30ರೊಳಗೆ ನಾಮಫಲಕಗಳು ಕನ್ನಡದಲ್ಲಿರಬೇಕುಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯಲ್ಲಿರುವ ವಿವಿಧ ಸರ್ಕಾರಿ ಸೇರಿದಂತೆ ಖಾಸಗಿ ಸಂಸ್ಥೆಗಳ ಕಚೇರಿಗಳು, ಶಾಲೆಗಳು, ಆಸ್ಪತ್ರೆ ಹಾಗೂ ಅಂಗಡಿಗಳ ಮುಂಗಟ್ಟುಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕವನ್ನು ಅಳವಡಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಜೊತೆಗೆ ಜಾಗೃತಿ ಜಾಥಾ ನಡೆಸಿದರು.