗಳ ಮೂಲಕ ಲೌಕಿಕ, ಅಲೌಕಿಕ ಸನ್ನಡತೆಯಿಂದ ನಡೆಯಲು ಸಂದೇಶ ನೀಡಿದ್ದಾರೆ. ಅದರಲ್ಲಿ ಕಾಯಕ, ದಾಸೋಹ ಶರಣ ವಚನಗಳಿಂದ ವಚನಕಾರ್ತಿಯರಿಗೆ ಸಮಾನತೆಯ ಸನ್ಮಾರ್ಗ ದೊರೆಯುವಂತಾಯಿತು ಎಂದು ಕವಿಯತ್ರಿ ಶಿಕ್ಷಕಿ ದಾಕ್ಷಾಯಣಿ ಬಿರಾದಾರ ಹೇಳಿದರು.
ಹಣ ದುರುಪಯೋಗ, ಕರ್ತವ್ಯ ಲೋಪ: 3 ಪಿಡಿಒಗಳ ಅಮಾನತು
ದೇವರಹಿಪ್ಪರಗಿ: ತಾಲೂಕಿನ ಹರನಾಳ ಗ್ರಾಮ ಪಂಚಾಯಿತಿಯಲ್ಲಿ ನಡೆದ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸಮ್ಮ ದೊಡಮನಿ ಅವರನ್ನು ಅಮಾನತುಗೊಳಿಸಿ ಜಿಪಂ ಸಿಇಒ ರಿಷಿ ಆನಂದ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಅಲ್ಲದೇ, ವಿಜಯಪುರದಲ್ಲಿ ಮಂಗಳವಾರ ನಡೆದ ಸಭೆಗೆ ತಡವಾಗಿ ಆಗಮಿಸಿದ ಕೆರೂಟಗಿ ಮತ್ತು ಹಿಟ್ನಳ್ಳಿ ಹಾಗೂ ಕೊಂಡಗೂಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಅಮಾನತು ಮಾಡಿದ್ದಾರೆ.
ಬಿ-ಖಾತೆ ಉತಾರೆಗಾಗಿ ಪ.ಪಂಗೆ ಮುತ್ತಿಗೆ
ಕನ್ನಡಪ್ರಭ ವಾರ್ತೆ ನಾಲತವಾಡ ಬಿ-ಖಾತೆಯ ಉತಾರೆ ನೀಡುವಂತೆ ಆಗ್ರಹಿಸಿ ಪಟ್ಟಣದ ಜಗದೇವನಗರ ನಿವಾಸಿಗಳು ಬುಧವಾರ ಬೆಳಗ್ಗೆ ಪಟ್ಟಣ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಟ್ಟಣದ ಜಗದೇವ ನಗರದ ವಾರ್ಡ್ ನಂ.1 ಮತ್ತು 2 ನೇ ವಾರ್ಡ್‌ನಲ್ಲಿ ಸುಮಾರು ನೂರಾರು ಕುಟುಂಬಗಳು ವಾಸಿಸುತ್ತಿದ್ದು, ಸರ್ಕಾರ ಎ ಖಾತೆ ಮತ್ತು ಬಿ ಖಾತೆ ಮಾಡಿಸಿಕೊಳ್ಳಲು ಮೂರು ತಿಂಗಳ ಅವಕಾಶ ನೀಡಿದೆ. ಹೀಗಾಗಿ, ನಮಗೂ ಕೂಡ ಬಿ ಖಾತೆ ಉತಾರ ನೀಡಬೇಕು ಎಂದು ಆಗ್ರಹಿಸಿದರು.
ಬಸವನಾಡಲ್ಲಿ ರಂಗಪಂಚಮಿ ಹೋಳಿ ಸಂಭ್ರಮ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಬಹುವರ್ಷಗಳಿಂದ ಕಳೆಗುಂದಿದ್ದ ಹೋಳಿ ಹಬ್ಬದ ರಂಗಪಂಚಮಿ ಆಚರಣೆಗೆ ಈ ಬಾರಿ ಬಸವೇಶ್ವರ ಸೇವಾ ಸಮಿತಿ ಕಳೆ ತಂದಿದೆ. ಹೋಳಿ ಹಬ್ಬದಂಗವಾಗಿ ಬಸವೇಶ್ವರ ಸೇವಾ ಸಮಿತಿ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯುವ ರಂಗಪಂಚಮಿ ಆಚರಣೆ ಮೂಲಕ ಬಣ್ಣದಾಟಕ್ಕೆ ತೆರೆ ಬಿದ್ದಿತ್ತು. ರಂಗಪಂಚಮಿಯಲ್ಲಿ ಮಕ್ಕಳು, ಯುವಕರು, ಹಿರಿಯರು ಪಾಲ್ಗೊಳ್ಳುವ ಮೂಲಕ ರಂಗಪಂಚಮಿಯ ಬಣ್ಣದಾಟದ ಸಂಭ್ರಮ ಹೆಚ್ಚಿಸಿದರು. ರಂಗಪಂಚಮಿ ಶಾಂತಿಯುತವಾಗಿ ನಡೆಸಲಾಯಿತು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved