ಪ್ರವಾಹ ವೇಳೆ ಜನರ ಕಷ್ಟಕ್ಕೆ ಸ್ಪಂದಿಸಿದ್ದೇನೆಕನ್ನಡಪ್ರಭ ವಾರ್ತೆ ವಿಜಯಪುರ ಸೆಪ್ಟೆಂಬರ್ನಲ್ಲಿ ಸುರಿದ ಮಳೆಗೆ ಇಂಡಿ ಭಾಗದಲ್ಲಿ ಸಾಕಷ್ಟು ಹಾನಿಯಾಗಿದೆ. ಹಾಗಾಗಿ ನಾನು ಸೆ.26ರಿಂದ ಅ.1ರವರೆಗೆ ಬೆಳಗ್ಗೆಯಿಂದ ಸಂಜೆಯವರೆಗೆ ನನ್ನ ಭಾಗದ 12 ಗ್ರಾಮಗಳಿಗೆ ಭೇಟಿ ನೀಡಿದ್ದು, ಸಂತ್ರಸ್ತರಿಗೆ, ರೈತರಿಗೆ ಧೈರ್ಯ ತುಂಬಿದ್ದೇನೆ. ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಕೊಡಿಸುವ ಕೆಲಸ ಮಾಡಿದ್ದೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.