ಸದ್ದಿಲ್ಲದೆ ನಡೆದಿದೆ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ  ಪಾಳು ಬಿದ್ದಿರುವ ತಾಲೂಕಿನ ಐತಿಹಾಸಿಕ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಪ್ರವಾಸಿ ತಾಣವಾಗಿಸಲು ಶಾಸಕ ಹಾಗೂ ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಮುಂದಾಗಿದ್ದಾರೆ. ಇದಕ್ಕೆ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹಸಿರು ನಿಶಾನೆ ತೋರಿದ್ದು, ವಿಶೇಷ ಇತಿಹಾಸಕಾರರ ನೇಮಕ ಮಾಡಿ ಸಂಪೂರ್ಣ ವರದಿ ಪಡೆದು ಅನುದಾನ ಬಿಡುಗಡೆಗೆ ಸದ್ದಿಲ್ಲದೆ ಸಿದ್ಧತೆ ನಡೆದಿದೆ. ಹೀಗಾಗಿ ಕ್ಷೇತ್ರದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಕಾರ್ಯ ಮತ್ತಷ್ಟು ಮೆರಗು ನೀಡಲಿದೆ.