• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷದಿಂದ ರಾಗಾರನ್ನು ಖರ್ಗೆ ಉಚ್ಛಾಟನೆ ಮಾಡಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಮೀಸಲಾತಿ ತೆಗೆದು ಹಾಕುತ್ತೇವೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿಕೆಯನ್ನು ಬಿಜೆಪಿ ಎಸ್ಸಿ ಪೋರ್ಚಾ ಘಟಕ ಖಂಡಿಸುತ್ತಿರುವುದಾಗಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಂಜುನಾಥ ಮೀಸೆ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ರಾಹುಲಗಾಂಧಿ ಅವರು ವಿದೇಶಕ್ಕೆ ಹೋಗಿ ಭಾರತದ ವಿರುದ್ಧ ಹೇಳಿಕೆ ನೀಡುವುದು ಕೆಲಸ ಖಂಡನೀಯ‌. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಕೊಟ್ಟಿರುವ ಮೀಸಲಾತಿ ದಲಿತರ ಹಕ್ಕು ಅದು ಕಾಂಗ್ರೆಸ್‌ನ ಭಿಕ್ಷೆಯಲ್ಲ. ಅದನ್ನು ಅರಿತುಕೊಳ್ಳದ ರಾಹುಲ ಗಾಂಧಿ ಅವರು ಅಪ್ರಭುದ್ಧತೆ ಹೇಳಿಕೆ ಕೊಡುತ್ತಿದ್ದಾರೆ.
6 ಸಾವಿರ ಸಸಿ ನೆಡುವ ಕಾರ್ಯಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ವಿಜಯಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವಿಜಯಪುರ ಮತ್ತು ವಿವಿಧ ಇಲಾಖೆಯ ಸಹಯೋಗದೊಂದಿಗೆ, ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಮದಾಪುರದಲ್ಲಿ ಪ್ರಜಾಪ್ರಭುತ್ವ ದಿನದ ನಿಮಿತ್ಯ 6 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು.
ಡಾ.ಕೈಲಾಸನಾಥ ಶ್ರೀಗಳ ಸೇವೆ ವಿಶ್ವ ದಾಖಲೆ
ಕನ್ನಡಪ್ರಭ ವಾರ್ತೆ ಕೊಲ್ಹಾರ ಹಳೆ ಕೊಲ್ಹಾರ ಬಳಿಯ ಕೃಷ್ಣಾ ನದಿ ತಟದಲ್ಲಿರುವ ಶೀಲವಂತ ಹಿರೇಮಠದ ಡಾ.ಕೈಲಾಸನಾಥ ಶ್ರೀಗಳ ಆಧ್ಯಾತ್ಮಿಕ ಸಮಾಜ ಸೇವೆಯು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಶನಿವಾರ ಬೆಂಗಳೂರು ಮಲ್ಲೇಶ್ವರಂನ ಸೇವಾ ಸದನ ಸಾಂಸ್ಕೃತಿಕ ಭವನದಲ್ಲಿ ಜರುಗಿದ ರಿಯಾಲಿಟಿ ಬುಕ್ ಆಫ್ ವರ್ಲ್ಡ್‌ ರಿಕಾರ್ಡ್‌ನಲ್ಲಿ ಗಿನ್ನಿಸ್ ದಾಖಲೆ ಸಮಾರಂಭದಲ್ಲಿ ಶ್ರೀಗಳಿಗೆ ಗಿನ್ನಿಸ್ ದಾಖಲೆ ಸಮಿತಿ ಪದಾಧಿಕಾರಿಗಳಾದ ಡಾ.ಹರ್ಷವರ್ಧನ, ಡಾ.ವಂದನಾ ಡಿಸೋಜ, ಡಾ.ಮಹೇಶಾನಂದಜಿ, ಡಾ.ನಂಬಿ ರಾಜ್, ಡಾ.ವೇದಾ ದೀಕ್ಷಿತ, ಡಾ.ರುಭೇರಿ ಇಮ್ಯಾನುಯೆಲ್‌, ಡೆಪ್ಯುಟಿ ಕಮಿಷನರ್ ಡಾ.ಶ್ರೀನಿವಾಸ, ಡಾ.ಎ.ಪಿ.ಶ್ರೀನಾಥ, ಡಾ.ಅನಂತಮೂರ್ತಿ ಕುಪ್ಪುಸ್ವಾಮಿ, ಡಾ.ಸೆಲ್ವನ್ ಸೇರಿದಂತೆ ಅನೇಕ ಗಿನ್ನಿಸ್ ದಾಖಲೆಯ ಪ್ರಶಸ್ತಿ ನೀಡಿ ಗೌರವಿಸಿದರು.
ರಾಜೀ ಸಂಧಾನದ ಮೂಲಕ 2990 ಪ್ರಕರಣ ಇತ್ಯರ್ಥ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯಿಂದ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಿತು. ಲೋಕ ಅದಾಲತ್‌ನಲ್ಲಿ ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು 6291 ಬಾಕಿ ಇರುವ ಪ್ರಕರಣಗಳಲ್ಲಿ 1866 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಆ ಪೈಕಿ ಒಟ್ಟು 1265 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಮೋದಿ, ಯೋಗಿ ಇರೋವರೆಗೂ ಬಾಲ ಬಿಚ್ಚಂಗಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಹಿಂದುಗಳ ಪವಿತ್ರ ಹಬ್ಬವಾದ ಗಣೇಶ ಚತುರ್ಥಿಯ ಮೆರವಣಿಗೆಯನ್ನು ಸಹಿಸುವ ಶಕ್ತಿ ಇಲ್ಲಿ ಕೆಲವರಿಗೆ ಇಲ್ಲ. ಮೋದಿ ಮತ್ತು ಯೋಗಿ ಇರುವವರೆಗೂ ನೀವಿಲ್ಲಿ ಬಾಲ ಬಿಚ್ಚಕ್ಕಾಗಲ್ಲ. ಇಲ್ಲಿ ಇರಬೇಕೆಂದರೆ ಚಂದವಾಗಿ ಇರಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ದೇಶ ಹಾಗೂ ಧರ್ಮ ವಿರೋಧಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದರು.
ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಆಟಗಾರರಿಗೆ ಉತ್ತಮ ಭವಿಷ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಮುಂದಿನ ದಿನಮಾನಗಳಲ್ಲಿ ರಾಜ್ಯದ, ಅದರಲ್ಲೂ ಉತ್ತರ ಕರ್ನಾಟಕದ ಟೆನ್ನಿಸ್‌ಬಾಲ್‌ ಕ್ರಿಕೆಟ್‌ ಆಟಗಾರರಿಗೆ ಉಜ್ವಲ ಭವಿಷ್ಯವಿದೆ ಎಂದು ಕರ್ನಾಟಕ ರಾಜ್ಯ T10 ಟೆನ್ನಿಸಬಾಲ ಕ್ರಿಕೆಟ್‌ ಅಸೋಶಿಯೇಷನ್‌ ಬೆಂಗಳೂರು ಮತ್ತು ಉತ್ತರ ಕರ್ನಾಟಕ T10 ಟೆನ್ನಿಸಬಾಲ್‌ ಕ್ರಿಕೆಟ್‌ ಅಸೋಶಿಯೇಷನ್‌ ವಿಜಯಪುರದ ಪ್ರಧಾನ ಕಾರ್ಯದರ್ಶಿ ಡಾ.ಅಶೋಕಕುಮಾರ ಜಾಧವ ಹೇಳಿದರು.
.ವೈಭವಯುತ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ
ತಾಳಿಕೋಟೆ: ಪಟ್ಟಣದಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಏಳನೇ ದಿನದಂದು ವಿವಿಧ ವಾದ್ಯ ಮೇಳಗಳೊಂದಿಗೆ ವೈಭವಯುತ ಮೆರವಣಿಗೆ ಮೂಲಕ ಶುಕ್ರವಾರ ಅದ್ಧೂರಿಯಾಗಿ ವಿಸರ್ಜಿಸಲಾಯಿತು. ಪಟ್ಟಣದಲ್ಲಿ ವಿವಿಧ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಗಳನ್ನು ಮೆರವಣಿಗೆಯ ಮೂಲಕ ರಾಜವಾಡೆಗೆ ಆಗಮಿಸಿದವು. ನಂತರ ರಾಜವಾಡೆಯಲ್ಲಿ ಸಾಮೂಹಿಕ ಪೂಜಾ ಕಾರ್ಯಕ್ರಮ ನೇರವೇರಿಸಿ ವಿಸರ್ಜನಾ ಮೇರವಣಿಗೆಗೆ ಚಾಲನೆ ನೀಡಲಾಯಿತು.
ವಿರೇಶ ನಗರದಿಂದ ಆಲಮಟ್ಟಿವರೆಗೆ ಮಾನವ ಸರಪಳಿ
ಕನ್ನಡಪ್ರಭ ವಾರ್ತೆ ವಿಜಯಪುರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿರುವ ಮಾನವ ಸರಪಳಿ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜನೆ ಮಾಡಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಣೇಶ ಮಂಡಳಿಯಿಂದ ಲೋಕ ಕಲ್ಯಾಣಾರ್ಥ ನವಗ್ರಹ ಹೋಮ
ವಿಜಯಪುರ: ಶ್ರೀ ಗಜಾನನ ಉತ್ಸವ ಮಹಾಮಂಡಳದ ವತಿಯಿಂದ ನಗರದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದಲ್ಲಿ ಪ್ರತಿಷ್ಠಾಸಿದ ಶ್ರೀ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಸ್ಥಳದಲ್ಲಿ ಬೆಳಗ್ಗೆ ಏಳು ಗಂಟೆಯಿಂದ 10 ಗಂಟೆಯ ವರೆಗೆ ಲೋಕ ಕಲ್ಯಾಣಾರ್ಥಕವಾಗಿ ಗಣ ಹೋಮ, ನವಗ್ರಹ ಹೋಮ, ನರಸಿಂಹ ಹೋಮ, ಸುದರ್ಶನ ಹೋಮ ನಡೆಸಲಾಯಿತು.
ರಕ್ತದಾನದಿಂದ ಮಾತ್ರ ವೈದ್ಯಕೀಯ ಲೋಕಕ್ಕೆ ಭವಿಷ್ಯ
ದೇಶ ಸೇವೆಗೆ ಸಮಾನವಾದ ಕೆಲಸ. ರಕ್ತದಾನದಿಂದ ಮಾತ್ರ ವೈದ್ಯಕೀಯ ಲೋಕ ಭವಿಷ್ಯದಲ್ಲಿ ಭದ್ರವಾಗಿರಲು ಸಾಧ್ಯವೆಂದು ಪಟ್ಟಣದ ಮನಗೂಳಿ ಆಸ್ಪತ್ರೆಯ ಮುಖ್ಯ ವೈದ್ಯ ಡಾ.ಶಾಂತವೀರ ಮನಗೂಳಿ ಹೇಳಿದರು.
  • < previous
  • 1
  • ...
  • 191
  • 192
  • 193
  • 194
  • 195
  • 196
  • 197
  • 198
  • 199
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved