ಮುಳವಾಡ ಟೋಲ್ ವಿರುದ್ಧ ಅನ್ನದಾತರ ಆಕ್ರೋಶವಿಜಯಪುರ: ಯಾವುದೇ ಮೂಲಭೂತ ಸೌಕರ್ಯಗಳನ್ನು ನೀಡದೇ ತಾಲೂಕಿನ ಮುಳವಾಡ ಬಳಿ ಟೋಲ್ ಪ್ಲಾಜಾವನ್ನು ಏಕಾಏಕಿ ಪ್ರಾರಂಭಿಸಿ ಟೋಲ್ ಸಂಗ್ರಹ ಮಾಡುತ್ತಿದೆ. ರೈಲ್ವೆ ಹಳಿಯ ಮೇಲೆ ನಿರ್ಮಿಸುತ್ತಿರುವ ಸೇತುವೆ ಸಂಪೂರ್ಣ ಮಾಡದೇ ಹಾಗೂ ಅಲ್ಲಿ ಮೂಲಸೌಲಭ್ಯಗಳನ್ನು ನೀಡಿದ ನಂತರವೇ ಟೊಲ್ ಸಂಗ್ರಹ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ರೈಲ್ವೆ ಸೇತುವೆ ನಿರ್ಮಿಸದೇ ಟೊಲ್ ಸಂಗ್ರಹಿಸುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿದರು.