• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ವಿಮಾನ ನಿಲ್ದಾಣಕ್ಕೆ 24/7 ಕುಡಿಯುವ ನೀರು, 2 ಸಾವಿರ ಕಿ.ವ್ಯಾ ನಿರಂತರ ವಿದ್ಯುತ್ ಪೂರೈಕೆ, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ್ ಬಿ.ಸಿ ಸೂಚಿಸಿದರು.
ಗುರು ಈ ಜಗತ್ತಿನ ಅದ್ಭುತ ಶಕ್ತಿ: ಕೊಳಮಲಿ
ಕನ್ನಡಪ್ರಭ ವಾರ್ತೆ ವಿಜಯಪುರ ಕಲ್ಲಿನಂತೆ ಇರುವವರನ್ನು ಸುಂದರ ಮೂರ್ತಿಯನ್ನಾಗಿ ಮಾಡಿ ಜಗತ್ತಿಗೆ ಅರ್ಪಿಸಿದ ಕೀರ್ತಿ ಗುರುಗಳಿಗೆ ಸಲ್ಲುತ್ತದೆ. ಗುರು ಈ ಜಗತ್ತಿನ ಅದ್ಭುತವಾದ ಶಕ್ತಿ, ಗುರುಗಳು ತಮ್ಮ ಶ್ರೇಷ್ಠ ಕರ್ತವ್ಯವನ್ನು ನಿರ್ವಹಿಸಿ ಜಗತ್ತಿಗೆ ಮಾದರಿಯಾಗಿದ್ದಾರೆ. ಗುರುಗಳಿಗೆ ಜಗತ್ತಿನಲ್ಲಿ ಪೂಜ್ಯನೀಯ ಸ್ಥಾನವಿದೆ ಎಂದು ಜಾನಪದ ವಿದ್ವಾಂಸ ಪ್ರೊ.ಎ.ಎಚ್.ಕೊಳಮಲಿ ಹೇಳಿದರು.
ಬಿಜೆಪಿ ಅವಧಿಯ ಹಗರಣಗಳ ತನಿಖೆ ನಡೆಯಲಿದೆ
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿ ವಾಲ್ಮೀಕಿ, ಮುಡಾ ಹಗರಣದ ಕುರಿತು ಮುಖ್ಯಮಂತ್ರಿಗಳು ಸುಧೀರ್ಘವಾಗಿ ಮಾತನಾಡಿದ್ದಾರೆ. ಮುಡಾದಲ್ಲಿ ಯಾವುದೇ ಹಗರಣ ಆಗಿಲ್ಲ, ವಾಲ್ಮೀಕಿ ನಿಗಮದ ಹಗರಣ ತನಿಖೆ ಆಗುತ್ತಿದ್ದು, ಎಸ್‌ಐಟಿ, ಇಡಿ ತನಿಖೆ ಮಾಡುತ್ತಿವೆ. ಈಗಾಗಲೇ ಸಾಕಷ್ಟು ಹಣ ರಿಕವರಿ ಆಗಿದೆ, ಉಳಿದದ್ದು ರಿಕವರಿ ಆಗೋದು ಪಕ್ಕಾ. ಬಿಜೆಪಿ ಸರ್ಕಾರದ ಅವಧಿಯಲ್ಲೂ ಹಗರಣಗಳು ನಡೆದಿದ್ದು, ಅವುಗಳನ್ನು ತನಿಖೆ ನಡೆಸುತ್ತೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲಿ
ಕನ್ನಡಪ್ರಭ ವಾರ್ತೆ ತಿಕೋಟಾ ತಾಲೂಕಿನ ಟಕ್ಕಳಕಿ ಮತ್ತು ಸಿದ್ಧಾಪುರ(ಕೆ) ಗ್ರಾಮ ಪಂಚಾಯತಿಗೆ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಅವರು ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಟಕ್ಕಳಕಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತಿ ಅನುಷ್ಠಾನ ಮಾಡುವ ಮಹಾತ್ಮ ಗಾಂಧಿ ನರೇಗಾ ಯೋಜನೆ, ಸ್ವಚ್ಛ ಭಾರತ ಯೋಜನೆ, ಎನ್.ಆರ್.ಎಲ್.ಎಂ ಸೇರಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಫಸಲ್‌ ಭೀಮಾ ಯೋಜನೆಯಡಿ ಅವ್ಯವಹಾರ ಆರೋಪ
ಕನ್ನಡಪ್ರಭ ವಾರ್ತೆ ವಿಜಯಪುರ ಫಸಲ್‌ ಭೀಮಾ ಯೋಜನೆಯಡಿ ವಿಮೆ ಕಟ್ಟಿದ ಜಿಲ್ಲೆಯ ಸಾವಿರಾರು ರೈತರಿಗೆ ಅನ್ಯಾಯವಾಗಿದ್ದು, ಈ ಯೋಜನೆಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿದೆ. ರೈತರಿಗೆ ವಿಮೆಯ ಹಣದ ಪರಿಹಾರಕ್ಕಾಗಿ ಆಗ್ರಹಿಸಿ ಜುಲೈ 23ರಂದು ನಗರದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು. ಅಲ್ಲದೆ ಒಂದು ದಿನದ ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹೇಳಿದರು.
ವಿದ್ಯಾರ್ಥಿಗಳ ಪ್ರತಿಭಟನೆ ಬಳಿಕ ಎಚ್ಚೆತ್ತು ಬಸ್‌ ವ್ಯವಸ್ಥೆ
ಕನ್ನಡಪ್ರಭ ವಾರ್ತೆ ನಾಲತವಾಡ: ಸಮೀಪದ ವೀರೇಶ ನಗರ ಹಾಗೂ ನಾಗಬೇನಾಳ ಗ್ರಾಮದ ವಿದ್ಯಾರ್ಥಿಗಳಿಗೆ ಶಾಲಾ ಸಮಯಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಕಳೆದ ಹಲವು ದಿನಗಳಿಂದ ವೀರೇಶನಗರ ಹಾಗೂ ನಾಗಬೇನಾಳ ಗ್ರಾಮದ ವಿದ್ಯಾರ್ಥಿಗಳು ಶಾಲಾ ಸಮಯಕ್ಕೆ ಬಸ್‌ಗಳು ಬರುತ್ತಿಲ್ಲ, ಮತ್ತು ಕೆಲವು ಬಸ್ ನಿಲ್ಲುಸುತ್ತಿಲ್ಲ ಎಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು.
ಸಹಕಾರಿ ಸಂಘಕ್ಕೆ ಶ್ರೀಶೈಲ ಮೇಟಿ ಅವಿರೋಧ ಆಯ್ಕೆ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ತಾಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ಸಹಕಾರಿ ಸಂಘ ನಿಯಮಿತ ಇದರ ಎರಡನೇ ಅವಧಿಯ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡ ಶ್ರೀಶೈಲ ಮೇಟಿ ಅವರನ್ನು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷ ಕಾಮರಾಜ ಬಿರಾದಾರ ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿ ಗೌರವಿಸಿದರು.
ಕಾರ್‌ ಹಿಟ್‌ ಆಂಡ್‌ ರನ್‌: ಮಹಿಳೆಯರಿಗೆ ಗಂಭೀರ ಗಾಯ
ದೇವರಹಿಪ್ಪರಗಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ವೇಗವಾಗೊ ಬಂದ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ನಿಲ್ಲಿಸಿದೇ ಪರಾರಿಯಾಗಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದ ಬಳಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಭುವನೇಶ್ವರಿಗೆ ಪ್ರಾಮಾಣಿಕ ಸೇವೆ ಸಲ್ಲಿಸೋಣ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕನ್ನಡಪರ ಸಂಘಟನೆಗಳು ಕೇವಲ ನ.1ರ ಕರ್ನಾಟಕ ರಾಜ್ಯೋತ್ಸವಕ್ಕೆ ಸೀಮಿತವಾಗದೇ ಕನ್ನಡ ತಾಯಿ ಭುವನೇಶ್ವರಿಯ ಸೇವೆ ಮಾಡುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸೋಣ. ಜಿಲ್ಲಾ ಸಾಹಿತ್ಯ ಸಮ್ಮೇಳ ಸೇರಿದಂತೆ ಅನೇಕ ಕನ್ನಡ ಕಾರ್ಯಕ್ರಮಗಳನ್ನು ಕನ್ನಡದ ತೇರುವ ಎಳೇಯಬೇಕು ಎಂದು ಅಂದುಕೊಂಡಿದ್ದೇನೆ. ಅದಕ್ಕೆವಿಜಯಪುರ ಜಿಲ್ಲಾ ಕಸಾಪ ಅಧ್ಯಕ್ಷರ ಹಾಗೂ ಸದಸ್ಯರ ಹಿರಿಯ ಅಭಿಪ್ರಾಯ ಪಡೆಯುವುದು ಅತ್ಯವಶ್ಯಕವಾಗಿದೆ ಎಂದು ಕಸಾಪ ತಾಲೂಕು ನೂತನ ಅಧ್ಯಕ್ಷ ಕಾಮರಾಜ ಬಿರಾದಾರ ಹೇಳಿದರು.
ಅಂತರ್ಜಲ ಹೆಚ್ಚಿಸಿದ ಅಮೃತ ಸರೋವರಗಳು
ಕನ್ನಡಪ್ರಭ ವಾರ್ತೆ ಇಂಡಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕೈಗೊಂಡಿರುವ ಅಮೃತ ಸರೋವರಗಳು ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಕಾರಣವಾಗಿವೆ. ಈ ಅಮೃತ ಸರೋವರಗಳು ಮಳೆಗಾಲದಲ್ಲಿ ತುಂಬಿ ಎಪ್ರೀಲ್‌, ಮೇ ತಿಂಗಳ ಬೇಸಿಗೆಯಲ್ಲಿ ಪಶು, ಪಕ್ಷಿ ಮತ್ತು ರೈತರಿಗೆ ನೆರವಾಗಲಿವೆ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 421
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved