• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡುಕರ ತಾಣವಾಯ್ತಾ ಶಾಸಕರ ಮಾದರಿ ಶಾಲೆ
ಕನ್ನಡಪ್ರಭ ವಾರ್ತೆ ನಾಲತವಾಡ ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಶಾಲೆಯ ಆವರಣ ಮದ್ಯವ್ಯಸನಿಗಳ ತಾಣವಾದಂತಾಗಿದೆ. ಇಲ್ಲಿಯೇ ಮದ್ಯ ಸೇವಿಸುವ ಕುಡುಕರು ಶಾಲೆಯ ಕೋಣೆಗಳಲ್ಲಿಯೇ ಮದ್ಯದ ಬಾಟಲಿಗಳನ್ನು ಎಸೆದು ಗಲೀಜು ಮಾಡುತ್ತಿದ್ದಾರೆ. ಸೋಮವಾರ ರಾತ್ರಿ ಕೂಡ ಶಾಲಾ ಕೋಣೆಯಲ್ಲಿ ಸಾರಾಯಿ ಬಾಟಲಿ ಎಸೆದು ಹೋಗಿರುವ ಘಟನೆ ನಡೆದಿದೆ.
400, 800 ಮೀ. ಓಟದ ಸ್ಪರ್ಧೆಯಲ್ಲಿ ಅಧಿಕಾ ಪ್ರಥಮ
ಕನ್ನಡಪ್ರಭ ವಾರ್ತೆ ವಿಜಯಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನಗರ ವಲಯ ಹಾಗೂ ಸಿ.ಎಸ್.ಬಿರಾದಾರ ಪ್ರೌಢಶಾಲೆಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗಿದ 2024-25ನೇ ಸಾಲಿನ ವಲಯ ಮಟ್ಟದ ಮೇಲಾಟಗಳ ಕ್ರೀಡಾಕೂಟಗಳಲ್ಲಿ ಪಿಡಿಜೆ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅಧಿಕಾ ಸಾಳುಂಕೆ 400 ಮೀಟರ್ ಓಟ ಮತ್ತು 800 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ.
ಆಲಮಟ್ಟಿಯಲ್ಲಿ ಸಿಎಂಗೆ ಮನವಿಗಳ ಮಹಾಪೂರ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಲಮಟ್ಟಿಗೆ ಆಗಮಿಸುತ್ತಿದ್ದಂತೆ ರೈತರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಲು ಮುಗಿಬಿದ್ದಿದ್ದರು. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡಲು ಸುಪ್ರಿಂ ಕೋರ್ಟ್‌ ಆಯಾ ರಾಜ್ಯ ಸರ್ಕಾರಕ್ಕೆ ನೀಡಿದ ತೀರ್ಪಿನಂತೆ ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಮಾಡಬೇಕು ಮತ್ತು ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ, ಬಡ್ತಿ, ವೃತ್ತಿಪರ ಕೋರ್ಸ್‌ಗಳ ಪ್ರವೇಶ ಸೇರಿ ಎಲ್ಲಾ ಕಡೆ ಜಾತಿವಾರು ಸಮಪಾಲು ಸಿಗುವವರೆಗೂ ಎಲ್ಲ ಪ್ರಕ್ರಿಯೆಗಳನ್ನು ತಕ್ಷಣದಿಂದ ತಡೆಹಿಡಿಯಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾ ಘಟಕದ ಸದಸ್ಯರು ಮನವಿ ಸಲ್ಲಿಸಿದರು.
ಓದುಗರ ಚಾವಡಿಗೆ ನೂತನ ಪದಾದಿಕಾರಿಗಳ ಆಯ್ಕೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಸಾಹಿತ್ಯಿಕ ಚಟುವಟಿಕೆಗಳಿಗೆ ಮೀಸಲಾದ ಓದುಗರ ಚಾವಡಿಯ ಸರ್ವ ಸಾಧಾರಣ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ವೇಳೆ ಅಧ್ಯಕ್ಷರಾಗಿ ಶರಣು ಸಬರದ, ಗೌರವಾಧ್ಯಕ್ಷರಾಗಿ ಬಿ.ಆರ್.ಬನಸೂಡೆ, ಉಪಾಧ್ಯಕ್ಷರಾಗಿ ಸುಭಾಷ ಯಾದವಾಡ, ಬಸವರಾಜ ಕುಂಬಾರ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಉಮರಾಣಿ, ಕಾರ್ಯದರ್ಶಿ ಡಾ.ಎಂ.ಎಸ್.ಮಾಗಣಗೇರಿ, ಸಹ ಕಾರ್ಯದರ್ಶಿಯಾಗಿ ದ್ರಾಕ್ಷಾಯಣಿ ಬಿರಾದಾರ, ಖಜಾಂಚಿ ಮನು ಪತ್ತಾರ, ಸದಸ್ಯರಾಗಿ ಡಾ.ರಾಜಕುಮಾರ ಜೊಳ್ಳಿ, ಯು.ಎನ್.ಕುಂಟೋಜಿ, ಸುಭಾಷ ಕನ್ನುರ, ಮಯೂರ ತಿಳಗೂಳಕರ, ಸೋಮಶೇಖರ ಕುರ್ಲೆ, ಪ್ರೀತಿ ಪಾಟೀಲ, ಸಂಜಯ ಜಂಬೂರೆ ಅವರನ್ನು ಆಯ್ಕೆ ಮಾಡಲಾಯಿತು.
ಕೃಷ್ಣೆಗೆ ಸಿಎಂ ಸಿದ್ಧರಾಮಯ್ಯ ಬಾಗಿನ ಅರ್ಪಣೆ
ಕನ್ನಡಪ್ರಭ ವಾರ್ತೆ ಆಲಮಟ್ಟಿ ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಕೃಷ್ಣಾ ನದಿಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಸ್ಥಳೀಯ ಸಚಿವರು, ಶಾಸಕರು ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಅಲ್ಲದೇ, ಗಂಗಾ ಪೂಜೆ ಸಲ್ಲಿಸಿ ನಾಡಿನ ರೈತರ ಹಿತ ಕಾಪಾಡುವಂತೆ ಪ್ರಾರ್ಥಿಸಿದರು. ಸಿಎಂ ಸಿದ್ದರಾಮಯ್ಯ ಕೃಷ್ಣೆಗೆ ಬಾಗಿನ ಅರ್ಪಿಸುತ್ತಿರುವುದು ಇದು ಐದನೇ ಬಾರಿ.
ಎಂಜಿನಿಯರಿಂಗ್‌, ವೈದ್ಯಕೀಯ ಹಾಸ್ಟೆಲ್‌ ಉದ್ಘಾಟನೆ
ಕನ್ನಡಪ್ರಭ ವಾರ್ತೆ ವಿಜಯಪುರ ನಗರ ವ್ಯಾಪ್ತಿಯ ಕರಾಡದೊಡ್ಡಿಯಲ್ಲಿ ನೂತನವಾಗಿ ನಿರ್ಮಿಸಿದ್ದ ಮೆಟ್ರಿಕ್ ನಂತರದ ಎಂಜನಿಯರಿಂಗ್ ಮತ್ತು ವೈದ್ಯಕೀಯ ಬಾಲಕರ ವಿದ್ಯಾರ್ಥಿ ನಿಲಯವನ್ನು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಮಂಜೂರಾದ ₹ 2 ಕೋಟಿ ಅನುದಾನದಲ್ಲಿ ಅತ್ಯುತ್ತಮವಾದ ವಸತಿ ನಿಲಯ ನಿರ್ಮಾಣ ಮಾಡಲಾಗಿದೆ.
ಡ್ಯಾಂ ಎತ್ತರಕ್ಕೆ ಕೇಂದ್ರ ನೋಟಿಫಿಕೇಷನ್‌ ಮಾಡಿಲ್ಲ
ಕನ್ನಡಪ್ರಭ ವಾರ್ತೆ ವಿಜಯಪುರ ಆಲಮಟ್ಟಿ ಡ್ಯಾಂ ಎತ್ತರಿಸಲು ಕೇಂದ್ರ ಸರ್ಕಾರ ನೋಟಿಫಿಕೇಷನ್ ಮಾಡಬೇಕಿದ್ದು, ಅದನ್ನು ಮಾಡಿಲ್ಲ. ಹೀಗಾಗಿ ಕೇಂದ್ರವು ಕರ್ನಾಟಕ, ಆಂಧ್ರ, ತೆಲಂಗಾಣ ಹಾಗೂ ಮಹಾರಾಷ್ಟ್ರದವರನ್ನು ಕರೆದು ಇದನ್ನು ಇತ್ಯರ್ಥ ಮಾಡಲು ಸಾಧ್ಯವಿದೆ. ಇಲ್ಲವಾದರೆ ನೊಟಿಫಿಕೇಷನ್ ಆಗದೆ ಡ್ಯಾಂ ಎತ್ತರ ಮಾಡಲು ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಆಲಮಟ್ಟಿ ಡ್ಯಾಂಗೆ ಹೂಗಳ ಸಿಂಗಾರ
ವಿಜಯಪುರ: ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಅಣೆಕಟ್ಟು ಭರ್ತಿಯಾಗಿದ್ದು ಡ್ಯಾಂ ತುಂಬ ನೀರು ತುಂಬಿಕೊಂಡು ಕಂಗೊಳಿಸುತ್ತಿದೆ. ಹೀಗಾಹಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಬುಧವಾರ ಕೃಷ್ಣ ನದಿಗೆ ಬಾಗಿನ ಅರ್ಪಣೆಗೆ ಆಗಮಿಸಿದ್ದರು. ಈ ವೇಳೆ ಲಾಲ್ ಬಹದ್ದೂರ್ ಶಾಸ್ತ್ರಿ ಆಣೆಕಟ್ಟಿನ ಮುಖ್ಯ ದ್ವಾರಕ್ಕೆ ಹಾಗೂ ಆಲಮಟ್ಟಿ ಡ್ಯಾಂ ಮೇಲ್ಭಾಗವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.
ರಾಯಣ್ಣಗೆ ಅವಮಾನ: ಗ್ರಾಮದ ಆರೋಪಿಯ ಬಂಧನ
ತಾಳಿಕೋಟೆ: ತಾಲೂಕಿನ ಹಗರಗುಂಡ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ತಾಳಿಕೋಟಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅದೇ ಗ್ರಾಮದ ಯಲ್ಲಾಲಿಂಗ ಸಿದ್ದಪ್ಪ ಚಿಗರಿ ಬಂಧಿತ ಯುವಕ. ಖಚಿತ ಮಾಹಿತಿ ಹಿನ್ನಲೆಯಲ್ಲಿ ಈತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಿಸಿದಾಗ ತಾನೇ ಮಾಡಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ.
ಒಳಮೀಸಲಾತಿ: ಸುಪ್ರೀಂ ಆದೇಶ ಮರುಪರಿಶೀಲಿಸಿ
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಅಸ್ಪೃಶ್ಯತೆ ನಿವಾರಣೆ ಮತ್ತು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ನ್ಯಾಯದ ದೃಷ್ಟಿಯಿಂದ ಮೀಸಲಾತಿ ಒದಗಿಸಿದೆ. ಆದರೆ ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ನೀಡಿದ ೨೦೧೧ರ ಸದಾಶಿವ ಆಯೋಗದ ವರದಿಯ ಆಧಾರ ಇಟ್ಟುಕೊಂಡು ಜನಸಂಖ್ಯೆ ಆಧಾರದ ಮೇಲೆ ಒಳಮೀಸಲಾತಿ ನೀಡುವ ಪ್ರಯತ್ನದಲ್ಲಿದೆ.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved