ವಕ್ಫ್ ನಡೆಯಿಂದ ರೈತ ಸಮುದಾಯ ಆತಂಕಕನ್ನಡಪ್ರಭ ವಾರ್ತೆ ವಿಜಯಪುರ ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ರೈತರು ಬೃಹತ್ ಶೋಭಾ ಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಶೋಭಾ ಯಾತ್ರೆ ಗಾಂಧಿ ಚೌಕ್, ಬಸವೇಶ್ವರ ಚೌಕ್ ಮಾರ್ಗವಾಗಿ ಅಂಬೇಡ್ಕರ ವೃತ್ತದಲ್ಲಿ ಸಾರ್ವಜನಿಕರ ಸಭೆ ನಡೆಸಿ ಒತ್ತಾಯಿಸಿದರು.