• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶನಿಗೆ ವಿಶೇಷ ಗಂಗಾರತಿ: ರಾಜ್ಯದಲ್ಲೇ ಮೊದಲು
ಕನ್ನಡಪ್ರಭ ವಾರ್ತೆ ವಿಜಯಪುರ: ನಗರದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಲ್ಲಿ ಗಜಾನನ ಮಹಾ ಮಂಡಳಿಯಿಂದ ಪ್ರತಿಷ್ಠಾಪಿಸಲಾಗಿರುವ ಗಣೇಶನಿಗೆ ಗಂಗಾ ಆರತಿ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ವಾರಣಾಸಿಯಿಂದ ಆಗಮಿಸಿದ್ದ ಐವರು ಅರ್ಚಕರ ತಂಡ ಗಣೇಶನಿಗೆ ಒಂದುಗಂಟೆ ಕಾಲ ಗಂಗಾ ಆರತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ಗಣೇಶನಿಗೆ ಗಂಗಾ ಆರತಿ ಬೆಳಗಿ ವಿಶೇಷ ಪೂಜೆ ಸಲ್ಲಿಸಿರುವುದು ರಾಜ್ಯದಲ್ಲಿಯೇ ಇದೇ ಪ್ರಪ್ರಥಮ ಬಾರಿಗೆ ಎನ್ನಲಾಗುತ್ತಿದೆ.
ಅಂಗನವಾಡಿಗಳಿಗೆ ಸಿಇಒ ಭೇಟಿ ಪರಿಶೀಲನೆ
ಕನ್ನಡಪ್ರಭ ವಾರ್ತೆ ವಿಜಯಪುರ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಸರ್ಕಾರಿ ಅಂಗನವಾಡಿ ಕೇಂದ್ರಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರದ ಆಕರ್ಷಣೀಯ ಮತ್ತು ಸುಸಜ್ಜಿತ ಕಟ್ಟಡ ಮತ್ತು ಮಕ್ಕಳ ಕಲಿಕೆ, ವಿವಿಧ ಕ್ರಿಯಾ ಚಟುವಟಿಕೆಗಳನ್ನು ವೀಕ್ಷಿಸಿದರು. ಅಲ್ಲಿರುವ ಮಕ್ಕಳೊಂದಿಗೆ ಸಂವಾದ ನಡೆಸಿ, ಮಕ್ಕಳಿಗೆ ಪ್ರಶ್ನೆಗಳನ್ನು ಕೇಳಿ ಅವರಿಂದ ಉತ್ತರ ಪಡೆದರು. ಅಂಗನವಾಡಿ ಕೇಂದ್ರದ ಮಕ್ಕಳಿಗಾಗಿ ಸಿದ್ಧಪಡಿಸಿದ ಆಹಾರದ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು.
ಮಕ್ಕಳ ವೈಜ್ಞಾನಿಕ ಕೌಶಲಕ್ಕೆ ಸಮನ್ವಯ ಹಬ್ಬ ಸಾಕ್ಷಿ
ಕನ್ನಡಪ್ರಭ ವಾರ್ತೆ ವಿಜಯಪುರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಲ್ಲಿರುವ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಬಿ.ಎಂ.ಪಾಟೀಲ ಫೌಂಡೇಶನ್ ವತಿಯಿಂದ ತರಬೇತಿ ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಎಸ್.ಎಸ್.ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮನ್ವಯ ಹಬ್ಬ, ಶ್ರೀ ಕೃಷ್ಣ ಜನ್ಮಾಷ್ಠಮಿ, ಫುಡ್ ಫೆಸ್ಟಿವಲ್, ಹೊಸ ಬೋಧನಾ ಕೊಠಡಿಗಳು, ಗಣಿತ, ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿದರು.
ವಸಂತ ನಾಡಿಗೇರಗೆ ಕಾನಿಪ ಸದಸ್ಯರಿಂದ ನುಡಿನಮನ
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಪತ್ರಿಕೋದ್ಯಮದಲ್ಲಿ ವಿಶಿಷ್ಟ ಛಾಪು ಮೂಡಿಸಿ, ಅನಾರೋಗ್ಯದಿಂದ ನಿಧನರಾದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದಿಂದ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆ ಆರಂಭಕ್ಕೆ ಮುನ್ನ ನಿಧನರಾದ ಪತ್ರಕರ್ತ ವಸಂತ ನಾಡಿಗೇರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು.
ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಬಿಜೆಪಿಗೆ ಅನ್ಯಾಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಶಾಸಕರು ಮಧ್ಯಸ್ಥಿಕೆ ವಹಿಸಿದ್ದರಿಂದ ಬಿಜೆಪಿ ಸದಸ್ಯರಿಗೆ ಅನ್ಯಾಯವಾಗಿದೆ. ಇದು ಸಂವಿಧಾನ ವಿರೋಧಿ ಚುನಾವಣೆಯಾಗಿ ಇದನ್ನು ನಾವು ಖಂಡಿಸುತ್ತೇವೆ ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ ಹಾಗೂ ಸದಾಶಿವ ಮಾಗಿ ಹೇಳಿದ್ದಾರೆ.
ಕೇಂದ್ರ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು. ಜಿಲ್ಲಾ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ ಉಮಾದೇವಿ ಸೊನ್ನದ ಮಾತನಾಡಿ, ಸಮಾಜದಲ್ಲಿಯ ಅನಕ್ಷರಸ್ಥರನ್ನು ಗರುತಿಸಿ, ಅಕ್ಷರಸ್ಥರನ್ನಾಗಿ ಮಾಡುವ ಉಲ್ಲಾಸ್ ಎನ್‌ಐಎಲ್‌ಪಿ, ೧೦೦೦ ಸಂಪೂರ್ಣ ಗ್ರಾಮ ಪಂಚಾಯತಿ ಹಾಗೂ ಲಿಂಕ್ ಡಾಕ್ಯುಮೆಂಟ್ ಸಾಕ್ಷರತಾ ಕಾರ್ಯಕ್ರಮಗಳ ಮೂಲಕ ಸಾಕ್ಷರರನ್ನಾಗಿ ಮಾಡುವ ಕಾರ್ಯ ಯಶಸ್ವಿಯಾಗಿ ನಡೆದಿರುವುದು ಹೆಮ್ಮೆಯ ವಿಷಯ ಎಂದರು.
ಜಾನಪದ ಸಾಹಿತ್ಯದಿಂದ ಬದುಕಿಗೆ ಸನ್ಮಾರ್ಗ
ಕನ್ನಡಪ್ರಭ ವಾರ್ತೆ ವಿಜಯಪುರ ಜಾನಪದ ಸಾಹಿತ್ಯ ಬದುಕಲು ಸನ್ಮಾರ್ಗ ತೋರಿಸಿಕೊಟ್ಟಿದೆ. ಮಾನವೀಯ ಮೌಲ್ಯಗಳನ್ನು ಕಾಪಾಡಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಂಶುಪಾಲ ರಮೇಶ ದೇಸಾಯಿ ಹೇಳಿದರು. ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಜಾನಪದ ಚಿಂತನ ಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದರು.
ಅಪಾಯಕ್ಕೆ ಕಾದಿರುವ ರಸ್ತೆ ಮಧ್ಯದ ತಿರುವು
ಕನ್ನಡಪ್ರಭ ವಾರ್ತೆ ಇಂಡಿ ಇಂಡಿ ನಗರದಿಂದ ಮಾವಿನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿರುವ ತಿರುವೊಂದು ಅಪಾಯಕ್ಕೆ ಕಾದು ಕುಳಿತಿದೆ. ಈ ರಸ್ತೆಯಲ್ಲಿ ಕಾಲುವೆ ಹಾಗೂ ಹಳ್ಳದ ಬಳಿ ಎರಡ್ಮೂರು ಕಡೆಗಳಲ್ಲಿ ರಸ್ತೆ ತಿರುವು ಇರುವುದರಿಂದ ಮುಂದೆ ಬರುವ ವಾಹನಗಳು ಕಾಣುವುದೇ ಇಲ್ಲ. ಅಪಾಯ ಸಂಭವಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಸ್ತೆ ತಿರುವಿನಲ್ಲಿನ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿ, ಅಲ್ಲೊಂದು ವೇಗ ನಿಯಂತ್ರಕ (ಹಂಪ್ಸ್‌) ನಿರ್ಮಿಸಿ ವಾಹನ ಸವಾರರು ನಿಧಾನವಾಗಿ ತೆರಳುವಂತೆ ಮಾಡಬೇಕಿದೆ. ಇದರಿಂದ ಅಪಾಯ ಸಂಭವಿಸುವ ಸಾಧ್ಯತೆ ಕಡಿಮೆ ಇದ್ದು, ಅಪಾಯವಾಗುವ ಸಾಧ್ಯತೆಯೂ ಕ್ಷೀಣಲಿದೆ.
ಗಣೇಶ ವಿಸರ್ಜನೆಗೆ ಜಿಲ್ಲಾದ್ಯಂತ ಕಟ್ಟೆಚ್ಚರ
ಕನ್ನಡಪ್ರಭ ವಾರ್ತೆ ವಿಜಯಪುರ ನಾಡಿನಾದ್ಯಂತ ಗಣೇಶ ಚತುರ್ಥಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದ್ದು, ಇದೀಗ ಐದು ದಿನಗಳ ಬಳಿಕ ಗಣೇಶ ಮೂರ್ತಿಗಳನ್ನು ಅದ್ಧೂರಿಯಾಗಿ ವಿಸರ್ಜನೆ ಮಾಡಲಾಗುತ್ತಿದೆ. 5ನೇ ದಿನ, 7ನೇ ದಿನ, 9ನೇ ದಿನ ಹಾಗೂ 11ನೇ ದಿನದ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಹಿನ್ನೆಲೆ ಅಹಿತಕರ ಘಟನೆಗಳು ಜರುಗದಂತೆ ನಗರದಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಜೊತೆಗೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯಿಂದ ಗಣೇಶ ಮೂರ್ತಿಗಳ ವಿಸರ್ಜನೆಗೆ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಸಮುದಾಯ ಭವನ, ರಸ್ತೆ, ಸಾರಿಗೆ, ಚರಂಡಿ, ಸಿ.ಸಿ.ರಸ್ತೆ ಸೇರಿದಂತೆ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಜೊತೆಗೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved