• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಳಿಕೋಟೆಯಲ್ಲಿ ರಾಜ್ಯಮಟ್ಟದ ವಾಲಬಾಲ್‌ ಕ್ರೀಡಾಕೂಟ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದ ಎಸ್.ಎಸ್.ವಿದ್ಯಾ ಸಂಸ್ಥೆಯಡಿಯಲ್ಲಿ ನಡೆಯುತ್ತಿರುವ ಎಚ್.ಎಸ್.ಪಾಟೀಲ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನ.೩ರಿಂದ ೫ ರವರೆಗೆ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟ ಹಮ್ಮಿಕೊಂಡಿದ್ದು, ಮೈದಾನ ಸಿದ್ದವಿರುವುದಾಗಿ ವಿಜಯಪೂರ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಹೇಳಿದರು.
ಮಾರುಕಟ್ಟೆಯಲ್ಲಿ ಕಳೆಗಟ್ಟಿದ ದೀಪಾವಳಿ ವ್ಯಾಪಾರ
ಕನ್ನಡಪ್ರಭ ವಾರ್ತೆ ವಿಜಯಪುರ ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ಗುಮ್ಮಟ ನಗರಿ ಹಾಗೂ ಬಸವನಾಡು ವಿಜಯಪುರ ಜಿಲ್ಲೆ ಸಜ್ಜಾಗಿದೆ. ಹಬ್ಬದ ಮೊದಲ ದಿನ ಗುರುವಾರ ಎಲ್ಲೆಡೆ ಹಬ್ಬದ ಸಡಗರ ಜೋರಾಗಿದೆ. ವಿಜೃಂಭಣೆಯಿಂದ ದೀಪಾವಳಿಯನ್ನು ಆಚರಿಸಲು ಜನರು ಭರ್ಜರಿ ಸಿದ್ಧತೆ ನಡೆಸಿದ್ದು, ಮನೆಗಳ ಅಲಂಕಾರ, ಸಿಂಗಾರ ಜೋರಾಗಿದೆ. ಇನ್ನು, ಮಾರುಕಟ್ಟೆಯಲ್ಲಿ ವ್ಯಾಪಾರ ಭರ್ಜರಿಯಾಗಿ ನಡೆದಿದೆ. ಇತ್ತ ನಗರದೆಲ್ಲೆಡೆ ಜನರು ಹಬ್ಬಕ್ಕೆ ಅಲಂಕಾರಿಕ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು ಆದ ಅತಿವೃಷ್ಟಿಯ ಪರಿಣಾಮ ದೀಪಾವಳಿಯ ಮೇಲೆ ಬಿದ್ದಂತೆ ಕಂಡು ಬರುತ್ತಿಲ್ಲ.
ಕನ್ನಡಾಂಭೆಯ ಸೇವೆ ಮಾಡುವದೇ ಪುಣ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ನಮಗೆಲ್ಲರಿಗೂ ಕನ್ನಡಾಂಬೆಯ ಸೇವೆ ಮಾಡುವುದೇ ಪುಣ್ಯ. ಜಾನಪದ ಕಲೆಯನ್ನು ಮುನ್ನಲೆಗೆ ತರಬೇಕು. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬಸವ ಧರ್ಮ ಪಾಲಿಸುತ್ತಿರುವದು ಶ್ಲಾಘನೀಯ ಎಂದು ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ ಹೇಳಿದರು.
ಬಸವನಬಾಗೇವಾಡಿಯಲ್ಲು ಹಬ್ಬದ ಖರೀದಿ ಜೋರು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲು ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಭರದ ಸಿದ್ದತೆ ನಡೆಸಿದ್ದಾರೆ. ಜನರು ಹೊಸ ಹೊಸ ಬಟ್ಟೆಗಳು, ವಾಹನಗಳು ಸೇರಿದಂತೆ ಅಗತ್ಯ ವಸ್ತುಗಳು ಖರೀದಿಯಲ್ಲಿ ತೊಡಗಿದ್ದು, ಇದರಿಂದ ಮಾರುಕಟ್ಟೆಗಳು ಹಾಗೂ ಅಂಗಡಿಗಳು ಜನರಿಂದ ತುಂಬಿ ತುಳುಕುತ್ತಿವೆ.
ಮಕ್ಕಳ ವೈದ್ಯ ಡಾ.ಬಿದರಿಗೆ ರಾಜ್ಯೋತ್ಸವ ಪ್ರಶಸ್ತಿ
ಕನ್ನಡಪ್ರಭ ವಾರ್ತೆ ವಿಜಯಪುರ: ತಮ್ಮ 71ರ ಇಳಿ ವಯಸ್ಸಿನಲ್ಲಿಯೂ ಸಹ ಯುವಕನಂತೆ ಉತ್ಸಾಹದಿಂದ ವೈದ್ಯಕೀಯ ಸೇವೆಯ ಜೊತೆಗೆ ಸದಾ ಸಮಾಜ ಸೇವೆಯಲ್ಲಿಯೂ ತೊಡಗಿಕೊಂಡಿರುವ ನಗರದ ಪ್ರತಿಷ್ಠಿತ ಮಕ್ಕಳ ವೈದ್ಯ ಡಾ. ಎಲ್.ಬಿದರಿ ಅವರಿಗೆ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕಳೆದ 45 ವರ್ಷಗಳಿಂದ ಸಿಗುತ್ತಿರುವ ಇವರ ವೈದ್ಯಕೀಯ ಸೇವೆ ದೇಶಾದ್ಯಂತ ಮನೆಮಾತಾಗಿದೆ. ನೂರಾರು ಉಚಿತ ಶಿಬಿರಗಳು ಹಾಗೂ ಚಿಕಿತ್ಸೆಗಳನ್ನು ನೀಡಿದ ಇವರ ಶ್ರಮಕ್ಕೆ ಇಂದು ತಕ್ಕ ಪ್ರತಿಫಲ ಸಿಕ್ಕಂತಾಗಿದೆ.
ದೇಶದಲ್ಲಿ ವಕ್ಫ್‌ ಕಾಯ್ದೆಯನ್ನು ಸಂಪೂರ್ಣ ತೆಗೆದುಹಾಕಿ
ಕನ್ನಡಪ್ರಭ ವಾರ್ತೆ ವಿಜಯಪುರ ರೈತರ ಭೂಮಿಗೆ ವಕ್ಫ್ ಮಂಡಳಿ ನೋಟಿಸ್‌ ನೀಡಿರುವುದು ನಿಜಕ್ಕೂ ಆತಂಕಕಾರಿ. ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿರುವ ಕುತಂತ್ರ. ಆದ್ದರಿಂದ ದೇಶದಲ್ಲಿರುವ ವಕ್ಫ್ ಕಾಯ್ದೆಯನ್ನು ಸಂಪೂರ್ಣವಾಗಿ ತೆಗೆದುಹಾಕಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ಇದು ಕಾಂಗ್ರೆಸ್‌ ಸರ್ಕಾರವಲ್ಲ, ಖಬರಸ್ತಾನ್‌ ಸರ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ಇದು ಖಬರಸ್ತಾನ್‌ ಸರ್ಕಾರ. ರೈತರ ಜಮೀನುಗಳನ್ನು ವಕ್ಫ್ ಆಸ್ತಿಯೆಂದು ಘೋಷಿಸಿ ವಕ್ಫ್ ಸಚಿವ ಜಮೀರ್ ಅಹಮ್ಮದ ಖಾನ್ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಗುಡುಗಿದರು.
ವಕ್ಫ್‌ಬೋರ್ಡ್‌ ಹೆಸರು ತೆಗೆಯದಿದ್ರೆ ಹೋರಾಟ
ಕನ್ನಡಪ್ರಭ ವಾರ್ತೆ ಇಂಡಿ ರೈತರ ಪಹಣಿಗಳಲ್ಲಿ ವಕ್ಫ್‌ ಬೋರ್ಡ್‌ ಹೆಸರು ಸೇರಿಸಿದ್ದನ್ನು ಹಿಂಪಡೆಯಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಹಸಿರು ಸೇನೆ ರಾಜ್ಯಾಧ್ಯಕ್ಷ ಚಂದ್ರಶೇಖರ ಕೋಡಿಹಳ್ಳಿ ಹೇಳಿದರು.ಪಟ್ಟಣದಲ್ಲಿ ಮಾತನಾಡಿದ ಅವರು. ಅ.೮ ಮತ್ತು ೧೦ರಂದು ರೈತರ ಪಹಣಿಯಲ್ಲಿ ವಕ್ಫ್ ಎಂದು ತಿದ್ದುಪಡಿ ಮಾಡಲು ನಿರ್ದೇಶನ ನೀಡಿದವರು ಯಾರು? ಮುಖ್ಯಮಂತ್ರಿಗಳೋ ಅಥವಾ ಜಿಲ್ಲಾಧಿಕಾರಿಗಳೋ? ಇಲ್ಲದಿದ್ದರೆ ಮತ್ಯಾರು, ಯಾವ ಪುರುಷಾರ್ಥಕ್ಕಾಗಿ ರೈತರಿಗೆ ತೊಂದರೆ ನೀಡಲು ಮುಂದಾಗಿದ್ದೀರಿ ಎಂದು ಪ್ರಶ್ನಿಸಿದರು.
ನ.4ಕ್ಕೆ ಗೆಳೆಯರ ಬಳಗದಿಂದ ಕನ್ನಡ ಹಬ್ಬ: ಕನಕಲ್
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ನ.4ರಂದು ಪಟ್ಟಣದ ಹೊಸನಗರದ ಟಿಪ್ಪು ಸುಲ್ತಾನ ವೃತ್ತದ ಬಳಿ ರಾಜ್ಯೋತ್ಸವದ ಅಂಗವಾಗಿ ಗೆಳೆಯರ ಬಳಗದಿಂದ ಕನ್ನಡ ಹಬ್ಬ ಏರ್ಪಡಿಸಲಾಗಿದೆ ಎಂದು ಗೆಳೆಯರ ಬಳಗದ ರೆಹಮಾನ್ ಕನಕಲ್ ಹೇಳಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.4 ರಂದು ಸಂಜೆ ನಡೆಯುವ ಕನ್ನಡ ಹಬ್ಬದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಾಲೂಕಿನ ಕನ್ನಡಪರ ಸಂಘಟನೆಗಳು, ಕನ್ನಡಿಗರು ಪಾಲ್ಗೊಳ್ಳಬೇಕು.
ರೈತರ ಧರಣಿಯಲ್ಲಿ ಉಮೇಶ ಕಾರಜೋಳ ಭಾಗಿ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಸಂಕಷ್ಟ ಪರಿಹರಿಸುವಂತೆ ಒತ್ತಾಯಿಸಿ ರೈತರು ಜಿಲ್ಲಾಡಳಿತ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಭಾಗವಹಿಸಿ ರೈತರಿಗೆ ಬೆಂಬಲ ಸೂಚಿಸಿದರು. ರಾತ್ರಿಯಿಡಿ ರೈತರೊಂದಿಗೆ ಇದ್ದು ಡಿಸಿ ಕಚೇರಿ ಆವರಣದಲ್ಲೇ ಅಡುಗೆ ತಯಾರಿಸಿ ಅವರೊಂದಿಗೆ ಉಪಹಾರವನ್ನೂ ಸವಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 399
  • next >
Top Stories
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್‌ ಜಾತಿಗೆ ಕೊಕ್‌
ಜಾತಿ ಗಣತಿ ಕುರಿತು ಲಿಂಗಾಯತರಲ್ಲಿ ಬಿಕ್ಕಟ್ಟು ಪ್ರದರ್ಶನ
ಬೆಂಬಲ ಬೆಲೆ ಅಡಿ ಕೇಂದ್ರದಿಂದ ಹೆಸರು, ಉದ್ದು, ಶೇಂಗಾ ಖರೀದಿ
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved