ವೈದ್ಯರೆಂದರೆ ಪಕ್ತ್ಯಕ್ಷ ದೇವರು: ದೀಪಾ ದೇಸಾಯಿಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ವೈದ್ಯರೆಂದರೆ ಪ್ರತ್ಯಕ್ಷ ದೇವರಿದ್ದಂತೆ. ಸಂಕಷ್ಟದ ಸಮಯದಲ್ಲಿ ತಕ್ಷಣ ನೆನಪಾಗುವವರಲ್ಲಿ ವೈದ್ಯರು ಅಗ್ರಗಣ್ಯರು. ವೈದ್ಯರಿಲ್ಲ ಲೋಕವನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ವೈದ್ಯರಿಗೆ ಎಷ್ಟು ಕೃತಜ್ಞರಾಗಿದ್ದರೂ ಸಾಲದು. ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸಲು ಪ್ರತಿ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ ಎಂದು ಪಟ್ಟಣದ ಲಯನ್ಸ್ ಕ್ಲಬ್ ಅಧ್ಯಕ್ಷೆ ದೀಪಾ ದೇಸಾಯಿ ಹೇಳಿದರು.