• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುರಿ ಮುಟ್ಟಲು ಜ್ಞಾನವೇ ನಮಗೆ ಪ್ರೇರಣೆ: ಹಿರೇಮಠ
ಕನ್ನಡಪ್ರಭ ವಾರ್ತೆ ಸಿಂದಗಿ ಜಗತ್ತಿನಲ್ಲಿ ಜ್ಞಾನಕ್ಕೆ ಸಮನಾದದ್ದು ಯಾವುದು ಇಲ್ಲ. ಜ್ಞಾನವೇ ಗುರಿ ಮುಟ್ಟಲು ನಮಗೆಲ್ಲ ಪ್ರೇರಣೆಯಾಗಿದೆ ಎಂದು ಪ್ರೆಸ್ ಕ್ಲಬ್ ಅಧ್ಯಕ್ಷ ಶಾಂತೂ ಹಿರೇಮಠ ಹೇಳಿದರು. ಪಟ್ಟಣದ ಪ್ರೇರಣಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ 2024-25 ನೇ ಸಾಲಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಲಾ ಸಂಸತ್ ಪದಾಧಿಕಾರಿಗಳ ಪ್ರತಿಜ್ಞಾವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಳೆಯಿಲ್ಲದೇ, ನೀರಿಲ್ಲದೇ ಒಣಗುತ್ತಿರುವ ಬೆಳೆಗಳು
ಕನ್ನಡಪ್ರಭ ವಾರ್ತೆ ತಿಕೋಟಾ ತಿಕೋಟಾ: ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನೆರೆ ಹಾಗೂ ಪ್ರಕೃತಿ ವಿಕೋಪದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ವಿಜಯಪುರ ಜಿಲ್ಲೆಯ ಕೆಲವು ಭಾಗದಲ್ಲಿ ಮಳೆಯೇ ಇಲ್ಲದೆ ಬೆಳೆದ ಬೆಳೆಗಳು ಒಣಗಲಾರಂಭಿಸಿವೆ. ಹೌದು, ಈ ಭಾಗದಲ್ಲಿ ಸಾಕಷ್ಟು ಮಳೆ ಕೊರತೆಯಾಗಿದ್ದು, ಎಲ್ಲ ಬೆಳೆಗಳು ಒಣಗುತ್ತಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ತಿಕೋಟಾ ಹಾಗೂ ದೇರಹಿಪ್ಪರಗಿ ತಾಲೂಕಿನ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಬಳಿಕ ಮಳೆಯ ಆಗಿಲ್ಲ.
ಮಳೆಗಾಗಿ ಗುರ್ಜಿ ಮೊರೆ ಹೋದ ಗ್ರಾಮಸ್ಥರು
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದ್ದರೂ ವಿಜಯಪುರ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಈವರೆಗೆ ಮಳೆಯೇ ಆಗಿಲ್ಲ. ತಾಲೂಕಿನ ತಿಳಗೂಳ ಗ್ರಾಮಸ್ಥರು ಮಳೆಗಾಗಿ ಗುರ್ಜಿ ಪೂಜೆ ಮೊರೆ ಹೋಗಿದ್ದಾರೆ. ಮುಂಗಾರು ಮಳೆ ಶುರುವಾಗಿ ಹಲವು ತಿಂಗಳು ಕಳೆದರೂ ತಾಲೂಕಿನ ಹಲವು ಗ್ರಾಮಗಳಲ್ಲಿ ಮಳೆಯೇ ಇಲ್ಲ. ಹೀಗಾಗಿ, ರೈತರು ಗುರ್ಜಿ ಪೂಜೆ ಮಾಡುತ್ತಿದ್ದಾರೆ.
ಶಿಕ್ಷಕರ ಬೇಡಿಕೆ ಈಡೇರುವವರೆಗೆ ಹೋರಾಟ ನಿಲ್ಲಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನ್ಯಾಯಯುತ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರ್ಜುನ ಲಮಾಣಿ ಹೇಳಿದರು. ನಗರದ ಗಾಂಧಿ ಚೌಕ್ ಹತ್ತಿರದ ಶಾರದಾ ಭವನದಲ್ಲಿ ಪದವೀಧರ ಶಿಕ್ಷಕರ ಬೇಡಿಕೆಗಳ ಕುರಿತು ಹೋರಾಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಸರ್ಕಾರ ಶಿಕ್ಷಕರಲ್ಲಿಯೇ ಬೇಧಭಾವ ಮಾಡುತ್ತಿದೆ ಎಂದರು.
ಅಹಿಂದ ಮುಖಂಡರಿಂದ ಹೋರಾಟಕ್ಕೆ ಸಜ್ಜು
ವಿಜಯಪುರ: ನಿಷ್ಕಳಂಕ ಸಿದ್ಧರಾಮಯ್ಯನವರಿಗೆ ಮಸಿ ಬಳೆಯಲು ವ್ಯರ್ಥ ಪ್ರಯತ್ನ ಮಾಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಹೋರಾಟ ನಡೆಸಲು ನಗರದಲ್ಲಿ ಜಿಲ್ಲಾ ಅಹಿಂದ ವರ್ಗಗಳ ಮುಖಂಡರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯ ಮೇಲೆ ಬಿಜೆಪಿ ಹೊರೆಸುತ್ತಿರುವ ಮುಡಾ ಹಗರಣ ಆರೋಪವನ್ನು ಖಂಡಿಸಿ ಆ.6ರಂದು ಬೃಹತ್ ಪ್ರತಿಭಟನೆ ರ‍್ಯಾಲಿಯನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು ಜಿಲ್ಲೆಯ ಅಹಿಂದ ಮುಖಂಡರು ಒಮ್ಮತದ ತೀರ್ಮಾನ ಮಾಡಲಾಯಿತು.
ಪಂಪ್‌ಸೆಟ್ ಕಳ್ಳರ ಬಂಧನ:೧೫ ಪಂಪ್‌ಸೆಟ್‌, ೧ ಬೈಕ್ ವಶ
ಆಲಮೇಲ: ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದ ಬಳಿಯ ಕಾಲುವೆಯಲ್ಲಿ ನೀರು ಹಾಯಿಸಲು ಹಾಕಲಾಗಿದ್ದ ಪಂಪ್‌ಸೆಟ್‌ಗಳನ್ನು ಕಳ್ಳತನ ಮಾಡಿದ್ದ ಕಳ್ಳರನ್ನು ಆಲಮೇಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 15 ಪಂಪ್‌ಸೆಟ್‌ ಹಾಗೂ 1 ಬೈಕ್‌ನ್ನು ಜಪ್ತಿ ಮಾಡಿದ್ದಾರೆ. ಸುಂದರ ಭಗವಂತ ಕ್ಷತ್ರಿ (೨೪), ಕೃಷ್ಣಾ ಶ್ರಿಶೈಲ್ ಟಕ್ಕಳಕಿ (೨೦), ಸಿದ್ದಪ್ಪ ಸುಭಾಷ ಟಕ್ಕಳಕಿ (೩೫), ಸಂತೋಷ ಅಭಿಮನ್ಯು ಕ್ಷತ್ರಿ (೨೭) ಎಲ್ಲರೂ ಬಳಗಾನೂರ ಗ್ರಾಮದವರಾಗಿದ್ದು, ಇವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಗೂಳಪ್ಪ ಮುತ್ಯಾ ಪಲ್ಲಕ್ಕಿ ಜಾತ್ರೆಯ ಸಂಭ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ: ನಾಗರ ಅಮಾವಾಸ್ಯೆ ಪ್ರಯುಕ್ತ ನಡೆಯುವ ಗೂಳಪ್ಪ ಮುತ್ಯಾ ಜಾತ್ರೆ ಅಪಾರ ಭಕ್ತ ಸಮೂಹದೊಂದಿಗೆ ನಾಗಠಾಣ ಗ್ರಾಮದಲ್ಲಿ ಜರುಗಿತು. ರವಿವಾರ ನಸುಕಿನ ಜಾವ 4 ಗಂಟೆಗೆ ಗೂಳಪ್ಪ ಮುತ್ಯಾನ ಪಲ್ಲಕ್ಕಿಯು ಗ್ರಾಮದ ಭೀರದೇವರ ಪಲ್ಲಕ್ಕಿ, ಕಗ್ಗೋಡ ತಿಪರಾಯ ಮತ್ತು ಲಕ್ಷ್ಮೀ ದೇವರ, ತಿಡಗುಂದಿ ಭೀರದೇವರ ಪಲ್ಲಕ್ಕಿಯೊಂದಿಗೆ ತಳೇವಾಡ, ಗೂಗದಡ್ಡಿ, ಸಾರವಾಡ ಗ್ರಾಮದ ಡೊಳ್ಳಿನ ವಾಲಗ ಹಾಗೂ ಗೊಂಬೆ ಕುಣಿತದೊಂದಿಗೆ, ಸಕಲ ವಾದ್ಯ ಮೇಳದೊಂದಿಗೆ ಮೆರವಣಿಗೆ ನಡೆಸಲಾಯಿತು.
ನಾಗರ ಅಮವಾಸ್ಯೆ: ದೇವಸ್ಥಾನಗಳಲ್ಲಿ ಭಕ್ತರ ದಂಡು
ಕನ್ನಡಪ್ರಭ ವಾರ್ತೆ ಆಲಮಟ್ಟಿ: ಭಾನುವಾರ ನಾಗರ ಅಮವಾಸ್ಯೆಯ ನಿಮಿತ್ತ ಆಲಮಟ್ಟಿ ಸುತ್ತಮುತ್ತಲಿನ ವಿವಿಧ ದೇವರ ದರ್ಶನಕ್ಕೆ ಭಕ್ತರ ದಂಡೇ ಹರಿದು ಬಂದಿತು. ಯಲಗೂರದ ಯಲಗೂರೇಶ್ವರ, ಚಂದ್ರಗಿರಿಯ ಚಂದ್ರಮ್ಮ ದೇವಿ, ಯಲ್ಲಮ್ಮನ ಬೂದಿಹಾಳದ ಯಲ್ಲಮ್ಮ ದೇವಸ್ಥಾನಗಳಲ್ಲಿ ಭಾನುವಾರ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಯಲಗೂರದಲ್ಲಂತೂ ಭಕ್ತರ ಸಂಖ್ಯೆ ಅಧಿಕವಾಗಿತ್ತು.
2ನೇ ಪುಟಕ್ಕೆ..ಮಸ್ಟ್.. ಸರ್ಕಾರಿ ಶಾಲೆಯ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸೋಣ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಶಿಕ್ಷಕ ವೃತ್ತಿ ಸಂತೃಪ್ತಿ ನೀಡಿದ್ದು, ಸರ್ಕಾರಿ ಶಾಲೆಗಳ ಅಭ್ಯುದಯದ ದೃಷ್ಟಿಯಿಂದ ನಾವೆಲ್ಲರೂ ಶ್ರಮವಹಿಸಿ ದುಡಿದು ಮಕ್ಕಳ ಬಾಳಿಗೆ ಬೆಳಕಾಗಬೇಕಿದೆ ಎಂದು ದೇವೂರ್ ಎಲ್.ಟಿ ನಂ.2 ನಿವೃತ್ತ ಶಿಕ್ಷಕ ಶಾಂತಪ್ಪ ತಳವಾರ ಹೇಳಿದರು. ತಾಲೂಕಿನ ದೇವೂರ ಎಲ್.ಟಿ ನಂ.2ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಆಯೋಜಿಸಿದ್ದ ಬೀಳ್ಕೊಡುವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಾಡು, ನುಡಿ ಅಸ್ಮಿತೆಯ ಸೇವೆ ಮಾಡುತ್ತಿರುವ ಕಸಾಪ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಉಪನ್ಯಾಸ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಹಿತ್ಯ ಪರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಕನ್ನಡನಾಡು, ನುಡಿಯ ಅಸ್ಮಿತೆಯ ಕೈಂಕರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ನುಡಿದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 340
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved