• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾಮಂಡಳದ ಗಣೇಶ ಮೂರ್ತಿಯ ಮೆರವಣಿಗೆ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದ ಶ್ರೀ ಶಿವಾಜಿ ಮಹಾರಾಜ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಜಾನನ ಮಹಾಮಂಡಳದ ಗಣೇಶ ಉತ್ಸವ ಮೂರ್ತಿಯ ವಿಸರ್ಜನಾ ಪೂರ್ವ ಮೆರವಣಿಗೆ ವೈಭವದಿಂದ ನಡೆಯಿತು. ಕಲಾ ತಂಡಗಳು ಮೆರವಣಿಗೆಯ ಸೊಬಗು ಹೆಚ್ಚಿಸಿದ್ದವು. ಫೈಬರ್ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ಸಾಂಕೇತಿಕವಾಗಿ ಮಣ್ಣಿನ ಗಣೇಶನ ಉತ್ಸವ ಮೂರ್ತಿಯನ್ನು ಶ್ರದ್ಧಾ-ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು.
10 ಎಕರೆಯಲ್ಲಿ ಶರಣ ಗ್ರಾಮ ಶಿಲ್ಪ ಉದ್ಯಾನ
ಕನ್ನಡಪ್ರಭ ವಾರ್ತೆ ವಿಜಯಪುರ: ತಾಲೂಕಿನ ಕಗ್ಗೋಡದಲ್ಲಿನ ಶ್ರೀ ರಾಮನಗೌಡ ಬಾ.ಪಾಟೀಲ (ಯತ್ನಾಳ) ಗೋರಕ್ಷಾ ಕೇಂದ್ರದಲ್ಲಿ 10 ಎಕರೆ ಪ್ರದೇಶದಲ್ಲಿ ₹ 25 ಕೋಟಿ ವೆಚ್ಚದಲ್ಲಿ ಶ್ರೀ ಸಿದ್ದೇಶ್ವರ ಜಾತ್ರೆ ಆಧಾರಿತ ಮತ್ತು ಕಲ್ಯಾಣ ಕ್ರಾಂತಿಗೆ ಕಾರಣರಾದ 770 ಶರಣರನ್ನೊಳಗೊಂಡ, ಶರಣ ಗ್ರಾಮ ಶಿಲ್ಪ ಉದ್ಯಾನವನ ನಿರ್ಮಿಸುವ ಯೋಜನೆಯಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಪಕ್ಷದ ಮುಖಂಡರು ಬಯಸಿದರೆ ಮತ್ತೆ ಅಖಾಡಕ್ಕೆ ಧುಮುಕಲಿದ್ದೇನೆ ಎಂದು ಸಂಸದ ರಮೇಶ ಜಿಗಜಿಣಗಿ
ಇಂಡಿ ತಾಲೂಕಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಬೆಂಬಲ ನೀಡಿದರೆ ಮತ್ತೆ चुनावಕ್ಕೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ
ಕನ್ನಡಪ್ರಭ ವಾರ್ತೆ ವಿಜಯಪುರ ಸಮಾಜದ ಅಭಿವೃದ್ಧಿಗೆ ವಿಶಿಷ್ಟವಾದ ಕಲೆ ಸಂಸ್ಕೃತಿಯನ್ನು ಹೊಂದಿದ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ ಹೇಳಿದರು. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಾಸಕ ಮುನಿರತ್ನ ಗಡೀಪಾರಿಗೆ ಆಗ್ರಹ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಬಿಜೆಪಿ ಶಾಸಕ ಮುನಿರತ್ನ ನಾಯ್ಡು ದಲಿತರ ಜಾತಿ ನಿಂದನೆ ಮಾಡಿದ್ದು, ಅವರನ್ನು ಬಿಜೆಪಿ ವರಿಷ್ಠರು ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಜೊತೆಗೆ ಶಾಸಕನ ಆಸ್ತಿ ಪಾಸ್ತಿ ಸರ್ಕಾರ ಸ್ವಾಧೀನಪಡಿಸಿಕೊಂಡು ರಾಜ್ಯದಿಂದ ಗಡೀಪಾರು ಮಾಡಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿದವು.
ಆರೋಗ್ಯವಂತ ಸಮಾಜಕ್ಕೆ ಪೌಷ್ಟಿಕ ಆಹಾರ ಅಗತ್ಯ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಇತ್ತೀಚೆಗೆ ಮಕ್ಕಳು ಮಾತ್ರವಲ್ಲದೆ ಹರೆಯದವರಲ್ಲೂ ಅಪೌಷ್ಟಿಕತೆ ಹಾಗೂ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಂಡು ಬರುತ್ತಿದೆ. ಅಪೌಷ್ಟಿಕತೆ ನಿವಾರಣೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಸಿಂದಗಿ ಸಿಡಿಪಿಒ ಶಂಭುಲಿಂಗ ಹಿರೇಮಠ ಹೇಳಿದರು.
ಸ್ವಚ್ಛತಾ ಹಿ ಸೇವಾ ಅಭಿಯಾನ ವಿದ್ಯುಕ್ತ ಚಾಲನೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ ವಿದ್ಯುಕ್ತ ಚಾಲನೆ ನೀಡಿದರು. ಅಭಿಯಾನದ ಅಂಗವಾಗಿ ಜಿಪಂ ಎಲ್ಲಾ ಕೊಠಡಿ, ವಾಹನ ನಿಲುಗಡೆ ಸ್ಥಳ, ಸಾರ್ವಜನಿಕರ ಭೇಟಿ ಸ್ಥಳ ಮತ್ತು ಉದ್ಯಾನ ಸ್ಥಳವು ಸೇರಿದಂತೆ ಒಳಾಂಗಣ ಮತ್ತು ಹೊರ ಆವರಣಗಳನ್ನು ಸ್ವಚ್ಛತೆ ಮಾಡಲಾಯಿತು. ಕರ್ತವ್ಯ ಸ್ಥಳದಲ್ಲಿಯೂ ಸ್ವಚ್ಛತೆ ಕಾಪಾಡಬೇಕು ಎಂದು ಸಿಇಒ ಸೂಚನೆ ನೀಡಿದರು. ಇದೇ ವೇಳೆ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಆಲಮೇಲ ಪ.ಪಂನಲ್ಲಿ ಕಾಂಗ್ರೆಸ್‌ ಬಿಜೆಪಿ ದೋಸ್ತಿ
ಕನ್ನಡಪ್ರಭ ವಾರ್ತೆ ಆಲಮೇಲ ಕಳೆದ ಒಂದೂವರೆ ತಿಂಗಳಿನಿಂದ ಕುತೂಹಲ ಕೆರಳಿಸಿದ್ದ ಆಲಮೇಲ ಪಟ್ಟಣ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಮುಗಿದಿದ್ದು, ಕಾಂಗ್ರೆಸ್‌ ಬಿಜೆಪಿ ದೋಸ್ತಿಯಾಗುವ ಮೂಲಕ ಸ್ಥಾನಗಳನ್ನು ಹಂಚಿಕೊಂಡಿವೆ. ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲಾಗಿದ್ದು, ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಪಾಲಾಗಿದೆ. ಮಂಗಳವಾರ ಪಟ್ಟಣದ ಪಟ್ಟಣ ಪಂಚಾಯತಿ ಕಚೇರಿಯಲ್ಲಿ 11ಕ್ಕೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಸಾಧಿಕ್‌ ಸುಂಬಡ, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ 4ನೇ ವಾರ್ಡ್‌ ಸದಸ್ಯೆ ಸುಮಾ ಕತ್ತಿ ಮಾತ್ರ ನಾಮಪತ್ರ ಸಲ್ಲಿಸಿದರು.
ಬಿಜಾಪುರ ಸೈನಿಕ ಶಾಲೆಯ 61ನೇ ಸಂಸ್ಥಾಪನಾ ದಿನ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸೈನಿಕ ಶಾಲೆಯ 61ನೇ ಸಂಸ್ಥಾಪನಾ ದಿನವನ್ನು ಸಂಭ್ರಮದಿಂದ ಆಚರಿಸಲಾಯತು.ಬೆಂಗಳೂರಿನ ಎವಿಎಸ್ಎಂ, ವಿಎಂ, ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್, ಹೆಡ್ ಕ್ವಾರ್ಟರ್ಸ್ ಟ್ರೈನಿಂಗ್ ಕಮಾಂಡ್ ಏರ್ ಮಾರ್ಷಲ್ ನಾಗೇಶ್ ಕಪೂರ್ ಮಾತನಾಡಿ, ಉತ್ತಮ ಶಿಕ್ಷಣವು ಬಲವಾದ ಅಡಿಪಾಯವನ್ನು ಒದಗಿಸುತ್ತದೆ. ಈ ಆಧುನಿಕ ಮತ್ತು ಸ್ಪರ್ಧಾತ್ಮಕ ಪ್ರಪಂಚದ ಸವಾಲುಗಳನ್ನು ಎದುರಿಸಲು ಕೌಶಲ್ಯಗಳು ಅವಶ್ಯಕವಾಗಿವೆ. ಅವು ನಿಮ್ಮನ್ನು ಸದೃಢ ಗೊಳಿಸುತ್ತವೆ ಎಂದು ಹೇಳಿದರು.
ರಾಜ್ಯ ಕ್ರಿಕೆಟ್ ತಂಡಕ್ಕೆ ಶ್ರೇಯಾ ಚವ್ಹಾಣ ಆಯ್ಕೆ
ಕನ್ನಡಪ್ರಭ ವಾರ್ತೆ ವಿಜಯಪುರ: 19 ವರ್ಷ ವಯೋಮಾನದ ಕರ್ನಾಟಕ ರಾಜ್ಯ ಕ್ರಿಕೆಟ್‌ ಮಹಿಳಾ ಟಿ-20 ಹಾಗೂ ಏಕದಿನ ಸರಣಿಗೆ ನಗರದ ಶ್ರೇಯಾ ಚವ್ಹಾಣ ಆಯ್ಕೆಯಾಗಿದ್ದಾಳೆ. ರಾಜ್ಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಶ್ರೇಯಾ ಚವ್ಹಾಣ ಅಕ್ಟೋಬ‌ರ್ 1ರಿಂದ ಚೆನೈಯಲ್ಲಿ ನಡೆಯಲಿರುವ ರಾಜ್ಯ ಮಹಿಳಾ ಅಂಡರ್-19 ತಂಡದಲ್ಲಿ ಆಡಲಿದ್ದಾರೆ. ಈ ತಂಡವು ಗುಜರಾತ, ಬರೋಡಾ, ಛತ್ತಿಸಗಡ, ಮಿಜೋರಾಂ ಹಾಗೂ ಮಹಾರಾಷ್ಟ್ರ ತಂಡಗಳ ಜೊತೆಗೆ ಏಕದಿನ ಶ್ರೇಣಿ ಪಂದ್ಯಗಳನ್ನು ಆಡಲಿದೆ.
  • < previous
  • 1
  • ...
  • 188
  • 189
  • 190
  • 191
  • 192
  • 193
  • 194
  • 195
  • 196
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved