• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾರಿಗೆ ಬೆಂಕಿ: ಕೋಟ್ಯಂತರ ಮೌಲ್ಯದ ರೆಫ್ರಿಜಿರೇಟರ್ ಭಸ್ಮ
ಕನ್ನಡಪ್ರಭ ವಾರ್ತೆ ವಿಜಯಪುರ: ಮಹಾರಾಷ್ಟ್ರದ ರಂಜನಗಾಂವನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೆಫ್ರಿಜಿರೇಟರ್‌ ಸಾಗಾಟ ಮಾಡುತ್ತಿದ್ದ ಲಾರಿಯ ಇಂಜಿನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರ ಟೋಲ್ ಪ್ಲಾಜಾ ಬಳಿ ಭಾನುವಾರ ರಾತ್ರಿ ನಡೆದಿದೆ.
ವಕ್ಫ್‌ನಿಂದ ನೋಟಿಸ್‌, ರೈತರ ಪ್ರತಿಭಟನೆ
ಕನ್ನಡ ಪ್ರಭ ವಾರ್ತೆ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರ ಗ್ರಾಮದ ರೈತರಿಗೆ ವಕ್ಫ್ ಆಸ್ತಿ ವಿಚಾರವಾಗಿ ನೋಟಿಸ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಲ್ಹಾರ ತಾಲೂಕು ಘಟಕದ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.ಕೊಲ್ಹಾರ ತಾಲೂಕು ಘಟಕದ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ಪ್ರಭಾರಿ ತಹಸೀಲ್ದಾರ್ ಪಿ.ಜಿ.ಪವಾರ ಮೂಲಕ ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ನೀಡಿರುವ ನೋಟಿಸ್‌ ಅನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿದರು.
ಜಗತ್ತಿನಲ್ಲೇ ಹಿಂದು ಧರ್ಮ, ಸಂಸ್ಕೃತಿ ವೈಶಿಷ್ಟ್ಯಪೂರ್ಣ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಹಿಂದು ಧರ್ಮದ ಸಂಸ್ಕೃತಿಯ ಜಗತ್ತಿನಲ್ಲಿಯೇ ವೈಶಿಷ್ಟ್ಯಪೂರ್ಣವಾಗಿದೆ. ನಮ್ಮ ಧರ್ಮದಲ್ಲಿ ಅವರ ಭಾವಕ್ಕೆ ತಕ್ಕಂತೆ ದೇವರನ್ನು ಪೂಜಿಸುವ ಸ್ವಾತಂತ್ರ್ಯ ಕೊಟ್ಟಿದೆ. ದೇವರನ್ನು ಮೂರ್ತಿ, ಪ್ರಾಣಿ, ವೃಕ್ಷ, ಜಲ, ಮಣ್ಣು ಸೇರಿದಂತೆ ವಿವಿಧ ರೂಪದಲ್ಲಿ ಪೂಜಿಸಲಾಗುತ್ತಿದೆ ಎಂದು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ಹೆದ್ದಾರಿ ಮಧ್ಯೆ ದಿಢೀರ್‌ ತಲೆಯೆತ್ತಿದ್ದ 9 ವೃತ್ತಗಳ ತೆರವು
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ಮಧ್ಯೆ ಅಪರಿಚಿತರು ಕಾನೂನು ಬಾಹಿರವಾಗಿ ಏಕಾಏಕಿ ನಿರ್ಮಿಸಿದ್ದ ವೃತ್ತಗಳನ್ನು ಶಾಂತಿ ಸಭೆಯ ಮೂಲಕ ತೆರವುಗೊಳಿಸಲಾಗಿದೆ. ಶಿರಾಡೋಣ ರಾಜ್ಯ ಹೆದ್ದಾರಿ-41ರ ಮಧ್ಯೆ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ಶನಿವಾರ ರಾತ್ರೋರಾತ್ರಿ ಸುಮಾರು 9ಕ್ಕೂ ಹೆಚ್ಚು ಅನಧಿಕೃತ ವೃತ್ತಗಳನ್ನು ನಿರ್ಮಾಣ ಮಾಡಲಾಗಿತ್ತು. ಇದು ಗ್ರಾಮದಲ್ಲಿ ಸಾಮರಸ್ಯ ಹದಗೆಡಲು ಕೂಡ ಕಾರಣವಾಗಿತ್ತು. ಈ ಬಗ್ಗೆ ಕನ್ನಡಪ್ರಭ "ರಾಜ್ಯ ಹೆದ್ದಾರಿಯಲ್ಲಿ ಏಕಾಏಕಿ 9 ವೃತ್ತಗಳ ಸೃಷ್ಟಿ " ತಲೆಬರಹದಡಿ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.
ವಕ್ಫ್‌ ಸೇರ್ಪಡೆ ಹುನ್ನಾರ ಕೂಡಲೇ ಕೈಬಿಡಬೇಕು
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ವಕ್ಫ್ ಆಸ್ತಿ ಬಗ್ಗೆ ಹೆಚ್ಚಿನ ಚರ್ಚೆಯಾಗುತ್ತಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ. ತಾತ, ಮುತ್ತಾತರಿಂದ ಬಂದಿರುವ ಆಸ್ತಿಗಳ ಕಾಲಂ11ರಲ್ಲಿ ವಕ್ಫ್ ಹೆಸರು ಬಂದಿವೆ. ಹೀಗಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಹೇಳಿದರು.
ರಣರ ವಿಚಾರಗಳೇ ನಮಗೆ ಆದರ್ಶ, ಸ್ಫೂರ್ತಿ
ಕನ್ನಡಪ್ರಭ ವಾರ್ತೆ ವಿಜಯಪುರ ಬಸವಾದಿ ಶರಣರು ಸತ್ಯ ತತ್ವಗಳನ್ನು ಸಾಮರಸ್ಯಗೊಳಿಸಿದವರು. ಶರಣರ ವಿಚಾರಗಳು ನಮಗೆ ಆದರ್ಶ, ನಿತ್ಯ ಸ್ಫೂರ್ತಿ. ಸಮಾಜದಲ್ಲಿರುವ ಬಡಜನರ ಶೈಕ್ಷಣಿಕ, ಧಾರ್ಮಿಕ ಮತ್ತು ಸಾಮಾಜಿಕವಾಗಿ ಎಲ್ಲರನ್ನು ಒಗ್ಗೂಡಿಸಿದ ಕೀರ್ತಿ ಪೂಜ್ಯ ಹಾನಗಲ್ ಕುಮಾರಸ್ವಾಮಿಗಳಿಗೆ ಸಲ್ಲುತ್ತದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭೆ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು.
ಜಿಲ್ಲೆಯ ಪೌರಕಾರ್ಮಿಕರ ಆರೋಗ್ಯ ಬಗ್ಗೆ ಕಾಳಜಿವಹಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕುರಿತು ತೀವ್ರ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ನಿಗದಿತ ಕನಿಷ್ಠ ವೇತನ ಪಾವತಿ, ಜೀವ ವಿಮೆ ಸೌಲಭ್ಯ, ಉಪಾಹಾರ, ಸುರಕ್ಷತಾ ಪರಿಕರಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಥ್ಲೆಟಿಕ್ಸ್‌: ಶ್ವೇತಾ, ಪ್ರವೀಣ ರಾಜ್ಯ ಮಟ್ಟಕ್ಕೆ ಆಯ್ಕೆ
ಕನ್ನಡಪ್ರಭ ವಾರ್ತೆ ಕೊಲ್ಹಾರ ವಿಜಯಪುರ ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆರ್‌ಎಂಎಸ್‌ಎ ಕುಪಕಡ್ಡಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಶ್ವೇತಾ ನಿಂಗೊಂಡ ಬಾಡಿಗಿ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಪ್ರವೀಣ ಸಂಗಮೇಶ ಹುನಗುಂದ 5 ಕಿ.ಮೀ ಓಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಇಬ್ಬರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಧರ್ಮ, ದೇಶಪ್ರೇಮಿ ಮಹಾರಾಣಾ ಪ್ರತಾಪಸಿಂಹ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಧರ್ಮದ ಮೇಲೆ ನಂಬಿಕೆ ಮತ್ತು ದೇಶ ಪ್ರೇಮ ಹೊಂದಿದ್ದ ಮಹಾರಾಣಾಪ್ರತಾಪಸಿಂಹರದ್ದು ದೇಶದ ಇತಿಹಾಸವನ್ನು ಕಾಪಾಡುತ್ತ ಮುನ್ನಡೆದಿದ್ದರು. ಅವರು ಯಾವುದೇ ಸ್ವಹಿತಾಸ್ಕತಿಯನ್ನು ಇಟ್ಟುಕೊಂಡಿರಲಿಲ್ಲ ಎಂದು ಗುಂಡಕನಾಳ ಹಿರೇಮಠದ ಶ್ರೀ ಷ.ಬ್ರ.ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ವಕ್ಫ್‌ ಆಸ್ತಿ: ರೈತರು ಆತಂಕ ಪಡುವ ಅಗತ್ಯವಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿಗಳ ಬಗ್ಗೆ ಜಿಲ್ಲೆಯಲ್ಲಿ ಅನವಶ್ಯಕ ಗೊಂದಲ ಸೃಷ್ಟಿಯಾಗಿದೆ. ಈ ವಿಚಾರ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಆದರೆ, ವಾಸ್ತವದಲ್ಲಿ ಆ ರೀತಿ ಏನೂ ಇಲ್ಲ. ರೈತರು ಆತಂಕಪಡುವ ಅಗತ್ಯವಿಲ್ಲ. ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿಶ್ವಾಸ ತುಂಬುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 399
  • next >
Top Stories
ಜಿಎಸ್‌ಟಿ ಇಳಿಕೆ ಎಫೆಕ್ಟ್ : ನಂದಿನಿಉತ್ಪನ್ನಗಳ ಬೆಲೆಯಲ್ಲಿ ಭಾರಿ ಕಡಿತ
ಜಾತಿ ಗಣತಿ ನಮೂನೆಯಿಂದ 33 ಕ್ರಿಶ್ಚಿಯನ್‌ ಜಾತಿಗೆ ಕೊಕ್‌
ಜಾತಿ ಗಣತಿ ಕುರಿತು ಲಿಂಗಾಯತರಲ್ಲಿ ಬಿಕ್ಕಟ್ಟು ಪ್ರದರ್ಶನ
ಬೆಂಬಲ ಬೆಲೆ ಅಡಿ ಕೇಂದ್ರದಿಂದ ಹೆಸರು, ಉದ್ದು, ಶೇಂಗಾ ಖರೀದಿ
ಜೀವನವಿಡೀ ವಿದ್ಯುತ್ ಬಳಸದೇ ಜೀವಿಸಿದ್ದ ಡಾ. ಹೇಮಾ ಸಾಣೆ ನಿಧನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved