• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ಸಂಸ್ಕೃತಿ ಜಗತ್ತಿಗೆ ಮಾದರಿ: ವಿಶ್ವಪ್ರಭು ಶ್ರೀ
ಕನ್ನಡಪ್ರಭ ವಾರ್ತೆ ಸಿಂದಗಿ ನಮ್ಮ ಸಾಂಸ್ಕೃತಿಕ ದೇಶದಲ್ಲಿ ಹಬ್ಬಗಳ ಆಚರಣೆಗೆ ಅದರದ್ದೇ ಆದ ವಿಶೇಷ ಹಿನ್ನಲೆಗಳನ್ನು ಹೊಂದಿವೆ. ನಮ್ಮ ಭಾರತೀಯ ಸಂಸ್ಕೃತಿ ಜಗತ್ತಿಗೆ ಮಾದರಿಯಾಗಿದೆ ಎಂದು ಸಾರಂಗಮಠದ ಉತ್ತರಾಧಿಕಾರಿಗಳಾದ ಡಾ.ವಿಶ್ವ ಪ್ರಭುದೇವ ಶಿವಾಚಾರ್ಯರು ಹೇಳಿದರು.
ಡೋಣಿ ನದಿಯ ಪ್ರವಾಹ ಏರಿಳಿತ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಡೋಣಿ ನದಿಯಲ್ಲಿ ಪ್ರವಾಹದ ಏರಿಳಿತ ಮುಂದುವರೆದಿದ್ದು, ವಿಜಯಪುರ ಮಾರ್ಗದ ರಾಜ್ಯ ಹೆದ್ದಾರಿಯ ಸಂಚಾರ ಇನ್ನು ಸ್ಥಗಿತಗೊಂಡಿದೆ. ಡೋಣಿ ನದಿಯ ಪ್ರವಾಹದಿಂದ ನೂರಾರು ಎಕರೆ ಕೃಷಿ, ತೋಟಗಾರಿಕೆ ಭೂಮಿ ಜಲಾವೃತವಾಗಿದ್ದು, ಅಪಾರ ಹಾನಿ ಸಂಭವಿಸಿದೆ. ಇದೀಗ ತಾಲೂಕಾಡಳಿತದ ಅಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದಾರೆ.
ಐತಿಹಾಸಿಕ ಬಸವೇಶ್ವರ ಜಾತ್ರೆಗೆ ಭರದ ಸಿದ್ಧತೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ ಜಾತ್ರಾಮಹೋತ್ಸವ ಆ.೧೧ರಿಂದ ೧೫ ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು, ಯಶಸ್ವಿಗೆ ಸಾರ್ವಜನಿಕರು ಸೇರಿ ಎಲ್ಲ ಇಲಾಖೆಗಳು ಸಹಕಾರ ಅಗತ್ಯ ಎಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಜಾನಪದ ಕಲೆಗಳು ನಮ್ಮ ಪರಂಪರೆಯ ಪ್ರತೀಕ
ಕನ್ನಡಪ್ರಭ ವಾರ್ತೆ ಇಂಡಿ ಜಾನಪದ ಕಲೆಯು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅದು ನಮ್ಮ ಪರಂಪರೆಯ ಪ್ರತೀಕವಾಗಿದ್ದು, ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸುವುದು ಬಹಳ ಮುಖ್ಯವಾಗಿದೆ ಎಂದು ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.
ಸಾಮಾಜಿಕ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಿ: ಉಮೇಶ ಕಾರಜೋಳ ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ಸಾಮಾಜಿಕ ಯೋಜನೆಗಳ ಜಾರಿಗೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಉದಾಸೀನ ತೋರುತ್ತಿದ್ದು, ಯೋಜನೆಗಳನ್ನು ಅನುಷ್ಠಾನಗೊಳಿಸುವ ವಿವಿಧ ನಿಗಮಗಳಲ್ಲಿ ಭ್ರಷ್ಟಾಚಾರ ದೊಡ್ಡ ಮಟ್ಟದಲ್ಲಿ ನಡೆದಿದೆ. ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲ ಯೋಜನೆ ಸೇರಿದಂತೆ ಯಾವ ಯೋಜನೆಗಳಿಗೂ ಸಮರ್ಪಕವಾಗಿ ಅನುದಾನವನ್ನೇ ಸರ್ಕಾರ ಬಿಡುಗಡೆ ಮಾಡಿಲ್ಲ. ಸರ್ಕಾರ ಕೂಡಲೇ ಈ ಯೋಜನೆಗಳ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಆಗ್ರಹಿಸಿದ್ದಾರೆ.
ಡೋಣಿ ನದಿ ಅವಾಂತರ, ರೈತರು ತತ್ತರ
ಕನ್ನಡಪ್ರಭ ವಾರ್ತೆ ತಾಳಿಕೋಟೆತಾಲೂಕಿನ ಬೊಮ್ಮನಹಳ್ಳಿ, ಗುತ್ತಿಹಾಳ, ಬೋಳವಾಡ, ತಾಳಿಕೋಟೆ, ಹರನಾಳ, ಮಿಣಜಗಿ ಗ್ರಾಮಗಳ ಸೀಮೆಯಲ್ಲಿ ವರುಣದೇವ ಅವಾಂತರ ಸೃಷ್ಟಿ ಮಾಡಿದ್ದಾನೆ. ಡೋಣಿ ನದಿ ಪ್ರವಾಹದ ನೀರು ನುಗ್ಗಿದ್ದು ಬಿತ್ತನೆ ಮಾಡಿದ್ದ ಬೀಜಗೊಬ್ಬರ ಸೇರಿದಂತೆ ಕೆಲವೆಡೆ ಬೆಳೆದಿದ್ದ ಬೆಳೆಯೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಈ ಮೂಲಕ ಡೋಣಿ ನದಿ ರೈತರಿಗೆ ಇನ್ನಿಲ್ಲದ ಸಂಕಷ್ಟ ತಂದೊಡ್ಡಿದೆ.
ವಿದ್ಯಾರ್ಥಿನಿಯರನ್ನ ಪಾರ್ಟಿಗೆ ಕರೆದೊಯ್ದ ವಾರ್ಡನ್‌ ಅಮಾನತಿಗೆ ಆಗ್ರಹ
ಕನ್ನಡಪ್ರಭ ವಾರ್ತೆ ವಿಜಯಪುರ ನಿಯಮಾವಳಿ ಮೀರಿ ವಿದ್ಯಾರ್ಥಿನಿಯರನ್ನು ಜನ್ಮದಿನದ ಔತಣಕೂಟಕ್ಕೆ ಕರೆದುಕೊಂಡ ಹೋದ ವೃತ್ತಿಪರ ಬಾಲಕಿಯರ ವಸತಿ ನಿಲಯದ ಸಿಬ್ಬಂದಿಗಳ ಮೇಲೆ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.
ರಾಜ್ಯ ಸರ್ಕಾರದಿಂದ ದಲಿತ ವಿರೋಧಿ ನೀತಿ
ಕನ್ನಡಪ್ರಭ ವಾರ್ತೆ ವಿಜಯಪುರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸರ್ಕಾರ ಮೀಸಲಿರಿಸಿದ ಎಸ್ಸಿಪಿ-ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವ ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಬಂಜಾರಾ ಅಭಿವೃದ್ಧಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಆಗ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಮುಂದಾದಾಗ, ಕೆಲ ಕಾಲ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಬಿಜೆಪಿ ಕಾರ್ಯಕರ್ತರು ನಿಗಮದ ಕಚೇರಿಗೆ ಘೋಷಣೆ ಕೂಗುತ್ತ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ 40 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ, ನಂತರ ಬಿಡುಗಡೆಗೊಳಿಸಲಾಯಿತು. ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಆರ್ಥಿಕ ಸ್ವಾವಲಂಬಿಯಾಗಲು ಉಳಿತಾಯ ಮಾಡಿ
ಹೆಣ್ಣು ಮಕ್ಕಳು ಉಳಿಸುವ ಹಣದಿಂದ ಮದುವೆಗೆ, ಮಕ್ಕಳ ಶಿಕ್ಷಣಕ್ಕೆ ಅಥವಾ ಮನೆಯನ್ನು ಮುನ್ನಡೆಸಲು ತುಂಬಾ ಸಹಕಾರಿ ಆಗುತ್ತದೆ. ಉಳಿತಾಯದ ಬಗ್ಗೆ ಅರಿವು ಹೊಂದಿದವರು ಜೀವನದಲ್ಲಿ ಆರ್ಥಿಕವಾಗಿ ಸ್ವಾವಲಂಬಿಯಾಗಬಹುದು ಎಂದು ಚಿತ್ರ ನಟಿ ಶೃತಿ ಹೇಳಿದರು.
ನಗರಸಭೆಯಾಗಿ ಮೇಲ್ದರ್ಜೆಗೇರಿದ ಇಂಡಿ ಪುರಸಭೆ
ಶಾಸಕ ಯಶವಂತರಾಯಗೌಡ ಪಾಟೀಲ ಪರಿಶ್ರಮದಿಂದ ಇಂಡಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಪಟ್ಟಣದ ಗುರುವಾರ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 397
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved