ಸೇವಾದಳದ ಶಿಕ್ಷಕರ ಕಾರ್ಯ ಶ್ಲಾಘನೀಯಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಮಕ್ಕಳಲ್ಲಿ ದೇಶಾಭಿಮಾನ ಮೂಡಿಸುವಲ್ಲಿ ಭಾರತ ಸೇವಾದಳದ ಪಾತ್ರ ಹಿರಿದು ಎಂದು ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು. ಪಟ್ಟಣದ ಬಸವೇಶ್ವರ ಸರ್ಕಾರಿ ಪಪೂ ಕಾಲೇಜಿನ ಆವರಣದಲ್ಲಿರುವ ಭಾರತ ಸೇವಾದಳದ ಕಚೇರಿಯಲ್ಲಿ ಶುಕ್ರವಾರ ಜರುಗಿದ ಭಾರತ ಸೇವಾದಳದ ತಾಲೂಕು ಮಟ್ಟದ ಮಿಲಾಪ್ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.