• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಂಚಣಿದಾರರ ತುಟ್ಟಿಭತ್ಯೆ, ಸಮಸ್ಯೆ ನಿವಾರಣೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ಪಿಂಚಣಿದಾರರಿಗೆ ನಿಯಮಿತವಾಗಿ ತುಟ್ಟಿಭತ್ಯೆ ನೀಡುವುದು ಹಾಗೂ ಪಿಂಚಣಿದಾರರ ಸಕಲ ಸಮಸ್ಯೆಗಳನ್ನು ಕೇಂದ್ರ ಸರ್ಕಾರ ನಿವಾರಣೆ ಮಾಡುವಂತೆ ಆಗ್ರಹಿಸಿ ಇಪಿಎಸ್-೯೫ ಪಿಂಚಣಿದಾರರು ನಗರದ ಇಪಿಎಫ್ ಕಚೇರಿ ಎದುರು ಕೇಂದ್ರ ಸರ್ಕಾರದ ನಿವೃತ್ತ ನೌಕರರು ಧರಣಿ ನಡೆಸಿದರು.
ಕಳಪೆ ತೊಗರಿ ಪರಿಹಾರಕ್ಕಾಗಿ ನಾಳೆ ಹೋರಾಟ
ಕನ್ನಡಪ್ರಭ ವಾರ್ತೆ ತಾಳಿಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿಯೇ ರೈತರು ವಾಣಿಜ್ಯ ಬೆಳೆಯನ್ನಾಗಿಸಿಕೊಂಡಿರುವ ತೊಗರಿ ಬೆಳೆಯು ಕಳಪೆ ಬೀಜದಿಂದ ಶೇ.೮೦ ರಷ್ಟು ಹಾನಿಯಾಗಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಡಿ.೯ರಂದು ತಾಳಿಕೋಟೆ ನಗರದಲ್ಲಿ ಸುಮಾರು ೧೦ ರಿಂದ ೧೫ ಸಾವಿರ ರೈತರೊಂದಿಗೆ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಹೇಳಿದರು.
ಅಂಬೇಡ್ಕರ್‌ ಕಟ್ಟಿಕೊಟ್ಟಿರುವ ಭಾರತ ಉಳಿಸಿಕೊಳ್ಳೊಣ
ಕನ್ನಡಪ್ರಭ ವಾರ್ತೆ ವಿಜಯಪುರ ಬಾಬಾಸಾಹೇಬರು ಸದೃಢವಾಗಿ ಕಟ್ಟಿಕೊಟ್ಟಿರುವ ಭಾರತವನ್ನು ಉಳಿಸಿಕೊಳ್ಳಲು ವಿದ್ಯಾರ್ಥಿ ಯುವಜನರು ಸಂಕಲ್ಪ ಮಾಡಬೇಕಾಗಿದೆ. ಬಾಬಾಸಾಹೇಬರು ಹಲವು ದಾಖಲೆಯ ಕೆಲಸಗಳನ್ನು ಮಾಡಿದ್ದಾರೆ. ಅದರಲ್ಲಿ ಮುಖ್ಯವಾಗಿ ದೇಶದಲ್ಲಿ ಪ್ರಥಮ ಬಾರಿಗೆ ಮಹಿಳೆಯರಿಗೆ ಸ್ತ್ರೀ ಸ್ವಾತಂತ್ರ್ಯ ಸಮಾನತೆ ತಂದುಕೊಟ್ಟ ಮಹಾನ್ ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರ ಇಂದಿನ ವಿದ್ಯಾರ್ಥಿ ಯುವ ಜನರಿಗೆ ಆದರ್ಶ ದೀಪವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರ ಹೇಳಿದರು.
ಪೊಲೀಸರ ಬೆನ್ನೆಲುಬಾಗುವಲ್ಲಿ ಗೃಹರಕ್ಷಕರು ಯಶಸ್ವಿ
ಕನ್ನಡಪ್ರಭ ವಾರ್ತೆ ಇಂಡಿ: ಗೃಹರಕ್ಷಕ ದಳದ ಸೇವೆ ಅಮೂಲ್ಯವಾದದ್ದು. ಪೊಲೀಸರಿಗೆ ಬೆನ್ನೆಲುಬಾಗಿ ಸೇವೆ ಸಲ್ಲಿಸುವಲ್ಲಿ ಗೃಹ ರಕ್ಷಕದಳ ಯಶಸ್ವಿಯಾಗಿದೆ ಎಂದು ಇಂಡಿ ಡಿವೈಎಸ್ಪಿ ಎಚ್‌. ಜಗದೀಶ ಹೇಳಿದರು. ಪಟ್ಟಣದ ಡಿವೈಎಸ್ಪಿ ಕಾರ್ಯಾಲಯದ ಸಭಾ ಭವನದಲ್ಲಿ ಜಿಲ್ಲಾ ಗೃಹರಕ್ಷಕ ದಳ ಹಮ್ಮಿಕೊಂಡ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೀವ ರಕ್ಷಣೆ, ಆಸ್ತಿ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಪಾಲಿಸಲು ಗೃಹ ರಕ್ಷಕ ದಳದ ಕೊಡುಗೆ ಮಹತ್ತರವಾಗಿದೆ. ಜಿಲ್ಲೆಯಲ್ಲಿ ಎಲ್ಲ ಘಟಕದ ಗೃಹ ರಕ್ಷಕರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಯತ್ನಾಳ ಬೇಷರತ್‌ ಕ್ಷಮೆಗೆ ಕರವೇ ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಮಾನವ ಕುಲಕ್ಕೆ ಅವಮಾನ ಮಾಡಿದ್ದಾರೆ. ತಕ್ಷಣ ನಾಡಿನ ಜನತೆಗೆ ಬೇಷರತ್ ಆಗಿ ಕ್ಷಮೆ ಕೇಳಬೇಕು ಎಂದು ಕರವೇ ರಾಜ್ಯ ಉಪಾಧ್ಯಕ್ಷ ಎಂ.ಸಿ.ಮುಲ್ಲಾ ಆಗ್ರಹಿಸಿದರು.
ಫೆ.4ಕ್ಕೆ ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮುಂದಿನ ವರ್ಷ ಫೆ.೪ರಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮಾಡಲಾಗುತ್ತಿದ್ದು, ರಾಜ್ಯದ ಇತಿಹಾಸ ಪುಟದಲ್ಲಿಯೇ ಅಚ್ಚಳಿಯದೇ ಇರುವಂತೆ ಅದ್ಭುತವಾಗಿ ಕಾರ್ಯಕ್ರಮ ನಡೆಸಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಹೇಳಿದರು
ತಂತ್ರಾಂಶ ದೋಷಕ್ಕೆ ಬೇಸತ್ತ ವಿದ್ಯಾರ್ಥಿಗಳು
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ತಂತ್ರಾಂಶದಲ್ಲಿರುವ ದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಬಂಜಾರಾ ಕ್ರಾಸ್ ಹತ್ತಿರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಈ ಸಮಯದಲ್ಲಿ ಸಂಬಂಧಪಟ್ಟ ಯಾವ ಅಧಿಕಾರಿಗಳು ಮನವಿ ಸ್ವೀಕಾರ ಮಾಡದಿರುವುದರಿಂದ ಖಾಲಿ ಕುರ್ಚಿಗೆ ಮನವಿ ಸಲ್ಲಿಸಿದರು.
ಕೆಲವರ ರಾಜಕೀಯದಿಂದ ಹಿಂದೆ ಮೀಸಲಾತಿ ಸಿಕ್ಕಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಮೂರೂವರೆ ವರ್ಷಗಳಿಂದ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆದಿದೆ. ಆದರೂ ಸಹ ಯಾವ ಸರ್ಕಾರಗಳೂ ಸ್ಪಂದಿಸದ ಹಿನ್ನೆಲೆಯಲ್ಲಿ ಈ ಬಾರಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶದಲ್ಲಿ ಮತ್ತೆ ಹೋರಾಟ ಹಮ್ಮಿಕೊಳ್ಳಲಾಗಿದೆ. ಡಿ.10ರಂದು ಸಮಾಜದಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಎಂ.ಎಸ್.ರುದ್ರಗೌಡರ ಹೇಳಿದರು.
ದತ್‌ ಸಕ್ಕರೆ ಕಾರ್ಖಾನೆಗೆ ಕನ್ನಡ ಭಾಷೆ ಬಳಸಲು ಆಗ್ರಹ
ಕನ್ನಡಪ್ರಭ ವಾರ್ತೆ ಚಡಚಣ ಹಾವಿನಾಳ ಗ್ರಾಮದ ಶ್ರೀ ದತ್‌ ಸಕ್ಕರೆ ಕಾರ್ಖಾನೆಯ ಆಡಳಿತದಲ್ಲಿ ಮರಾಠಿ ಭಾಷೆ ಬಳಸಲಾಗುತ್ತಿದೆ. ಕೂಡಲೇ ಇದನ್ನು ನಿಲ್ಲಿಸಿ, ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಂಸ್ಕಾರದಿಂದ ಉತ್ತಮ ವ್ಯಕ್ತಿಯಾಗಲು ಸಾಧ್ಯ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಒಳ್ಳೆಯ ಸಂಸ್ಕಾರವನ್ನು ಕಲಿತುಕೊಳ್ಳಬೇಕು. ಆಗ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯ ಎಂದು ಬಾಲಗಾವಿ ಗುರುದೇವ ಆಶ್ರಮದ ಅಮೃತಾನಂದ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved