• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡದಲ್ಲಿ ವಚನ ಸಾಹಿತ್ಯಕ್ಕೆ ವಿಶೇಷ ಸ್ಥಾನ
ಕನ್ನಡಪ್ರಭ ವಾರ್ತೆ ಸಿಂದಗಿಕನ್ನಡ ಸಾಹಿತ್ಯ ಪರಂಪರೆಯಲ್ಲಿ ತುಂಬಾ ವಿಶೇಷ ಸ್ಥಾನ ವಚನ ಸಾಹಿತ್ಯಕ್ಕಿದೆ. ಕನ್ನಡನಾಡು ತುಂಬಾ ಸಂಪತ್ಭರಿತ ನಾಡು ಹೊಂದಿದೆ ಎಂದು ಜಾನಪದ ಅಕಾಡೆಮಿ ಸದಸ್ಯ ಡಾ.ಎಂ.ಎಂ.ಪಡಶೆಟ್ಟಿ ಹೇಳಿದರು. ಪಟ್ಟಣದ ತಾಲೂಕು ಶರಣ ಸಾಹಿತ್ಯ ಪರಿಷತ್ತು ಸಿಂದಗಿ ಹಾಗೂ ಆರ್.ಡಿ.ಪಾಟೀಲ ಪ.ಪೂ.ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಹಾಗೂ ಸಂಸ್ಥಾಪಕರಾದ ಸುತ್ತೂರು ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜನ್ಮದಿನದ ಅಂಗವಾಗಿ ಆಯೋಜಿಸಿರುವ ವಚನ ದಿನ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.
ಕ್ರೀಡೆಗೂ ಮಹತ್ವ ನೀಡಿ ಭವಿಷ್ಯ ರೂಪಿಸಿಕೊಳ್ಳಿ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಿ ಸುಂದರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಳ್ಳಬೇಕು. ಈ ಮೂಲಕ ಜೀವನದ ಪ್ರಮುಖ ಘಟ್ಟವಾದ ವಿದ್ಯಾರ್ಥಿ ಜೀವನದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಕರೆ ನೀಡಿದರು.
ಉದ್ದಟತನ ಪ್ರದರ್ಶಿಸದಂತೆ ಸಿಪಿಐ ಎಚ್ಚರಿಕೆ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಯಾವುದೇ ಹಬ್ಬಗಳಿರಲಿ ಒಳ್ಳೆಯ ನೀತಿ ಪಾಠ ಕಲಿಸುತ್ತವೆ, ಹಬ್ಬಗಳಲ್ಲಿ ಸರ್ಕಾರಿ ನಿಯಮಗಳನ್ನು ಪಾಲಿಸಿದರೆ ಅದಕ್ಕೆ ಮಹತ್ವದ ಬರುತ್ತದೆ ಎಂದು ಮುದ್ದೇಬಿಹಾಳ ಸರ್ಕಲ್ ಇನ್ಸಪೆಕ್ಟರ್‌ ಮಲ್ಲಿಕಾರ್ಜುನ ತುಳಸಿಗೇರಿ ಹೇಳಿದರು.
ಸರ್ಕಾರದ ನಿರ್ದೇಶನಗಳಡಿ ಹಬ್ಬಗಳ ಆಚರಿಸಿ: ಸಿಪಿಐ ಆನಂದರಾವ್
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಸರ್ಕಾರದ ನಿರ್ದೇಶನದಂತೆ ಶಾಂತಿಯುತವಾಗಿ ಹಬ್ಬಗಳು ಆಚರಿಸಬೇಕು. ಆಚರಣೆ ಧಾರ್ಮಿಕ ಭಾವನೆಗಳನ್ನು ಗೌರವಿಸುವಂತಿರಬೇಕು. ಯಾರಾದರೂ ಶಾಂತಿಗೆ ಭಂಗ ತಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ವಿಜಯಪುರ ಗ್ರಾಮೀಣ ಸಿಪಿಐ ಆನಂದರಾವ್ ಎಸ್.ಎನ್ ಹೇಳಿದರು.
ಸಾಹಸಿ ಒಂದಲ್ಲ ಒಂದು ದಿನ ಸಾಧಕನಾಗುವ
ಕನ್ನಡಪ್ರಭ ವಾರ್ತೆ ಸಿಂದಗಿ ಬದುಕಿನಲ್ಲಿ ಧೈರ್ಯ ಮತ್ತು ಸಾಹಸಿಯ ಗುಣ ಇರುವ ವ್ಯಕ್ತಿ ಒಂದಲ್ಲ ಒಂದು ದಿನ ಸಾಧಕನಾಗುತ್ತಾನೆ ಎಂದು ಯೋಗ ಗುರು ಶ್ರೀ ನಿರಂಜನ ಸ್ವಾಮೀಜಿ ಹೇಳಿದರು. ಪಟ್ಟಣದ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು 2024-25ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಗ್ರಾಮೀಣ ಜನರಿಗೆ ಶುದ್ಧ ನೀರು, ಸ್ವಚ್ಛತೆ ಕಲ್ಪಿಸಿ
ಕನ್ನಡಪ್ರಭ ವಾರ್ತೆ ಕೊಲ್ಹಾರ ಕೂಡಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎನ್.ಟಿ.ಪಿ.ಸಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಬೇಕು, ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವಿಶೇಷವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು, ಸ್ವಚ್ಛತೆ ಒದಗಿಸುವ ನಿಟ್ಟಿನಲ್ಲಿ ಪಿಡಿಒ, ಅಧ್ಯಕ್ಷರು ಹಾಗೂ ಸದಸ್ಯರು ಕಾರ್ಯನಿರ್ವಹಿಸಬೇಕು ಎಂದು ಜಿಪಂ ಸಿಇಒ ರಿಷಿ ಆನಂದ್ ಹೇಳಿದರು.
ಪಾವತಿಯಾಗದ ಸಾತ್ವಿಕ್ ರಕ್ಷಿಸಿದ ಯಂತ್ರಗಳ ಬಿಲ್!
ಕನ್ನಡಪ್ರಭ ವಾರ್ತೆ ವಿಜಯಪುರ ಕಳೆದ ಏಪ್ರಿಲ್‌ 3 ರಂದು ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಸಾತ್ವಿಕ್‌ ಮುಜಗೊಂಡ ಎಂಬ ಬಾಲಕ ಕೊಳವೆ ಬಾವಿಗೆ ಬಿದ್ದ ಘಟನೆ ರಾಜ್ಯಾದ್ಯಂತ ಸುದ್ದಿಯಾಗು ಮೂಲಕ ಎಲ್ಲ ಕರಳು ಚುರ್‌ ಎನ್ನುವಂತೆ ಮಾಡಿತ್ತು. ಕೊನೆಗೆ ಆನತ ಅದೃಷ್ಟ ಚೆನ್ನಾಗಿದ್ದರಿಂದ ಮತ್ತು ವಿವಿಧ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆಯಿಂದ ಆತ ಬದುಕಿ ಬಂದ.
ಬಾರ ಎತ್ತಿ ಕಸರತ್ತು ಪ್ರದರ್ಶಿಸಿದ ಪೈಲ್ವಾನರು
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಮೂರನೇ ದಿನವಾದ ಬುಧವಾರ ಸಿಬಿಎಸ್‌ಸಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಬಾರ ಎತ್ತುವ ಸ್ಪರ್ಧೆಗಳು ಜನರ ಮೈಮನ ರೋಮಾಂಚನಗೊಳಿಸಿದವು. ೯೫ ಕೆಜಿ, ೧ ಕ್ವಿಂಟಾಲ್, ೧ ಕ್ವಿಂಟಾಲ್‌ಕ್ಕಿಂತಲೂ ಹೆಚ್ಚಿನ ಬಾರದ ಗುಂಡುಗಲ್ಲು, ಸಂಗ್ರಾಣಿ ಕಲ್ಲು ಎತ್ತುವ ಮೂಲಕ ಪೈಲ್ವಾನರು ತಮ್ಮ ಶಕ್ತಿ ಪ್ರದರ್ಶಿಸಿದರು. ಜನರು ಸುಡು ಬಿಸಿಲನ್ನು ಲೆಕ್ಕಿಸದೇ ಘೋಷಣೆಗಳನ್ನು ಕೂಗಿ ಹುರಿದುಂಬಿಸಿದರು. ವಿಜೇತರಾದವರಿಗೆ ಬಸವೇಶ್ವರ ಜಾತ್ರಾ ಉತ್ಸವ ಸಮಿತಿಯಿಂದ ಬೆಳ್ಳಿ ಕಡಗ ನೀಡಿ ಸನ್ಮಾನಿಸಲಾಯಿತು.
ಕ್ರೀಡೆಯತ್ತ ಆಸಕ್ತಿ ಬೆಳೆಸಿಕೊಳ್ಳಿ: ಎಂ.ಬಿ.ಅಂಗಡಿ
ಕನ್ನಡಪ್ರಭ ವಾರ್ತೆ ನಾಲತವಾಡ ಶೈಕ್ಷಣಿಕ ಕ್ಷೇತ್ರದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲು ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ವೀರೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಅಂಗಡಿ ಹೇಳಿದರು. ಪಟ್ಟಣದ ವೀರೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಆವರಣದಲ್ಲಿ ಮಂಗಳವಾರ ನಡೆದ ನಾಲತವಾಡ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಇಂದು ಉತ್ತಮ ಭವಿಷ್ಯವಿದೆ, ಅತ್ಯಂತ ಕಡು ಬಡ ಮಕ್ಕಳೆ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಾರೆ.
ವಸತಿ ನಿಲಯ ಸ್ಥಳಾಂತರಕ್ಕೆ ಶಾಸಕರ ಸೂಚನೆ
ಮುದ್ದೇಬಿಹಾಳ ಪಟ್ಟಣದ ಬಸವ ನಗರದಲ್ಲಿನ ಶಿಥಿಲಾವಸ್ಥೆಯಲ್ಲಿರುವ ಖಾಸಗಿ ಕಟ್ಟಡದಲ್ಲಿರುವ ವಸತಿ ನಿಲಯಕ್ಕೆ ಹಾಗೂ ಬಿದರಕುಂದಿ ಆರ್.ಎಂ.ಎಸ್.ಎ ಶಾಲೆ ಹತ್ತಿರ ನೂತನವಾಗಿ ನಿರ್ಮಾಣಗೊಂಡಿರುವ ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಹಾಗೂ ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಸೋಮವಾರ ದಿಢೀರ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 399
  • next >
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್​ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್‌.ಸಂತೋಷ್‌ ಚಪ್ಪಾಳೆ
ಎಂಎಂ ಹಿಲ್ಸ್‌ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved