ದುರ್ಗಾ ಮಾತಾ ದೌಡ್ಗೆ ನಗರದಲ್ಲಿ ಅದ್ಧೂರಿ ಸ್ವಾಗತಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ನವರಾತ್ರಿ ಅಂಗವಾಗಿ 9 ದಿನಗಳ ದುರ್ಗಾಮಾತಾ ದೌಡ್ಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಪ್ರತಿದಿನ ಸ್ವಾಮೀಜಿಯೊಬ್ಬರು ಭಗವಾ ಧ್ವಜ ಹಿಡಿದು ದೌಡ್ ನಡೆಸುತ್ತಾರೆ. ಇನ್ನು, ದೌಡ್ ಸಂಚರಿಸುವ ಮಾರ್ಗಗಳಲ್ಲಿ ರಂಗೋಲಿ ಅಲಂಕಾರ ಮಾಡಿ ಹೂವು ಎರಚಿ, ಮಹಿಳೆಯರು ಆರತಿ ಸ್ವಾಗತಿಸುತ್ತಾರೆ. ಸೋಮವಾರ ಬೆಳಿಗ್ಗೆ ನಗರದ ಶಿವಾಜಿ ವೃತ್ತದಲ್ಲಿ ದೌಡ್ಗೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಸ್ವಾಮೀಜಿಗಳು ಚಾಲನೆ ನೀಡಿದರು.