• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊರಗುತ್ತಿಗೆ ನೌಕರರಿಗೂ ಇಎಸ್‌ಐ,ಪಿಎಫ್‌ ಸೌಲಭ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಹೊರಗುತ್ತಿಗೆ ನೌಕರರನ್ನು ನಿಯೋಜಿಸಿರುವ ಗುತ್ತಿಗೆ ಕಂಪನಿಗಳು ಅವರಿಗೆ ಸೂಕ್ತವಾಗಿ ಇಎಸ್‌ಐ-ಪಿಎಫ್ ಇತರೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಪ್ಪ ಆಶಾಪೂರ ಹೇಳಿದರು.
ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಯೋಜನೆ ತಲುಪಿಸಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಪಟ್ಟಣದಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರಿ ಯೋಜನೆಗಳನ್ನು ತಲುಪಿಸಬೇಕು. ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ಜೀವನ ಇರೋವರೆಗೂ ದಲಿತ ಸಿಎಂಗಾಗಿ ಹೋರಾಟ
ಕನ್ನಡಪ್ರಭ ವಾರ್ತೆ ಇಂಡಿ ನನ್ನ ಜೀವನ ಇರುವವರೆಗೂ ದಲಿತ ಮುಖ್ಯಮಂತ್ರಿಗಾಗಿ ಒತ್ತಾಯ ಇದ್ದೇ ಇರುತ್ತದೆ. ಕಾಂಗ್ರೆಸ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಆದರೂ ಸಂತೋಷ, ದಲಿತರು ಯಾರೇ ಆದರೂ ಸಂತೋಷ. ಎಲ್ಲ ರಾಜ್ಯಗಳಲ್ಲಿ ದಲಿತ ಮುಖ್ಯಮಂತ್ರಿ ಆಗಿ ಹೋಗಿದ್ದಾರೆ. ನಮ್ಮ ರಾಜ್ಯದಲ್ಲಿ ಏಕೆ ದಲಿತ ಮುಖ್ಯಮಂತ್ರಿ ಆಗಬಾರದು?. ಬಿಜೆಪಿಯಲ್ಲಿಯೂ ದಲಿತ ಮುಖ್ಯಮಂತ್ರಿ ಮಾಡುವಂತೆ ಕೇಳುತ್ತೇನೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಅನುದಾನಿತ ಶಾಲಾ ಶಿಕ್ಷಕರಿಗೆ ಪಿಂಚಣಿ ಕೊಡಿಸಲು ಯತ್ನ
ಕನ್ನಡಪ್ರಭ ವಾರ್ತೆ ವಿಜಯಪುರ ಅನುದಾನಿತ ಶಾಲಾ ಶಿಕ್ಷಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಅವರಿಗೆ ಪಿಂಚಣಿ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಭರವಸೆ ನೀಡಿದರು. ಬಬಲೇಶ್ವರ ಬಾಪೂಜಿ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ವಿಜಯಪುರ ಜಿಲ್ಲಾ ಪ್ರಾಥಮಿಕ ಶಾಲೆ ಮತ್ತು ಬಬಲೇಶ್ವರ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಕರ ದಿನೋತ್ಸವ ಪ್ರಯುಕ್ತ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಗಣಪತಿಗೆ ಕಲ್ಲು ಎಸೆದ ಮತ್ತೊಬ್ಬನ ಬಂಧನ
ಕನ್ನಡಪ್ರಭ ವಾರ್ತೆ ವಿಜಯಪುರ: ಅ.2ರ ತಡರಾತ್ರಿ ನಗರದ ಗಣಪತಿ ವೃತ್ತದ ಗಣೇಶ ಮೂರ್ತಿಯ ಮೇಲೆ ಕಲ್ಲು ತೂರಿದ ಪ್ರಕರಣದಲ್ಲಿ ಗಾಂಧಿ ಚೌಕ್‌ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜುಬೇರ್ ನಾಗರ್ಜಿ(25) ಬಂಧಿತನಾಗಿದ್ದು, ಘಟನೆ ಮಾರನೇ ದಿನವೇ ಓರ್ವ ಆರೋಪಿ ಸೋಹೆಲ್ ಜಮಾದಾರನನ್ನು ವಶಕ್ಕೆ ಪಡೆದಿದ್ದರು.
ಆದಿಶಕ್ತಿ ತರುಣ ಮಂಡಳಿಯಿಂದ ಅದ್ಧೂರಿ ನವರಾತ್ರಿ ಉತ್ಸವ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಬಸವೇಶ್ವರ ಆದಿಶಕ್ತಿ ತರುಣ ಮಂಡಳಿಯಿಂದ ಆಚರಿಸಲಾಗುವ ನವರಾತ್ರಿ ಉತ್ಸವ ಅದ್ದೂರಿಯಾಗಿದ್ದು, ಜನರನ್ನು ಆಕರ್ಷಿಸುವಲ್ಲಿ ವಿಶೇಷ ಖ್ಯಾತಿ ಪಡೆದಿದೆ ಎಂದು ಮಂಡಳಿಯ ಸಂಚಾಲಕ ಹಾಗೂ ಮಹಾನಗರ ಪಾಲಿಕೆ ಮಾಜಿ ಉಪ ಮಹಾಪೌರ ರಾಜೇಶ ದೇವಗಿರಿ ಹೇಳಿದರು.
ಆಲಮೇಲಗೆ ₹ 145 ಕೋಟಿಯ ತೋಟಗಾರಿಕೆ ಕಾಲೇಜು
ಕನ್ನಡಪ್ರಭ ವಾರ್ತೆ ಆಲಮೇಲ ಆಲಮೇಲ ಪಟ್ಟಣಕ್ಕೆ ಮಂಜೂರಾಗಿರುವ ತೋಟಗಾರಿಕೆ ಕಾಲೇಜು ಆರಂಭಕ್ಕೆ ₹ 145 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮೊದಲ ಹಂತದಲ್ಲಿ ₹ 40 ಕೋಟಿ ಮಂಜೂರಾಗಿ ₹ 10 ಕೋಟಿ ಬಿಡುಗಡೆ ಆಗಿದೆ. ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಬಾಗಲಕೋಟ ತೋಟಗಾರಿಕೆ ವಿಶ್ವವಿದ್ಯಾಲಯದ ಉಪ ಕುಲಪತಿ ವಿಷ್ಣುವರ್ಧನ ಹೇಳಿದರು.
ಪಟ್ಟಣದ ಅಭಿವೃದ್ಧಿ ಪೂರಕ ಯೋಜನೆ ರೂಪಿಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಚರಂಡಿ, ಕುಡಿಯುವ ನೀರು, ವಿದ್ಯುತ್‌ ಸೇರಿದಂತೆ ಪಟ್ಟಣದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸ್ಮಾರ್ಟ್‌ಸಿಟಿ ಕನಸಿನ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್‌.ನಾಡಗೌಡ ಹೇಳಿದರು.
ಡೋಣಿ ನದಿ ಬೆಳೆಹಾನಿ ಪ್ರದೇಶಗಳಿಗೆ ತಹಶೀಲ್ದಾರ್‌ ಭೇಟಿ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಡೋಣಿ ನದಿ ಪ್ರವಾಹದಿಂದ ರೈತರಿಗೆ ಉಂಟಾಗಿರುವ ಬೆಳೆ ಹಾನಿ ಪರಿಹಾರ ಒದಗಿಸುವ ಸಂಬಂಧ ತಾಲೂಕಿನ ಡೋಣಿ ನದಿ ತೀರಿದ ವಿವಿಧ ಗ್ರಾಮಗಳಿಗೆ ತಹಸೀಲ್ದಾ‌ರ್ ಪ್ರಕಾಶ ಸಿಂದಗಿ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕಿನ ಸಾತಿಹಾಳ, ಯಾಳವಾರ, ಕೊಂಡಗೂಳಿ ಸೇರಿದಂತೆ ಹಲವು ಬೆಳೆ ಹಾನಿಯಾದ ಸ್ಥಳಗಳಿಗೆ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು.
ಲಾರಿ ಡಿಕ್ಕಿಯಾಗಿ ಬೈಕ್‌ ಸವಾರರ ಸಾವು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಸರಕು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಮನಗೂಳಿ ಪಟ್ಟಣದ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಮುಳವಾಡ ಕ್ರಾಸ್‌ನಲ್ಲಿ ಶುಕ್ರವಾರ ಸಂಭವಿಸಿದೆ. ಮನಗೂಳಿ ಪಟ್ಟಣದ ಭೀಮಶಿ ಯಲಗೂರಪ್ಪ ಹಿಟ್ನಳ್ಳಿ(48) ಮತ್ತು ಖಂಡೋಬಾ ಮಾರ್ತಂಡ ಘೋರ್ಪಡೆ(55) ಇಬ್ಬರು ಮೃತ ದುರ್ದೈವಿಗಳು. ಇವರು ಆಲಮಟ್ಟಿಯಿಂದ ವಿಜಯಪುರ ಕಡೆಗೆ ಹೊರಟ್ಟಿದ್ದ ಲಾರಿಯೊಂದು ರಸ್ತೆ ದಾಟುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 422
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ 7 ವರ್ಷ ಜೈಲು ಶಿಕ್ಷೆ! ಸಂತ್ರಸ್ತರಿಗೆ ಸರ್ಕಾರದಿಂದ ನೆರವು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved