• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು. ಜಿಲ್ಲಾ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ ಉಮಾದೇವಿ ಸೊನ್ನದ ಮಾತನಾಡಿ, ಸಮಾಜದಲ್ಲಿಯ ಅನಕ್ಷರಸ್ಥರನ್ನು ಗರುತಿಸಿ, ಅಕ್ಷರಸ್ಥರನ್ನಾಗಿ ಮಾಡುವ ಉಲ್ಲಾಸ್ ಎನ್‌ಐಎಲ್‌ಪಿ, ೧೦೦೦ ಸಂಪೂರ್ಣ ಗ್ರಾಮ ಪಂಚಾಯತಿ ಹಾಗೂ ಲಿಂಕ್ ಡಾಕ್ಯುಮೆಂಟ್ ಸಾಕ್ಷರತಾ ಕಾರ್ಯಕ್ರಮಗಳ ಮೂಲಕ ಸಾಕ್ಷರರನ್ನಾಗಿ ಮಾಡುವ ಕಾರ್ಯ ಯಶಸ್ವಿಯಾಗಿ ನಡೆದಿರುವುದು ಹೆಮ್ಮೆಯ ವಿಷಯ ಎಂದರು.
ಜಾನಪದ ಸಾಹಿತ್ಯದಿಂದ ಬದುಕಿಗೆ ಸನ್ಮಾರ್ಗ
ಕನ್ನಡಪ್ರಭ ವಾರ್ತೆ ವಿಜಯಪುರ ಜಾನಪದ ಸಾಹಿತ್ಯ ಬದುಕಲು ಸನ್ಮಾರ್ಗ ತೋರಿಸಿಕೊಟ್ಟಿದೆ. ಮಾನವೀಯ ಮೌಲ್ಯಗಳನ್ನು ಕಾಪಾಡಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ರಮೇಶ ದೇಸಾಯಿ ಹೇಳಿದರು. ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಜಾನಪದ ಚಿಂತನ ಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದರು.
ಅಪಾಯಕ್ಕೆ ಕಾದಿರುವ ರಸ್ತೆ ಮಧ್ಯದ ತಿರುವು
ಕನ್ನಡಪ್ರಭ ವಾರ್ತೆ ಇಂಡಿ ಇಂಡಿ ನಗರದಿಂದ ಮಾವಿನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿರುವ ತಿರುವೊಂದು ಅಪಾಯಕ್ಕೆ ಕಾದು ಕುಳಿತಿದೆ. ಈ ರಸ್ತೆಯಲ್ಲಿ ಕಾಲುವೆ ಹಾಗೂ ಹಳ್ಳದ ಬಳಿ ಎರಡ್ಮೂರು ಕಡೆಗಳಲ್ಲಿ ರಸ್ತೆ ತಿರುವು ಇರುವುದರಿಂದ ಮುಂದೆ ಬರುವ ವಾಹನಗಳು ಕಾಣುವುದೇ ಇಲ್ಲ. ಅಪಾಯ ಸಂಭವಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಸ್ತೆ ತಿರುವಿನಲ್ಲಿನ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ, ಅಲ್ಲೊಂದು ವೇಗ ನಿಯಂತ್ರಕ (ಹಂಪ್ಸ್‌) ನಿರ್ಮಿಸಿ ವಾಹನ ಸವಾರರು ನಿಧಾನವಾಗಿ ತೆರಳುವಂತೆ ಮಾಡಬೇಕಿದೆ. ಇದರಿಂದ ಅಪಾಯ ಸಂಭವಿಸುವ ಸಾಧ್ಯತೆ ಕಡಿಮೆ ಇದ್ದು, ಅಪಾಯವಾಗುವ ಸಾಧ್ಯತೆಯೂ ಕ್ಷೀಣಲಿದೆ.
ಗಣೇಶ ವಿಸರ್ಜನೆಗೆ ಜಿಲ್ಲಾದ್ಯಂತ ಕಟ್ಟೆಚ್ಚರ
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನಾದ್ಯಂತ ಗಣೇಶ ಚತುರ್ಥಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ್ದು, ಇದೀಗ ಐದು ದಿನಗಳ ಬಳಿಕ ಗಣೇಶ ಮೂರ್ತಿಗಳನ್ನು ಅದ್ಧೂರಿಯಾಗಿ ವಿಸರ್ಜನೆ ಮಾಡಲಾಗುತ್ತಿದೆ. 5ನೇ ದಿನ, 7ನೇ ದಿನ, 9ನೇ ದಿನ ಹಾಗೂ 11ನೇ ದಿನದ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಹಿನ್ನೆಲೆ ಅಹಿತಕರ ಘಟನೆಗಳು ಜರುಗದಂತೆ ನಗರದಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಜೊತೆಗೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯಿಂದ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸಮುದಾಯ ಭವನ, ರಸ್ತೆ, ಸಾರಿಗೆ, ಚರಂಡಿ, ಸಿ.ಸಿ.ರಸ್ತೆ ಸೇರಿದಂತೆ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಜೊತೆಗೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.
ಪುರಸಭೆಗೆ ಮೈಬೂಬ ಅಧ್ಯಕ್ಷ, ಪ್ರೀತಿ ಉಪಾಧ್ಯಕ್ಷೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಜನರು ಕಾತುರದಿಂದ ಎದುರು ನೋಡುತ್ತಿದ್ದ ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಮೈಬೂಬ ಗೊಳಸಂಗಿ ಹಾಗೂ ಉಪಾಧ್ಯಕ್ಷರಾಗಿ ಪ್ರೀತಿ ದೇಗಿನಾಳ ಆಯ್ಕೆಯಾಗಿದ್ದಾರೆ. ಪುರಸಭೆ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಇಬ್ಬರು ಆಯ್ಕೆಯಾಗಿದ್ದಾಗಿ ಚುನಾವಣಾಧಿಕಾರಿ ಹಾಗೂ ತಹಸೀಲ್ದಾರ್‌ ಬಲರಾಮ ಕಟ್ಟಿಮನಿ ಘೋಷಿಸಿದರು.
ಅ.2ರೊಳಗೆ ಸಾರಾಯಿ ಮುಕ್ತ ಗ್ರಾಮ ಮಾಡಿ
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ಯಾವುದಾದರೂ ಒಂದು ಗ್ರಾಮವನ್ನು ಸರಾಯಿ ಮುಕ್ತ ಮಾಡಿದರೇ ಅದು ಮುಂದೆ ಹಲವು ಗ್ರಾಮಗಳಿಗೆ ಪ್ರೇರಣೆಯಾಗುತ್ತದೆ. ಅಬಕಾರಿ ಇಲಾಖೆ ಅಧಿಕಾರಿಗಳು ಆ ಕೆಲಸ ಮಾಡಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲೇ ವೇಗವಾಗಿ ಬೆಳೆಯುತ್ತಿದೆ ನಿಡಗುಂದಿ
ಕನ್ನಡಪ್ರಭ ವಾರ್ತೆ ನಿಡಗುಂದಿ: ಮನಸಿಟ್ಟು ಕೆಲಸ ಮಾಡಿದರೆ ಕ್ಷೇತ್ರದ ಅಭಿವೃದ್ಧಿ ಸಾಧ್ಯ. ಕ್ಷೇತ್ರ ಸೇರಿದಂತೆ ನಿಡಗುಂದಿ ಪಟ್ಟಣ ಮಾದರಿ ಪಟ್ಟಣವಾಗಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಜವಳಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ಪಟ್ಟಣದಲ್ಲಿ ಪಪಂನಿಂದ ಹಮ್ಮಿಕೊಂಡಿದ್ದ ವಿವಿಧ ವಾರ್ಡ್‌ಗಳಲ್ಲಿ ಸಿಸಿರಸ್ತೆ, ಚರಂಡಿ ಹಾಗೂ ಕಾಟಾಪೂರ ರಸ್ತೆ ಬದಿ ಸಸಿ ನೆಡುವ ಕಾರ್ಯಕ್ರಮ ಚಾಲನೆ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸಿ ವೀರೇಶ ನಗರದ ಉದ್ಯಾನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿಯೇ ನಿಡಗುಂದಿ ವೇಗವಾಗಿ ಬೆಳೆಯುತ್ತಿದೆ.
ವಿದ್ಯುತ್‌ ಕ್ಷೇತ್ರದಲ್ಲಿ ರಾಜ್ಯ ಸ್ವಾವಲಂಬಿ
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯ ಇಂದು ವಿದ್ಯುತ್‌ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿದ್ದು, ಇತರೆ ರಾಜ್ಯಗಳಿಗೆ ವಿದ್ಯುತ್ ಕೊಡುವಷ್ಟರ ಮಟ್ಟಿಗೆ ಸಶಕ್ತವಾಗಿದೆ ಎಂದು ಶಾಸಕ ಹಾಗೂ ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು. ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದಿಂದ ತಾಲೂಕಿನ ನಾದ ಗ್ರಾಮದಲ್ಲಿ ನಿರ್ಮಿಸಿದ 110 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಇಂಧನ ಇಲಾಖೆಯು ಗ್ರಾಮೀಣ, ನಗರಗಳಿಗೆ ವಿದ್ಯುತ್‌ ಪೊರೈಸುವುದರ ಮೂಲಕ ಯಶಸ್ಸು ಕಂಡಿದೆ.
ದೇಶಭಕ್ತಿಯಿಂದ ಧರ್ಮ, ದೇಶ ಉಳಿವು ಸಾಧ್ಯ
ಕನ್ನಡಪ್ರಭ ವಾರ್ತೆ ಕೊಲ್ಹಾರ: ಯುವಕರು ದುಶ್ಚಟಗಳ ದಾಸರಾಗದೇ ದೇಶಭಕ್ತಿ ಮೈಗೂಡಿಸಿಕೊಂಡರೆ ಹಿಂದೂ ಧರ್ಮ ಹಾಗೂ ದೇಶವನ್ನು ಉಳಿಸಲು ಸಾಧ್ಯ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಬಾಲಶಿವಯೋಗಿ ಸಿದ್ಧಲಿಂಗ ಶ್ರೀಗಳು ಹೇಳಿದರು. ಪಟ್ಟಣದ ಸಂಗಮೇಶ್ವರ ಸರ್ಕಲ್‌ನಲ್ಲಿ ಸರ್ವ ಗಜಾನನ ಮಂಡಳಿ ಸಹಯೋಗದಲ್ಲಿ ಗಣೇಶೋತ್ಸವ ಪ್ರಯುಕ್ತ ಹಮ್ಮಿಕೊಂಡ ಧರ್ಮಸಭೆಯಲ್ಲಿ ಮಾತನಾಡಿದ ಅವರು, ಇಂದಿನ ಯುವಕರು ಧೂಮಪಾನ ಹಾಗೂ ಮಧ್ಯಪಾನ ವ್ಯಸನಿಗಳಾಗುತ್ತಿದ್ದಾರೆ.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved