• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೂಳಪ್ಪ ಮುತ್ಯಾ ಪಲ್ಲಕ್ಕಿ ಜಾತ್ರೆಯ ಸಂಭ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ: ನಾಗರ ಅಮಾವಾಸ್ಯೆ ಪ್ರಯುಕ್ತ ನಡೆಯುವ ಗೂಳಪ್ಪ ಮುತ್ಯಾ ಜಾತ್ರೆ ಅಪಾರ ಭಕ್ತ ಸಮೂಹದೊಂದಿಗೆ ನಾಗಠಾಣ ಗ್ರಾಮದಲ್ಲಿ ಜರುಗಿತು. ರವಿವಾರ ನಸುಕಿನ ಜಾವ 4 ಗಂಟೆಗೆ ಗೂಳಪ್ಪ ಮುತ್ಯಾನ ಪಲ್ಲಕ್ಕಿಯು ಗ್ರಾಮದ ಭೀರದೇವರ ಪಲ್ಲಕ್ಕಿ, ಕಗ್ಗೋಡ ತಿಪರಾಯ ಮತ್ತು ಲಕ್ಷ್ಮೀ ದೇವರ, ತಿಡಗುಂದಿ ಭೀರದೇವರ ಪಲ್ಲಕ್ಕಿಯೊಂದಿಗೆ ತಳೇವಾಡ, ಗೂಗದಡ್ಡಿ, ಸಾರವಾಡ ಗ್ರಾಮದ ಡೊಳ್ಳಿನ ವಾಲಗ ಹಾಗೂ ಗೊಂಬೆ ಕುಣಿತದೊಂದಿಗೆ, ಸಕಲ ವಾದ್ಯ ಮೇಳದೊಂದಿಗೆ ಮೆರವಣಿಗೆ ನಡೆಸಲಾಯಿತು.
ನಾಗರ ಅಮವಾಸ್ಯೆ: ದೇವಸ್ಥಾನಗಳಲ್ಲಿ ಭಕ್ತರ ದಂಡು
ಕನ್ನಡಪ್ರಭ ವಾರ್ತೆ ಆಲಮಟ್ಟಿ: ಭಾನುವಾರ ನಾಗರ ಅಮವಾಸ್ಯೆಯ ನಿಮಿತ್ತ ಆಲಮಟ್ಟಿ ಸುತ್ತಮುತ್ತಲಿನ ವಿವಿಧ ದೇವರ ದರ್ಶನಕ್ಕೆ ಭಕ್ತರ ದಂಡೇ ಹರಿದು ಬಂದಿತು. ಯಲಗೂರದ ಯಲಗೂರೇಶ್ವರ, ಚಂದ್ರಗಿರಿಯ ಚಂದ್ರಮ್ಮ ದೇವಿ, ಯಲ್ಲಮ್ಮನ ಬೂದಿಹಾಳದ ಯಲ್ಲಮ್ಮ ದೇವಸ್ಥಾನಗಳಲ್ಲಿ ಭಾನುವಾರ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಯಲಗೂರದಲ್ಲಂತೂ ಭಕ್ತರ ಸಂಖ್ಯೆ ಅಧಿಕವಾಗಿತ್ತು.
2ನೇ ಪುಟಕ್ಕೆ..ಮಸ್ಟ್.. ಸರ್ಕಾರಿ ಶಾಲೆಯ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸೋಣ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ಶಿಕ್ಷಕ ವೃತ್ತಿ ಸಂತೃಪ್ತಿ ನೀಡಿದ್ದು, ಸರ್ಕಾರಿ ಶಾಲೆಗಳ ಅಭ್ಯುದಯದ ದೃಷ್ಟಿಯಿಂದ ನಾವೆಲ್ಲರೂ ಶ್ರಮವಹಿಸಿ ದುಡಿದು ಮಕ್ಕಳ ಬಾಳಿಗೆ ಬೆಳಕಾಗಬೇಕಿದೆ ಎಂದು ದೇವೂರ್ ಎಲ್.ಟಿ ನಂ.2 ನಿವೃತ್ತ ಶಿಕ್ಷಕ ಶಾಂತಪ್ಪ ತಳವಾರ ಹೇಳಿದರು. ತಾಲೂಕಿನ ದೇವೂರ ಎಲ್.ಟಿ ನಂ.2ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಆಯೋಜಿಸಿದ್ದ ಬೀಳ್ಕೊಡುವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಾಡು, ನುಡಿ ಅಸ್ಮಿತೆಯ ಸೇವೆ ಮಾಡುತ್ತಿರುವ ಕಸಾಪ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ನಾಡಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಉಪನ್ಯಾಸ ಕಾರ್ಯಕ್ರಮ ಸೇರಿದಂತೆ ವಿವಿಧ ಸಾಹಿತ್ಯ ಪರ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಕನ್ನಡನಾಡು, ನುಡಿಯ ಅಸ್ಮಿತೆಯ ಕೈಂಕರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ನುಡಿದರು.
ಪಿಎಸೈಗೆ 20, ಸಿಪಿಐಗೆ 40, ಡಿವೈಎಸ್ಪಿಗೆ 50 ಲಕ್ಷ ರು. ರೇಟ್‌ ಫಿಕ್ಸ್‌ : ಬಯಲಾದ ಖಾಕಿಪಡೆ ವರ್ಗಾವಣೆ ದಂಧೆ
ಪಿಎಸ್‌ಐ ಪರಶುರಾಮ್ ಸಾವಿನ ನಂತರ ಬಯಲಾದ ಖಾಕಿಪಡೆ ವರ್ಗಾವಣೆ ದಂಧೆ
ಎಂಬಿಎ, ಎಂಸಿಎ ಪ್ರವೇಶ ಪರೀಕ್ಷೆಗೆ ಸಿದ್ಧತೆ
ಕನ್ನಡಪ್ರಭ ವಾರ್ತೆ ವಿಜಯಪುರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಎಂಬಿಎ ಹಾಗೂ ಎಂಸಿಎ ಪದವಿ ಪ್ರವೇಶ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಎಂಬಿಎ ಹಾಗೂ ಎಂಸಿಎ ಪ್ರವೇಶ ಪರೀಕ್ಷೆಯ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಆ.೪ರಂದು ಪರೀಕ್ಷೆ ಜರುಗಲಿವೆ.
ಲೋಕಾಯುಕ್ತರಿಗೆ ಸಮಗ್ರ ಮಾಹಿತಿ ನೀಡಿ
ಕನ್ನಡಪ್ರಭ ವಾರ್ತೆ ವಿಜಯಪುರ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹಾಗೂ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಆಗಸ್ಟ್‌ ತಿಂಗಳಲ್ಲಿ ವಿಜಯಪುರ ಜಿಲ್ಲೆಯ ವಿವಿಧೆಡೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೇ, ವಿವಿಧೆಡೆ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ವೇಳೆ ಅಧಿಕಾರಿಗಳು ಸಮಗ್ರ ಮಾಹಿತಿಯೊಂದಿಗೆ ಸನ್ನದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜನರಿಗೆ ತೊಂದರೆಯಾಗದಂತೆ ವ್ಯಾಪಾರ ನಡೆಸಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಪಾದಚಾರಿಗಳಿಗೆ, ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ಬೀದಿ ಬದಿಯ ವ್ಯಾಪಾರಸ್ಥರು ವ್ಯಾಪಾರ ವಹಿವಾಟು ನಡೆಸಬೇಕೆಂದು ತಹಸೀಲ್ದಾರ್‌ ವೈ.ಎಸ್.ಸೋಮನಕಟ್ಟಿ ಸೂಚನೆ ನೀಡಿದರು. ಪಟ್ಟಣದ ಪುರಸಭೆಯಲ್ಲಿ ನಡೆದ ಬೀದಿ ಬದಿಯ ವ್ಯಾಪಾರಿಗಳ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಶಾಲೆ, ಆಸ್ಪತ್ರೆ, ಸರ್ಕಾರಿ ಕಟ್ಟಡ, ನ್ಯಾಯಾಲಯ, ಅಗ್ನಿಶಾಮಕ ಕಚೇರಿ ಮುಂತಾದ ಪ್ರಮುಖ ಪ್ರದೇಶದಿಂದ ಕನಿಷ್ಠ ೧೦೦ ಮೀಟರ್ ದೂರದಲ್ಲಿ ಬೀದಿ ಬದಿಯ ವ್ಯಾಪಾರಸ್ಥರು ತಮ್ಮ ವ್ಯಾಪಾರ ಮಾಡಬೇಕು.
ತಾಳಿಕೋಟೆಯಲ್ಲೇ ಸಂಗೀತ ಪರೀಕ್ಷೆ ನಡೆಸಲು ಆಗ್ರಹ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಹಿಂದೂಸ್ತಾನಿ ಸಂಗೀತ ನೃತ್ಯ ತಾಳವಾದ್ಯ ವಿಷಯದ ಪರೀಕ್ಷೆಗಳನ್ನು ಈ ಹಿಂದಿನಂತೆಯೇ ತಾಳಿಕೋಟೆಯಲ್ಲಿ ನಡೆಸಬೇಕು ಎಂದು ಒತ್ತಾಯಿಸಿ ಶ್ರೀ ಖಾಸ್ಗತೇಶ್ವರ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ಹಾಗೂ ಸಂಗೀತ ಅಭಿಮಾನಿಗಳು ಶನಿವಾರ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಸೈನಿಕರ ತ್ಯಾಗ, ಬಲಿದಾನದಿಂದ ದೇಶ ಸುರಕ್ಷಿತ
ಕನ್ನಡಪ್ರಭ ವಾರ್ತೆ ಸಿಂದಗಿ ಕಾರ್ಗಿಲ್ ಕೇವಲ ಭೂಮಿಯಲ್ಲ, ನೂರಾರು ವೀರಯೋಧರು ತಮ್ಮ ರಕ್ತದ ಮೂಲಕ ಭಾರತ ಮಾತೆಗೆ ಅಭಿಷೇಕ ಮಾಡಿದ ಸ್ಥಳ ಎಂದು ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ನಿರ್ದೇಶಕ ವಿಶ್ವನಾಥ ಕುರಡೆ ಹೇಳಿದರು. ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಘದ ಕಾವ್ಯಾ ಶಿಕ್ಷಣ ಸಮೂಹ ಸಂಸ್ಥೆಗಳ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಹಾಗೂ ನಿವೃತ್ತ ಮಾಜಿ ಸೈನಿಕರಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 399
  • next >
Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved