• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಷೇರುದಾರರೇ ಬ್ಯಾಂಕಿನ ಆಧಾರ ಸ್ತಂಭ
ಕನ್ನಡಪ್ರಭ ವಾರ್ತೆ ಮುದ್ಧೇಬಿಹಾಳ ಪಟ್ಟಣದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ದಿ ಬಾಗವಾನ ಅಲ್ಪಸಂಖ್ಯಾತರ ಕೋ-ಆಪ್ ಕ್ರೆಡಿಟ್ ಸೊಸೈಟಿ ಗ್ರಾಹಕರ ಆರ್ಥಿಕ ಸದೃಢತೆಗೆ ಸಹಕಾರಿಯಾಗಿದೆ. ಷೇರುದಾರರು ಬ್ಯಾಂಕಿನ ಆಧಾರ ಸ್ತಂಭಗಳು. ಸಾಲ ಪಡೆದವರು ಸಕಾಲಕ್ಕೆ ಮರು ಪಾವತಿಸಿ ಬ್ಯಾಂಕ್‌ನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು ಎಂದು ಬ್ಯಾಂಕ್‌ ಅಧ್ಯಕ್ಷ ಪಿಂಟು ಸಾಲಿಮನಿ ಹೇಳಿದರು
ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ, ಅತಿಕ್ರಮಣವನ್ನು 15 ದಿನಗಳ ಕಾಲಮಿತಿಯಲ್ಲಿ ತೆರವುಗೊಳಿಸಲು ಕ್ರಮವಹಿಸಬೇಕು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕಾಲುವೆಯಲ್ಲಿ ಶೇಖರಣೆಯಾಗಿರುವ ಕಸ, ತ್ಯಾಜ್ಯವನ್ನು ತೆಗೆದು ರಾಜಕಾಲುವೆಗಳನ್ನು ಸ್ವಚ್ಛವಾಗಿಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಎಂ.ಬಿ.ಪಾಟೀಲ ಸೂಚಿಸಿದರು.
ಅ.4ರಿಂದ ರಾಜ್ಯದಲ್ಲಿ ಗ್ರಾಪಂ ಸೇವೆ ಸ್ಥಗಿತ
ಕನ್ನಡಪ್ರಭ ವಾರ್ತೆ ವಿಜಯಪುರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿಯ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 4ರಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿ ಕಚೇರಿಗಳನ್ನು ಬಂದ್ ಮಾಡಿ ಅನಿರ್ದಿಷ್ಟ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಸಿ.ಜಿ.ಪಾರೆ ಹೇಳಿದರು.
ಸದಸ್ಯರಿಗೆ ಶೇ.25 ಲಾಭಾಂಶ ನೀಡುವ ಸೊಸೈಟಿ
ಕನ್ನಡಪ್ರಭ ವಾರ್ತೆ ಚಡಚಣ ಹೊರ್ತಿಯ ರೇವಣಸಿದ್ಧೇಶ್ವರ ಕೋ-ಆಪ್‌ ಕ್ರೆಡಿಟ್ ಸೊಸೈಟಿಯು 29 ವರ್ಷಗಳಿಂದ ಸದಸ್ಯರಿಗೆ ಶೇ.25 ರಷ್ಟು ಲಾಭಾಂಶ ನೀಡುವ ವಿಜಯಪುರ ಜಿಲ್ಲೆ ಮತ್ತು ರಾಜ್ಯದಲ್ಲೇ ಮೊದಲ ಸೊಸೈಟಿ ಎಂಬ ಖ್ಯಾತಿಗೆ ಪಾತ್ರವಾಗಿದೆ. ಪ್ರಾಮಾಣಿಕ ಸೇವೆ ಹಾಗೂ ನಿರ್ದೇಶಕ ಮಂಡಳಿ ಮತ್ತು ಗ್ರಾಹಕರ ಸಹಕಾರದಿಂದ ಅತ್ಯುತ್ತಮ ಬೆಳವಣಿಗೆ ಹೊಂದಲು ಕಾರಣವಾಗಿದೆ ಎಂದು ಸೊಸೈಟಿ ಸಂಸ್ಥಾಪಕ-ಅಧ್ಯಕ್ಷ ಅಣ್ಣಪ್ಪ ಖೈನೂರ ಹೇಳಿದರು.
2.10 ವರ್ಷದ ಕುವರಿ ಹೆಸರು ನೋಬೆಲ್ ವರ್ಡ್ ರೆಕಾರ್ಡ್ ಬುಕ್‌ ಸೇರ್ಪಡೆ
ಸಿಂದಗಿ: ಪಟ್ಟಣದ ಅನಿಕೇತನ ಪೂರ್ವ ಪ್ರಾಥಮಿಕ ಶಾಲೆಯ ನರ್ಸರಿ ಓದುತ್ತಿರುವ 2 ವರ್ಷ 10 ತಿಂಗಳದ ವರಣ್ಯಾ ಗುರುರಾಜ ಕುಲಕರ್ಣಿ ಕೇವಲ 53 ಸೆಕಂಡ್‌ಗಳಲ್ಲಿ ದೇಶದ ಎಲ್ಲ ರಾಜ್ಯಗಳು ಮತ್ತು ರಾಜಧಾನಿಗಳ ಹೆಸರುಗಳನ್ನು ಪಟ್ ಅಂತಹೇಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ. ಬಾಲಕಿಗೆ ಇದೀಗ ನೋಬೆಲ್ ವರ್ಡ್ ರೆಕಾರ್ಡ್ ಬುಕ್‌ಗೆ ಸೇರ್ಪಡೆಯಾಗಿದ್ದಾಳೆ. ಈ ಕುವರಿ ಇತ್ತೀಚೆಗೆ ಉತ್ತರ ಪ್ರದೇಶದ ಲಖನೌದ ನಾನ್ ಒಲಂಪಿಕ್ಸ್ ಟೈಮ್ ಯೋಜನೆ ಮಾಡಿದ್ದ ನೋಬೆಲ್ ವರ್ಲ್ಡ್ ರೆಕಾರ್ಡ್ ಆನ್‌ಲೈನ್‌ನಲ್ಲಿ ಭಾಗವಹಿಸಿದ್ದಳು.
ಕೊಚ್ಚಿಹೋದ 31 ವರ್ಷದ ಮಳೆ ದಾಖಲೆ!
ಶಶಿಕಾಂತ ಮೆಂಡೆಗಾರ ಕನ್ನಡಪ್ರಭ ವಾರ್ತೆ ವಿಜಯಪುರಗುಮ್ಮಟ ನಗರಿ ವಿಜಯಪುರದಲ್ಲಿ ಒಂದೇ ದಿನದಲ್ಲಿ 199 ಮಿಮೀ ಮಳೆಯಾಗಿದೆ. ಇದು ಕಳೆದ 31 ವರ್ಷಗಳಲ್ಲಿಯೇ ಅತ್ಯಧಿಕ ಮಳೆ. ಜನಜೀವನ ತತ್ತರಿಸಿದೆ. ಮಳೆಗೆ ಜಿಲ್ಲೆಯ ವಿವಿಧ ಭಾಗಗಳು ಜಲಾವೃತವಾಗಿವೆ. ಜನರು ತತ್ತರಿಸಿ ಹೋಗಿದ್ದಾರೆ. ನಗರ ಜಲಾವೃತವಾಗಿರುವ ದೃಶ್ಯ ಡ್ರೋಣ್‌ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವರುಣನ ರೌದ್ರನರ್ತನ ಅಲ್ಲಿ ಪ್ರದರ್ಶನವಾಗಿದೆ.
ಆರೋಗ್ಯ ಕಾಪಾಡುವ ಪೌರಕಾರ್ಮಿಕ ಸೇವೆ ಅನನ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸ್ವಚ್ಛತೆ, ನೈರ್ಮಲ್ಯ, ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ನಾಗಠಾಣದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಹಮ್ಮಿಕೊಂಡಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗಪಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು.
ಜನರ ಆರೋಗ್ಯಕ್ಕೆ ಪೌರಕಾರ್ಮಿಕರೇ ವೈದ್ಯರು
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಳೆ, ಚಳಿ, ಗಾಳಿ, ಬಿಸಿಲು ಎನ್ನದೆ ನಸುಕಿನ ಜಾವದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಪೌರ ಕಾರ್ಮಿಕರು ನಿಜವಾದ ಕಾಯಕಯೋಗಿಗಳು. ಕೊರೋನಾ ಸಮಯದಲ್ಲಿ ಸಂದಿಗ್ಧದ ಸ್ಥಿತಿಯಲ್ಲಿಯೂ ಜೀವದ ಹಂಗನ್ನು ಸ್ವಚ್ಛತೆ ಮಾಡಿದ್ದು ಶ್ಲಾಘನೀಯ ಎಂದು ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ ಶ್ಲಾಘಿಸಿದರು.
ಗ್ರಾಪಂ-ಎಸ್‌ಡಿಎಂಸಿ ಮಧ್ಯೆ ಕಾಮಗಾರಿ ತಿಕ್ಕಾಟ
ಕನ್ನಡಪ್ರಭ ವಾರ್ತೆ ಚಡಚಣ ತಾಲ್ಲೂಕಿನ ಉಮರಜ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದು ಕೂಡಲೇ ಪೂರ್ಣಗೊಳಿಸುವಂತೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಸೇರಿದಂತೆ ಸದಸ್ಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪ್ರೌಢ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಚಿದಾನಂದ ಭೂಪಾಳಿ, ಶಾಲಾ ಕಾಂಪೌಂಡ್‌, ಆಟದ ಮೈದಾನ ಹಾಗೂ ಶೌಚಾಲಯ ನಿರ್ಮಾಣಕ್ಕೆ ಸುಮಾರು ₹ 56 ಲಕ್ಷ ಮಂಜೂರಾತಿ ದೊರಕಿದೆ.
ಅಪಾಯ ಲೆಕ್ಕಿಸದೇ ಜನರ ಸಂಚಾರ
ತಿಕೋಟಾ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಹಳ್ಳ ಹಾಗೂ ಬಾಂದಾರಗಳು ತುಂಬಿ ಹರಿಯುತ್ತಿದ್ದು, ರೈತರ ತೋಟಗಳಿಗೆ ನೀರು ನುಗ್ಗಿದ್ದರಿಂದ ದ್ರಾಕ್ಷಿ ತೋಟಗಳು ನೀರಲ್ಲೆ ನಿಂತಿವೆ. ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಸಂಗಮನಾಥ ಹಳ್ಳದ ಬಾಂದಾರ ತುಂಬಿ ಅಪಾಯಮಟ್ಟದಲ್ಲಿ ಹರಿಯುತ್ತಿದೆ.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 340
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved