• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿತ್ತೂರು ಸೈನಿಕ ಶಾಲೆಗೆ ಎಕ್ಸಲಂಟ್‌ನ ೭೪ ವಿದ್ಯಾರ್ಥಿಗಳ ಆಯ್ಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿವರ್ಷ ರಾಜ್ಯದಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ಸೈನಿಕ, ಕಿತ್ತೂರು, ನವೋದಯ, ಆರ್‌ಎಂಎಸ್ ಸೇರಿ ಹತ್ತಾರು ಶಾಲೆಗಳಿಗೆ ಆಯ್ಕೆಯಾಗುವ ಎಕ್ಸಲಂಟ್ ಕೋಚಿಂಗ್ ಕ್ಲಾಸಿಸ್ ತನ್ನ ಸಾಧನೆಯನ್ನು ಮುಂದುವರಿಸಿದೆ. ೨೦೨೫-೨೬ ನೇ ಸಾಲಿಗೆ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ಶಾಲೆಯ ೬ನೇ ತರಗತಿಯ ಪ್ರವೇಶಕ್ಕಾಗಿ ನಡೆಸಿದ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ ೭೪ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು,
ಬಿಎಲ್ಡಿಇ-ಟೊಯೊಟಾದ್ಧ್ಯೆ ಉದ್ಯೋಗ ತರಬೇತಿ ಒಡಂಬಡಿಕೆ
ಕನ್ನಡಪ್ರಭ ವಾರ್ತೆ ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಮತ್ತು ಬೆಂಗಳೂರಿನ ಟೊಯೊಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಪ್ರೈ.ಲಿ ನಡುವೆ ಉದ್ಯೋಗ ಮತ್ತು ತರಬೇತಿಯ ಒಡಂಬಡಿಕೆಗೆ ಸಹಿ ಹಾಕಲಾಯಿತು. ನಗರದ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್‌ನಲ್ಲಿ ನಡೆದ ಒಪ್ಪಂದದ ವೇಳೆ ಟೊಯೊಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಪ್ರೈ.ಲಿ ಅಧ್ಯಕ್ಷ ಅಮಿತ ಜೈನ್ ಮತ್ತು ಬಿ.ಎಲ್.ಡಿ.ಇ ಸಂಸ್ಥೆ ಆಡಳಿತಾಧಿಕಾರಿ ವಿಲಾಸ ಬಗಲಿ, ಕಾಲೇಜು ಪ್ರಾಚಾರ್ಯ ಪಿ.ಬಿ.ಕಳಸಗೊಂಡ ಒಡಂಬಡಿಕೆಗೆ ಸಹಿ ಹಾಕಿದರು. ವ್ಯವಸ್ಥಾಪಕ ಶ್ರೀಧರ.ಹೆಚ್.ಎಸ್ ಮತ್ತು ಹಿರಿಯ ಅಧಿಕಾರಿ ಪ್ರವೀಣ ಕುಮಾರ ಇದ್ದರು.
ಬೀದಿದೀಪಗಳ ಆರಂಭದಿಂದ ನಗರದ ವೈಭವ ಹೆಚ್ಚಳ
ಕನ್ನಡಪ್ರಭ ವಾರ್ತೆ ನಿಪ್ಪಾಣಿ ರಾತ್ರಿ ವೇಳೆ ಸಂಚಾರಕ್ಕೆ ಆಗುವ ತೊಂದರೆ ಗಮನದಲ್ಲಿಟ್ಟುಕೊಂಡು ಆಕರ್ಷಕ ಬೀದಿ ದೀಪ ಅಳವಡಿಸಲಾಗಿದೆ. ಕೆಲ ತಾಂತ್ರಿಕ ತೊಂದರೆಯಿಂದ ಬೀದಿ ದೀಪಗಳನ್ನು ಪ್ರಾರಂಭಿಸಲು ಸಮಯ ತೆಗೆದುಕೊಂಡರೂ, ಮುಂದಿನ ದಿನಗಳಲ್ಲಿ ಈ ಬೀದಿ ದೀಪಗಳು ನಗರದ ವೈಭವ ಹೆಚ್ಚಿಸುತ್ತದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.
ಹೋರಾಟಗಾರ ಲಕ್ಷ್ಮೀನಾರಾಯಣ ನಾಗವಾರ ದಲಿತ ಚೇತನ
ಕನ್ನಡಪ್ರಭ ವಾರ್ತೆ ವಿಜಯಪುರದಲಿತ ಜನಾಂಗವನ್ನು ಮೊದಲ ಸಾಲಿಗೆ ತರಬೇಕು, ಶೋಷಿತ ಸಮುದಾಯಗಳಿಗೆ ಎಲ್ಲ ಹಕ್ಕು ಭಾದ್ಯತೆಗಳು ಸಿಗಬೇಕು, ನೀರಿಗೆ ಜಾತಿ ಇಲ್ಲ, ಬೆಳಕಿಗೆ ಜಾತಿ ಇಲ್ಲ, ಗಾಳಿಗೆ ಜಾತಿ ಇಲ್ಲ, ಮನುಷ್ಯ ಜಾತಿ ಒಂದೇ ಎಂದು ಹೋರಾಟದ ಹೆಜ್ಜೆ ಹಾಕಿದವರು ಲಕ್ಷ್ಮೀ ನಾರಾಯಣ್ ನಾಗವಾರ. ಆದ್ದರಿಂದ ಅವರನ್ನು ಸಂಘಟನಾ ಚೇತನ ಎಂದು ಹೇಳಬೇಕು ಎಂದು ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಹೇಳಿದರು.
ದಲಿತ ನಾಯಕ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು : ಮುಖಂಡ ಚಂದ್ರಶೇಖರ ಕೊಡಬಾಗಿ

 ಇದುವರೆಗೂ ಪರಿಶಿಷ್ಠ ಜನಾಂಗದ ಯಾವ ವ್ಯಕ್ತಿಯೂ ಸಿಎಂ ಆಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರ ಇದ್ದರೆ ದಲಿತ ನಾಯಕ ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ದಲಿತ ಮುಖಂಡ ಚಂದ್ರಶೇಖರ ಕೊಡಬಾಗಿ ಒತ್ತಾಯಿಸಿದರು.

ಪಟ್ಟಣದಲ್ಲಿ ಅತ್ಯಾಧುನಿಕ ಮೆಗಾ ಮಾರ್ಕೆಟ್‌ ನಿರ್ಮಾಣ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಹೃದಯಭಾಗದಲ್ಲಿ ಹಳೆ ಮಾರುಕಟ್ಟೆಯನ್ನು ತೆರವುಗೊಳಿಸಿದ ಅದೇ ಜಾಗದಲ್ಲಿ ಇದೀಗ ವಿನೂತನ ಅತ್ಯಾಧುನಿಕ ಸೌಲಭ್ಯಗಳುಳ್ಳ ಬೃಹತ್‌ ಮೆಗಾ ಮಾರ್ಕೆಟ್‌ ನಿರ್ಮಾಣಗೊಳ್ಳಲಿದೆ. ಕಾಮಗಾರಿಗೆ ಫೆ.27ಕ್ಕೆ ಅಡಿಗಲ್ಲು ಸಮಾರಂಭ ನೆರವೇರುತ್ತಿದ್ದು, ಈ ಕಾರ್ಯಕ್ಕೆ ಪಟ್ಟಣದ ಗಣ್ಯ ವ್ಯಾಪಾರಸ್ಥರು, ಉದ್ಯಮಿಗಳು, ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ. ಮೆಗಾ ಮಾರ್ಕೆಟ್‌ ಬಹು ದಿನಗಳ ಜನರ ಕನಸಾಗಿದ್ದು, ಇದೀಗ ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್‌.ನಾಡಗೌಡ (ಅಪ್ಪಾಗಿ) ಅವರು ಈ ಕಾರ್ಯಕ್ಕೆ ಮುಂದಾಗಿದ್ದಾರೆ.
ಜಿಲ್ಲಾ ೨೦ ನೇ ಸಾಹಿತ್ಯ ಸಮ್ಮೇಳನ ಸಂಪನ್ನ
ಕನ್ನಡಪ್ರಭ ವಾರ್ತೆ ವಿಜಯಪುರ ಪೂಜ್ಯರನ್ನು ಸರ್ವಾಧ್ಯಕ್ಷ ಸ್ಥಾನ ಅಲಂಕರಿಸುವಂತೆ, ಸಂಘಟಕರನ್ನು, ಸಾಹಿತಿಗಳನ್ನು, ಸಾಹಿತ್ಯಾರಾಧಕರನ್ನು ಒಂದೇ ಸೂರಿನಡಿ ತಂದು ಹೀಗೂ ಸಮ್ಮೇಳನ ಮಾಡಬಹುದು ಎಂಬುದಕ್ಕೆ ೨೦ ನೇ ಕನ್ನಡ ಸಾಹಿತ್ಯ ಸಮ್ಮೇಳನವೇ ಒಂದು ಉದಾಹರಣೆ ಎಂದು ಸಹಕಾರಿ ಧುರೀಣ ರಮೇಶ ಬಿದನೂರ ಹೇಳಿದರು.
ಜಿಲ್ಲೆಯಲ್ಲಿ ಶ್ರದ್ಧಾಭಕ್ತಿಯ ಮಹಾ ಶಿವರಾತ್ರಿ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಶ್ರದ್ಧಾಭಕ್ತಿಯಿಂದ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ನಗರದ ಶಿವಾಲಯಗಳು ದೇವಸ್ಥಾನಗಳು ಜನಜಂಗುಳಿಯಿಂದ ತುಂಬಿವೆ. ಬೆಳಗ್ಗೆ 6 ಗಂಟೆಯಿಂದಲೇ ದರ್ಶನಕ್ಕೆ ಆಗಮಿಸುತ್ತಿರುವ ಭಕ್ತರು ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ದರ್ಶನ ಪಡೆದರು.
ಹುಣಶ್ಯಾಳ ಕೆರೆಗೆ ಹರಿದು ಬಂದ ಕೃಷ್ಣೆ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಬತ್ತಿದ ಐತಿಹಾಸಿಕ ಕೆರೆಗಳಿಗೆ ಭರ್ತಿ ಭಾಗ್ಯ ಯಾವಾಗ? ಎಂಬ ಶೀರ್ಷಿಕೆ ಅಡಿ ಕನ್ನಡ ಪ್ರಭ ಪತ್ರಿಕೆ ವಿಶೇಷ ವರದಿ ಪ್ರಕಟಿಸಿ ಜನಪ್ರತಿನಿಧಿಗಳ ಗಮನ ಸೆಳೆದಿತ್ತು. ವರದಿಗೆ ಫಲಶೃತಿ ಸಿಕ್ಕಿದ್ದು, ಸಚಿವರು, ಶಾಸಕರು ಅಧಿಕಾರಿಗಳ ಜೊತೆ ಸಭೆ ಮಾಡಿ ಯಾವ ರೀತಿ ನೀರು ಕೊಡಬಹುದು ಎಂದು ಯೋಜನೆಗೆ ಮುಂದಾಗಿದ್ದರು. ಬಳಿಕ ಸ್ಥಳೀಕ ಮುಖಂಡ ಡಾ.ಪ್ರಭುಗೌಡ ಲಿಂಗದಳ್ಳಿ ಚಬನೂರ ನೇತೃತ್ವದಲ್ಲಿ ಗ್ರಾಮಸ್ಥರು ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಎಲ್ಲರ ಒತ್ತಾಯದ ಮೇರೆಗೆ ಇದೀಗ ತಾತ್ಕಾಲಿಕ ಬೂದಿಹಾಳ ಪೀರಾಪುರ ಕಾಲುವೆಯ ಸ್ಕ್ಯಾವರ್ ಕವಾಟ(scaver valve) ಮೂಲಕ ಐತಿಹಾಸಿಕ ಹುಣಶ್ಯಾಳ ಕೆರೆಗೆ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತಿದ್ದು, ಬರಗಾಲದಲ್ಲಿ ನೀರಿನ ಸಮಸ್ಯೆ ಕಾರಣ ಬತ್ತಿ ಹೋಗಿದ್ದ ಹುಣಶ್ಯಾಳ ಕೆರೆಗೆ ಕೃಷ್ಣೆ ಹರಿದು ಬಂದಿದ್ದಾಳೆ.
ಐತಿಹಾಸಿಕ ದೇಗುಲಗಳ ಬಗ್ಗೆ ಅಧ್ಯಯನ ನಡೆಸಿ
ಕನ್ನಡಪ್ರಭ ವಾರ್ತೆ ಸಿಂದಗಿ ಪ್ರಾಚೀನ ಕಾಲದಿಂದಲೂ ಸಿಂದಗಿಯೂ ತನ್ನದೇ ಆದ ಚಾರಿತ್ರಿಕ ಹಿನ್ನಲೆಯನ್ನು ಹೊಂದಿದೆ. ಸಿಂದಗಿ ಬಹು ಸಂಸ್ಕೃತಿಗಳ ತವರೂರು ಎಂದು ಸಿ.ಎಂ.ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ.ಅವರವಿಂದ ಮನಗೂಳಿ ಹೇಳಿದರು.
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved