• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವ್ಯಕ್ತಿ ಹತ್ಯೆ ಮಾಡಿ ಕಾರಲ್ಲಿ ಬಿಟ್ಟುಹೋದ ದುಷ್ಕರ್ಮಿಗಳು
ಕನ್ನಡಪ್ರಭ ವಾರ್ತೆ ವಿಜಯಪುರವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ಕಾರಿನಲ್ಲಿ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ಐಗಳಿ ಪೊಲೀಸ್ ಸ್ಟೇಷನ್‌ ವ್ಯಾಪ್ತಿಯ ಕೋಹಳ್ಳಿ ಗ್ರಾಮದ ಸಂಗಪ್ಪ ರಾಮು ದೇವಕತೆ (58) ಹತ್ಯೆಯಾದವರು. ಮಹಾರಾಷ್ಟ್ರದ ಪರವಾನಗಿ ಹೊಂದಿರುವ ಕಾರಿನಲ್ಲಿ ಸಂಗಪ್ಪನ ಶವ ಪತ್ತೆಯಾಗಿದೆ.
ಪರೀಕ್ಷೆಗೆ ಸೀಮಿತವಾದ ವಿದ್ಯಾಭ್ಯಾಸ ಸಲ್ಲದು
ಕನ್ನಡಪ್ರಭ ವಾರ್ತೆ ವಿಜಯಪುರ ಜ್ಞಾನ ಅಸೀಮವಾದದ್ದು. ಜ್ಞಾನವೇ ನಿಜವಾದ ಪ್ರಕಾಶ, ಜೀವನ ಪೂರ್ತಿ ವಿದ್ಯೆ ಸಂಗ್ರಹಿಸಿ ಸಮಾಜದ ಒಳಿತಿಗೆ ಬಳಸಬೇಕು. ನಿಜವಾದ ವಿದ್ಯೆಯಿಂದ ಬದುಕು ಪರಿವರ್ತನೆ ಆಗಲು ಸಾಧ್ಯ ಎಂದು ಕಾತ್ರಾಳ-ಬಾಲಗಾಂವ ಗುರುದೇವಾಶ್ರಮದ ಅಮೃತಾನಂದ ಸ್ವಾಮೀಜಿ ಹೇಳಿದರು. ನಗರದ ಇಟ್ಟಂಗಿಹಾಳ ರಸ್ತೆಯ ಎಕ್ಸಲೆಂಟ್ ಶಾಲೆಯಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ಹಾಗೂ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಜರುಗಿದ ವಿದ್ಯಾಲಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಗತಿವಿಧಿ, ಪ್ರಾಂತಮಟ್ಟದ ಶಿಕ್ಷಕ ಸ್ವಾಧ್ಯಾಯ ಸಮಾರೋಪ ಸಮಾರಂಭದದಲ್ಲಿ ಅವರು ಮಾತನಾಡಿದರು.
ಗುಡ್ಡಾಪುರದಲ್ಲಿನ ಕರ್ನಾಟಕ ಭವನ ಉದ್ಘಾಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಸುಕ್ಷೇತ್ರ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಬಳಿ ಕರ್ನಾಟಕ ಭವನ ನಿರ್ಮಿಸಲಾಗಿದ್ದು, ಅ.1ರಂದು ಲೋಕಾರ್ಪಣೆಯಾಗಲಿದೆ ಎಂದು ದಾನಮ್ಮದೇವಿ ದೇವಸ್ಥಾನ ಕಮಿಟಿ ಅಧ್ಯಕ್ಷ ವಿಜುಗೌಡ ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಟ್ಟಡ ಲೋಕಾರ್ಪಣೆಗೆ ಅವಧೂತ ವಿನಯ ಗುರೂಜಿ ಆಗಮಿಸಲಿದ್ದಾರೆ.
ಸ್ಪರ್ಧಾತ್ಮಕತೆಗೆ ತಂತ್ರಜ್ಞಾನ ತಿಳುವಳಿಕೆ ಅಗತ್ಯ
ಕನ್ನಡಪ್ರಭ ವಾರ್ತೆ ವಿಜಯಪುರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ತಿಳುವಳಿಕೆ ಅವಶ್ಯಕವಾಗಿದೆ. ತಂತ್ರಜ್ಞಾನವನ್ನು ಪಡೆದು ಬೆಳೆಯಬೇಕಾದರೆ ಭಾಷೆ ಹಾಗೂ ಸಾಹಿತ್ಯದ ಅಧ್ಯಯನ ಅಗತ್ಯವಾಗಿದೆ ಎಂದು ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ.ಕಲಾ ಹಾಗೂ ಕೆ.ಸಿ.ಪಿ.ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ರಾಬಿಯಾ ಮಿರ್ಧೆ ಅಭಿಪ್ರಾಯಪಟ್ಟರು.
ಬಾಂಧವ್ಯ ಬೆಸೆಯುವ ಜಾನಪದ ಸಂಸ್ಕೃತಿ
ಕನ್ನಡಪ್ರಭ ವಾರ್ತೆ ಕೊಲ್ಹಾರ ಜಾನಪದ ಕಲೆ ಯಾವುದೇ ಜಾತಿ, ಮತಗಳ ಬೇಧ ತೊರೆದು ಸಮನ್ವಯ ಸಾಧಿಸುವ ಮೇರು ಸಂಸ್ಕೃತಿ. ಎಲ್ಲ ಜನರನ್ನು ಬಾಂಧವ್ಯದ ಬೆಸುಗೆಯಲ್ಲಿ ಬದುಕುವಂತೆ ಮಾಡುವ ಶಕ್ತಿ ಜಾನಪದ ಸಂಪ್ರದಾಯಕ್ಕಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ಜಾನಪದ ಬಾಲಾಜಿ ತಿಳಿಸಿದರು.
ಆಲಮಟ್ಟಿ ಡ್ಯಾಂನಿಂದ 3.50 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ
ಆಲಮಟ್ಟಿ: ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಯಾಗುತ್ತಿದ್ದು, ಮುಂಜಾಗ್ರತೆಯ ಕ್ರಮವಾಗಿ ಆಲಮಟ್ಟಿ ಜಲಾಶಯದ ಹೊರಹರಿನ ಪ್ರಮಾಣವನ್ನು ಮಂಗಳವಾರ ರಾತ್ರಿ 8 ಗಂಟೆಯಿಂದ 3,50,000 ಕ್ಯುಸೆಕ್ ಗೆ ಹೆಚ್ಚಿಸಲಾಗಿದೆ. ಸೋಮವಾರ 3 ಲಕ್ಷ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿತ್ತು. ಇದರಿಂದ ಆಲಮಟ್ಟಿ ಜಲಾಶಯದ ಮುಂಭಾಗದ ಕೃಷ್ಣಾ ತೀರ ಪ್ರದೇಶದ 100 ಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ.
ಐತಿಹಾಸಿಕ ಸ್ಮಾರಕ ಯುನೆಸ್ಕೋ ಪಟ್ಟಿ ಸೇರ್ಪಡೆಗೆ ಕ್ರಮ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ತಾಜ್‌ಬಾವಡಿಯ ಪುನರುಜ್ಜೀವನಗೊಳಿಸುವುದು ಮತ್ತು ಸಂರಕ್ಷಿಸುವುದಷ್ಟೆ ಅಲ್ಲದೇ ನಗರದಲ್ಲಿರುವ ಐತಿಹಾಸಿಕ ಗೋಲಗುಂಬಜ್, ತಾಜ್‌ಬಾವಡಿ, ಇಬ್ರಾಹಿಂರೋಜಾ ಮತ್ತು ಇತರೆ ಸ್ಮಾರಕಗಳನ್ನು ಸೇರಿಸಿ ಬಿಜಾಪುರ ಸ್ಮಾರಕಗಳ ಸಮೂಹ ಮಾಡಿ ಯುನೆಸ್ಕೋ ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಡಾ.ಎಂ.ಬಿ.ಪಾಟೀಲ ಭರವಸೆ ನೀಡಿದರು.
ಅಜ್ಞಾನ ಅಳೆದು, ಜ್ಞಾನ ತೋರುವನೇ ಗುರು: ಜೋಶಿ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಗುರು ಹಾಗೂ ಗೋವಿಂದ ಮುಂದೆ ಬಂದರೂ ಮೊದಲು ಗುರುವಿಗೆ ನಮಿಸಬೇಕು. ಯಶಸ್ಸು ಸಿಗಬೇಕಾದರೆ ಮುಂದೆ ಗುರಿ ಹಿಂದೆ ಗುರು ಇರಬೇಕೆಂದು ಜ್ಯೋತಿಷ್ಯಶಾಸ್ತ್ರ ಪರಿಣಿತ ವೇ.ವಸಂತಬಟ್ ಜೋಶಿ ನುಡಿದರು. ಅನ್ನಪೂರ್ಣೇಶ್ವರಿ ಭಜನಾ ಮಂಡಳಿಯಿಂದ ಆಶ್ರಯ ಬಡಾವಣೆಯಲ್ಲಿ ನಡೆದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಗುರು ಎಂದರೆ ಅಜ್ಞಾನವನ್ನು ತೊಲಗಿಸಿ ಜ್ಞಾನವನ್ನು ತೋರುವವನು.
ರೈತ, ಸೈನಿಕ ಜಗತ್ತಿನ ಎರಡು ಕಣ್ಣುಗಳು: ಶಿವಪ್ರಕಾಶ ಸ್ವಾಮೀಜಿ
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ಜಗತ್ತಿಗೆ ಅನ್ನ ನೀಡುವ ರೈತ, ಗಡಿ ಕಾಯುವ ಸೈನಿಕ ಎರಡು ಕಣ್ಣುಗಳಿದ್ದಂತೆ. ಇವರು ಇಲ್ಲದಿದ್ದರೆ ಜನರು ನೆಮ್ಮದಿಯಿಂದಿರಲು ಸಾಧ್ಯವಿಲ್ಲ ಎಂದು ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಬಸವ ಭವನದಲ್ಲಿ ಪುರಸಭೆ, ಮಾಜಿ ಸೈನಿಕ ಹಾಗೂ ಅರೆಸೈನಿಕ ಸಂಘದ ಸಹಯೋಗದಲ್ಲಿ ಕಾರ್ಗಿಲ್ ವಿಜಯದ ರಜತ ಮಹೋತ್ಸವದಲ್ಲಿ ಮಾತನಾಡಿದ ಅವರು, ರೈತ ಬಿತ್ತದಿದ್ದರೆ ಅನ್ನ ಸಿಗುವುದಿಲ್ಲ.ಸೈನಿಕ ಗಡಿ ಕಾಯದೇ ಹೋದರೆ ನೆಮ್ಮದಿ ಇರುವುದಿಲ್ಲ ಎಂದು ಹೇಳಿದರು.
ಸಿಂದಗಿಯ ಸಂಗಮೇಶ್ವರ ಲೇಔಟ್‌ನಲ್ಲಿ 2 ತಿಂಗಳಲ್ಲಿ ಬಾಲವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
ಸಿಂದಗಿಯ ಸಂಗಮೇಶ್ವರ ಲೇಔಟ್‌ನಲ್ಲಿ ಬಾಲವನಕ್ಕಾಗಿ ಕಾಯ್ದಿಸಿರುವ ನಿವೇಶನದಲ್ಲಿ 2 ತಿಂಗಳಲ್ಲಿ ಬಾಲವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 399
  • next >
Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved