ಅಕ್ರಮ ಅಫೀಮು, ಗಾಂಜಾಸಾಗಿಸುತ್ತಿದ್ದ ವ್ಯಕ್ತಿ ಸೆರೆವಿಜಯಪುರ: ಅಕ್ರಮವಾಗಿ ಲಾರಿಯಲ್ಲಿ ಅಫೀಮು ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಲಾರಿ ಸಮೇತ ಆರೋಪಿಯನ್ನು ಬಂಧಿಸಿರುವ ಘಟನೆ ಚಡಚಣ ತಾಲೂಕಿನ ಶಿರಾಡೋಣ ಗ್ರಾಮದಲ್ಲಿ ನಡೆದಿದೆ. ದೆಹಲಿ ಮೂಲದ ಬಶೀರ್ ಅಹ್ಮದ್ ಬಂಧಿತ ಆರೋಪಿಯಾಗಿದ್ದು, ಬಂಧಿತ ಆರೋಪಿಯಿಂದ 10 ಕೆಜಿ ಗಾಂಜಾ, 30 ಕೆಜಿ ಅಫೀಮ್, ಒಂದು ಲಾರಿ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.