• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಂಕ್‌ಗಳ ಬೆಳವಣಿಗೆಗೆ ಗ್ರಾಹಕ, ಷೇರುದಾರರೇ ಕಾರಣ
ಕನ್ನಡಪ್ರಭ ವಾರ್ತೆ ತಾಳಿಕೋಟೆಪಾಲಕರು ಮಕ್ಕಳ ಆರೋಗ್ಯದೆಡೆಗೆ ಲಕ್ಷಕೊಟ್ಟು ಅವರ ಮುಂದಿನ ಶಿಕ್ಷಣಕ್ಕೆ ಒತ್ತುಕೊಡುವುದು ಅಗತ್ಯವಾಗಿದೆ. ಇದರಿಂದ ಮಕ್ಕಳ ಭವಿಷ್ಯ ರೂಪಗೊಳ್ಳುವುದರೊಂದಿಗೆ ಕುಟುಂಬದ ಭವಿಷ್ಯವೂ ರೂಪಗೊಳ್ಳಲಿದೆ ಎಂದು ವಿಜಯಪುರ ಕ್ಷಯರೋಗ ನಿಯತ್ರಂಣ ಘಟಕಾಧಿಕಾರಿ ಎಂ.ಬಿ.ಬಿರಾದಾರ ನುಡಿದರು
ನಾಳೆ 371ಜೆ ಮೀಸಲಾತಿಗೆ ಆಗ್ರಹಿಸಿ ರೈತ ಭಾರತ ಪಕ್ಷದ ಪ್ರತಿಭಟನೆ
ಜಿಲ್ಲೆಗೆ 371ಜೆ ವಿಶೇಷ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಆ.25 ರಂದು ಬೆಳಗ್ಗೆ 10ಕ್ಕೆ ನಗರದ ಗೋಳಗುಮ್ಮಟದ ಗೇಟ್‌ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.
ವಿಶೇಷಚೇತನರಿಗೆ ನೆರವಾಗುವುದು ಎಲ್ಲರ ಕರ್ತವ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ವಿಶೇಷಚೇತನರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (ಬಿಪಿಸಿಎಲ್) ಸಿ.ಎಸ್.ಆರ್ ಯೋಜನೆಯಡಿಯಲ್ಲಿ 80ಕ್ಕೂ ಹೆಚ್ಚು ವಿಶೇಷಚೇತನರಿಗೆ ಕೃತಕ ಅಂಗಾಗಗಳು ಮತ್ತು ಶ್ರವಣ ಸಾಧನಗಳನ್ನು ವಿತರಿಸಿ ಅವರು ಮಾತನಾಡಿದರು. ಅಪಘಾತಗಳು ಮತ್ತು ಆರೋಗ್ಯ ಚಿಕಿತ್ಸೆ ಸಂದರ್ಭಗಳಲ್ಲಿ ಅಂಗವಿಕಲತೆ ಎದುರಾಗುವ ಸಾಧ್ಯತೆಗಳಿದ್ದು, ಇವುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿಶೇಷಚೇತನರ ಕಲ್ಯಾಣಕ್ಕೆ ಸರ್ಕಾರಗಳು ಯೋಜನೆಗಳನ್ನು ರೂಪಿಸುತ್ತವೆ.
ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತಗಳ್ಳತನ ಆರೋಪ
ಕನ್ನಡಪ್ರಭ ವಾರ್ತೆ ಇಂಡಿ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಕಬಳಿಸಿದೆ ಎಂದು ಆರೋಪಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಇಂಡಿ ಅಸೆಂಬ್ಲಿ ಹಾಗೂ ಯುಥ್‌ ಬ್ಲಾಕ್ ಕಾಂಗ್ರೆಸ್, ಬಳ್ಳೊಳ್ಳಿ, ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಹಾಗೂ ಎನ್ಎಸ್ ಯು ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಣ ಸಂಗ್ರಹಿಸಿ ಶವ ಸಾಗಿಸಲು ನೆರವಾದ ಪೊಲೀಸರು
ಕನ್ನಡಪ್ರಭ ವಾರ್ತೆ ಇಂಡಿ ರಾಜಸ್ಥಾನ ಮೂಲದ 14 ವರ್ಷದ ಮಗನನ್ನು ಕಳೆದುಕೊಂಡು ಶವವನ್ನು ತನ್ನೂರಿಗೆ ತೆಗೆದುಕೊಂದು ಹೋಗಲು ಪರದಾಡುತ್ತಿದ್ದ ತಾಯಿಗೆ ನೆರವಾಗುವ ಮೂಲಕ ಇಂಡಿ ಪೊಲೀಸರು ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ.ರಾಜಸ್ಥಾನ ಮೂಲದ ತೇಜಪಾಲ್‌ ಜಗದೀಶ ಎಂಬ ಬಾಲಕ ಕಾಮಾಲೆ ಕಾಯಿಲೆಯಿಂದ ಮೃತಪಟ್ಟಿದ್ದು, ಬಡಕುಟುಂಬವಾಗಿದ್ದರಿಂದ ಮಗನ ಶವ ಸಾಗಿಸಲು ಹಣವಿಲ್ಲದ್ದರಿಂದ ಬಾಲಕನ ತಾಯಿಗೆ ಡಿವೈಎಸ್ಪಿ ಜಗದೀಶ್ ಮಾರ್ಗದರ್ಶನದಲ್ಲಿ ಎಎಸ್ಐ ಎಸ್.ಎಸ್.ತಳವಾರ, ಜಗದೀಶ ನಿಲೂರೆ, ಚಂದ್ರಶೇಖರ ಕಂಬಾರ ಹಾಗೂ ಸ್ಥಳೀಯ ಸುನೀಲಗೌಡ ಬಿರಾದಾರ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಅಂಬ್ಯುಲೆನ್ಸ್‌ನಲ್ಲಿ ಶವವನ್ನು ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿದ್ದಾರೆ.
ಸುವರ್ಣ ಕನ್ನಡಿಗ ಪ್ರಶಸ್ತಿ ಪುರಸ್ಕೃತ ಡಾ.ಅಶೋಕಕುಮಾರಗೆ ಸನ್ಮಾನ
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸುವರ್ಣ ಕನ್ನಡಿಗ-2024 ಪ್ರಶಸ್ತಿ ಪುರಸ್ಕೃತ ಡಾ.ಅಶೋಕಕುಮಾರ ರಾ.ಜಾಧವ ಅವರಿಗೆ ಕನ್ನಡಪ್ರಭದಲ್ಲಿ ಪ್ರಕಟವಾದ ವಿಶೇಷ ಲೇಖನದ ಫೋಟೋ ಪ್ರೇಮ್‌ ನೀಡಿ ಗೌರವಿಸಿ ಸನ್ಮಾನಿಸಲಾಯಿತು.
ಪೊಲೀಸರಿಗೆ ಆರೋಗ್ಯ ಕಾಳಜಿ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ದಿನದ 24 ಗಂಟೆಯೂ ಸಾರ್ವಜನಿಕರ ರಕ್ಷಣೆಯಲ್ಲಿ ತೊಡಗಿರುವ ಪೊಲೀಸರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುವುದು ಅತ್ಯವಶ್ಯವಾಗಿದೆ ಎಂದು ಐಆರ್‌ಬಿ ಪೊಲೀಸ್ ಬಟಾಲಿಯನ್ ಕಮಾಂಡೆಂಟ್ ಪ್ರಸನ್ನಕುಮಾರ ಹೇಳಿದರು.
ಗುರುಸ್ಪಂದನದಲ್ಲಿ ಶಿಕ್ಷಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಶಿಕ್ಷಕರ ಸೇವೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಗುರುಸ್ಪಂದನಾ ಕಾರ್ಯಕ್ರಮ ಅಖಂಡ ತಾಲೂಕಿನಲ್ಲಿ ಏಳು ಹಂತಗಳಲ್ಲಿ ಆಯೋಜಿಸಿದೆ. ಶಿಕ್ಷಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು.
ಸಮಾಜದಲ್ಲಿ ಸಮಾನತೆ ಸಾರಿದ ಕ್ರಾಂತಿಕಾರಿ
ಕನ್ನಡಪ್ರಭ ವಾರ್ತೆ ವಿಜಯಪುರ ಉಳುವವನೇ ಭೂಮಿಯ ಒಡೆಯ ಎಂಬ ಕ್ರಾಂತಿಕಾರಿ ಕಾನೂನಿನ ಮೂಲಕ ಸಮಾಜದಲ್ಲಿ ಸಮಾನತೆ ಸಾಧಿಸಿದ ಮಹಾನ್ ನಾಯಕ ದಿ.ಡಿ.ದೇವರಾಜ ಅರಸು ಎಂದು ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಶಿಕ್ಷಣ ನಿಕಾಯದ ಡೀನ್ ಪ್ರೊ.ಸಕ್ಪಾಲ್ ಹೂವಣ್ಣ ಹೇಳಿದರು.
ರಾಜ್ಯದಲ್ಲಿ ಸಮಿತಿಗಳಿಂದ ಜಿಲ್ಲಾವಾರು ಪ್ರಚಾರ
ಕನ್ನಡಪ್ರಭ ವಾರ್ತೆ ವಿಜಯಪುರ ಈ ಬಾರಿ ಎಐಸಿಸಿ ಹಾಗೂ ಕೆಪಿಸಿಸಿಯಿಂದಲೇ ಪ್ರಚಾರ ಸಮಿತಿಯನ್ನು ರಚನೆ ಮಾಡಲಾಗಿದೆ. ರಾಜ್ಯಮಟ್ಟದ ಉಪಾಧ್ಯಕ್ಷರ, ಕೋ-ಆರ್ಡಿನೇಟರ್ ಮಾಡಿಕೊಳ್ಳಲಾಗಿದೆ. ಇದೀಗ ಜಿಲ್ಲಾ ಸಮಿತಿ ರಚನೆ, ಬ್ಲಾಕ್ ಸಮಿತಿ ರಚನೆ, ಬೂತ್ ಮಟ್ಟದ ಸಮಿತಿ ರಚನೆ ಮಾಡಲಿದ್ದೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved