• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರನ್ನು ಒಕ್ಕಲೆಬ್ಬಿಸುವ ರಾಜ್ಯ ಸರ್ಕಾರ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ಶೇ.50 ಕ್ಕಿಂತ ಹೆಚ್ಚು ಆಸ್ತಿ ಒತ್ತುವರಿ ಆಗಿದೆಂದು ನೂರಾರು ವರ್ಷಗಳಿಂದ ಇಲ್ಲಿನ ರೈತರು ಉಳುತ್ತಿರುವ ಭೂಮಿಯನ್ನು ನೋಟಿಸ್ ನೀಡಿ ವಕ್ಫ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದೆ. ಈಗಾಗಲೇ, ರೈತರಿಗೆ, ಖಾಸಗಿ ವ್ಯಕ್ತಿಗಳಿಗೆ ನೋಟಿಸ್‌ ನೀಡಿದ್ದು ಪ್ರಕ್ರಿಯೆ ಶುರುವಾಗಿದೆಯೆಂದು ಮಾಧ್ಯಮಗಳು ವರದಿ ಮಾಡಿವೆ. ಸುಮಾರು 30-40 ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.
ಬನ್ನಿ ವಿತರಿಸಿ ವಿಜಯದಶಮಿಯ ಹಬ್ಬ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನೆಲ್ಲೆಡೆ ಶನಿವಾರ ಸಂಜೆಯಿಂದ ತಡರಾತ್ರಿವರೆಗೂ ವಿಜಯದಶಮಿಯ ಬನ್ನಿ ಮುಡಿಯುವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ನಗರದಾದ್ಯಂತ ಬಡಾವಣೆಗಳಲ್ಲಿ ಭಕ್ತರು ತಾಯಿ ಚಾಮುಂಡಿಗೆ ಸಂಜೆಯ ಪೂಜೆಯನ್ನು ನೆರವೇರಿಸಿದರು. ನಗರದ ಪ್ರಮುಖ ಬಡಾವಣೆಗಳ ರಸ್ತೆಗಳ ಮುಂದೆ ಪ್ರತಿಷ್ಠಾಪಿಸಲಾಗಿದ್ದ ದೇವಿಗಳ ಮೂರ್ತಿಗಳಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು.
ಪರಸ್ಪರ ಭ್ರಾತೃತ್ವ ಮೂಡಿಸುವ ವಿಜಯದಶಮಿ
ಕನ್ನಡಪ್ರಭ ವಾರ್ತೆ ಇಂಡಿ: ನಗರದಲ್ಲಿ ವಿಜಯದಶಮಿ ನಿಮಿತ್ತ ಭಾನುವಾರ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಜನರೊಂದಿಗೆ ಬೆರೆತು ಬನ್ನಿ ವಿನಿಮಯ ಮಾಡಿಕೊಳ್ಳುವ ಮೂಲಕ ಹಬ್ಬ ಆಚರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಹೋದರತ್ವದ ಸಂಕೇತವೇ ಬನ್ನಿ ವಿನಿಮಯ. ನಮ್ಮ ಬದುಕಿನಲ್ಲಿ ಸುಖ, ಶಾಂತಿ ನಲೆಸಲಿ, ರೈತರಿಗೆ ಸಮದ್ಧ ಬೆಳೆ, ಮಳೆ ನೀಡಲಿ ಎಂದು ಆದಿಶಕ್ತಿಯಲ್ಲಿ ಪ್ರಾರ್ಥಿಸಿದರು. ನಮ್ಮ ಮನಸ್ಸಿನಲ್ಲಿನ ಕೆಟ್ಟ ಯೋಚನೆ, ನಮ್ಮ ದುಶ್ಚಟಕ್ಕೆ ತಿಲಾಂಜಲಿ ಹೇಳುವುದಕ್ಕೆ ವಿಜಯದಶಮಿ ಕಾರಣವಾಗಬೇಕು.
ಮನುಷ್ಯನಿಗೆ ಮಾನಸಿಕ ಆರೋಗ್ಯವು ಅತ್ಯವಶ್ಯಕ
ಕನ್ನಡಪ್ರಭ ವಾರ್ತೆ ವಿಜಯಪುರ ಮನುಷ್ಯನಿಗೆ ಮಾನಸಿಕ ಆರೋಗ್ಯವು ಅತ್ಯವಶ್ಯಕವಾಗಿದ್ದು, ಒತ್ತಡರಹಿತ ಅಥವಾ ಆರೋಗ್ಯಕರವಾದ ದಿನಚರಿ ಮತ್ತು ಸೂಕ್ತ ಚಿಕಿತ್ಸೆ ಮೂಲಕ ಪಡೆಯುವುದರೊಂದಿಗೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಬಿಎಲ್‌ಡಿಇ ಆಸ್ಪತ್ರೆಯ ಮನಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ, ಮನೋಲಯ ಆಸ್ಪತ್ರೆಯ ಮುಖ್ಯಸ್ಥ ಡಾ.ಮನೋವಿಜಯ ಬ.ಕಳಸಗೊಂಡ ಹೇಳಿದರು.
ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ
ಕನ್ನಡಪ್ರಭ ವಾರ್ತೆ ವಿಜಯಪುರ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು, ಮುಖ್ಯಮಂತ್ರಿಯಾಗಿಯೇ ಇದ್ದಾರೆ‌‌, ಮುಖ್ಯಮಂತ್ರಿ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಈ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, 5 ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಕೆಲ ನಾಯಕರ ಅಭಿಮಾನಿಗಳು, ಅವರ ನಾಯಕರು ಸಿಎಂ ಆಗಲಿ ಎಂದು ಘೋಷಣೆ ಕೂಗುತ್ತಾರೆ. ಹಾಗೇ ಘೋಷಣೆ ಕೂಗೋದರಲ್ಲಿ ತಪ್ಪೆನಿಲ್ಲ. ಬಿಜೆಪಿ ಪಕ್ಷದಿಂದ ಮತ್ತೊಂದು ಸುತ್ತಿನ ಹೋರಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ತಮ್ಮಲ್ಲೇ ನೆಲೆ ಇಲ್ಲ.
ಎಂ.ಬಿ.ಪಾಟೀಲರಿಂದ ಬನ್ನಿ ವಿನಿಮಯ
ಕನ್ನಡಪ್ರಭ ವಾರ್ತೆ ವಿಜಯಪುರ: ವಿಶ್ವವಿಖ್ಯಾತ ದಸರಾ ಹಬ್ಬದ ಹಿನ್ನೆಲೆ ನಗರದ ಮನೆಯಲ್ಲಿ ಬೆಳಗ್ಗೆಯಿಂದಲೇ ಬನ್ನಿ ವಿನಿಮಯ ಕಾರ್ಯದಲ್ಲಿ ಸಚಿವ ಎಂ.ಬಿ.ಪಾಟೀಲ ಭಾಗಿಯಾಗಿದ್ದಾರೆ. ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಬೆಳಗ್ಗೆಯಿಂದಲೂ ಕ್ಷೇತ್ರದ ಜನತೆ, ಅಭಿಮಾನಿಗಳು ಬನ್ನಿ ವಿನಿಮಯಕ್ಕೆ ಆಗಮಿಸುತ್ತಿದ್ದಾರೆ. ವಿದೇಶ ಪ್ರವಾಸ ಮುಗಿಸಿ ನಗರಕ್ಕೆ ಆಗಮಿಸಿರುವ ಸಚಿವರು ಪತ್ನಿ ಆಶಾ ಪಾಟೀಲ್, ಪುತ್ರ ಬಸನಗೌಡ ಪಾಟೀಲ ಕ್ಷೇತ್ರದ ಜನರೊಂದಿಗೆ ಬನ್ನಿ ವಿನಿಮಯದಲ್ಲಿ ಪಾಲ್ಗೊಂಡಿದ್ದರು.
ಗ್ಯಾರಂಟಿಗಳನ್ನು ಚುನಾವಣೆ ಮುಂಚೆ ಘೋಷಿಸಬೇಕಿತ್ತು
ಕನ್ನಡಪ್ರಭ ವಾರ್ತೆ ವಿಜಯಪುರ: ಸಿಎಂ ಸಿದ್ಧರಾಮಯ್ಯ ಚುನಾವಣೆಗೋಸ್ಕರವೇ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಇಲ್ಲವಾದರೆ ಚುನಾವಣೆ ಮುಂಚೆ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಬೇಕಿತ್ತು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಕ್ರೋಶ ಹೊರಹಾಕಿದರು.
ಜಿಲ್ಲಾದ್ಯಂತ ಸಂಭ್ರಮದ ವಿಜಯದಶಮಿ ಆಚರಣೆ
ಕನ್ನಡಪ್ರಭ ವಾರ್ತೆ ವಿಜಯಪುರ ನವರಾತ್ರಿಯಲ್ಲಿ ಒಂಭತ್ತು ದಿನಗಳ ಕಾಲ ನಿರಂತರವಾಗಿ ನಾಡದೇವಿಯ ಪೂಜೆ ಪುನಸ್ಕಾರಗಳಲ್ಲಿ ತೊಡಗಿದ್ದ ಮಹಿಳೆಯರೆಲ್ಲ ಅದ್ಧೂರಿಯಿಂದ ವಿಜಯದಶಮಿ ಆಚರಿಸಿದರು. ಶನಿವಾರ ಜಿಲ್ಲೆಯ ಜನರು ಆಯುಧ ಪೂಜೆ ಹಾಗೂ ವಿಜಯದಶಮಿಯನ್ನು ಸಾಂಪ್ರದಾಯಿಕವಾಗಿ ಸಂಭ್ರಮದಿಂದ ಆಚರಿಸಿದರು. ಹಬ್ಬದ ಹಿನ್ನಲೆಯಲ್ಲಿ ನಗರದ ಮಾರುಕಟ್ಟೆಯಲ್ಲಿ ಹಣ್ಣು, ಹೂ, ಹಾರ, ತೆಂಗಿನಕಾಯಿ, ಕುಂಬಳಕಾಯಿ, ಬನ್ನಿ, ಬಾಳೆಗಿಡಗಳು ಸೇರಿದಂತೆ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಜನರು ಮುಗಿಬಿದ್ದಿದ್ದರು.
ಗ್ರಂಥಾಲಯ ಸ್ಥಳ ವೀಕ್ಷಿಸಿದ ಡಿಸಿ ಟಿ.ಭೂಬಾಲನ್
ಕನ್ನಡಪ್ರಭ ವಾರ್ತೆ ವಿಜಯಪುರ ಬಸವನಬಾಗೇವಾಡಿಯಲ್ಲಿ ಹೊಸದಾಗಿ ಗ್ರಂಥಾಲಯ ನಿರ್ಮಾಣವಾಗುವ ಬಗ್ಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಗ್ರಂಥಾಲಯ ಕಟ್ಟಡದಲ್ಲಿ ಸಾಕಷ್ಟು ಗಾಳಿ ಬೆಳಕು ಬರುವಂತೆ, ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್, ಅಗತ್ಯ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ ನಿರ್ಮಾಣ ಯೋಜನೆ ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಬನ್ನಿ ಗಿಡಕ್ಕೆ ತಾಲೂಕಾಡಳಿತದಿಂದ ಪೂಜೆ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ನಾಗೂರ ರಸ್ತೆಯಲ್ಲಿನ ಬಸವನ ಕಟ್ಟೆಯ ಬನ್ನಿ ಮರಕ್ಕೆ ಸಂಪ್ರದಾಯದಂತೆ ತಾಲೂಕಾಡಳಿತದಿಂದ ಪೂಜೆ ಸಲ್ಲಿಸಿದ ನಂತರ ಬನ್ನಿ ಮುಡಿಯುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ವಿಜಯದಶಮಿ ಹಬ್ಬದ ಪೂಜಾ ಕಾರ್ಯವನ್ನು ರಾಮಾಚಾರಿ ಯಜುರ್ವೇದಿ ನಡೆಸಿಕೊಟ್ಟರು.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 422
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved