ಚೆಕ್ಪೋಸ್ಟ್ಗೆ ಸಿಇಒ ಭೇಟಿ, ಪರಿಶೀಲನೆವಿಜಯಪುರ: ಲೋಕಸಭಾ ಚುನಾವಣೆ 2024ರ ಹಿನ್ನೆಲೆ ನಿಡಗುಂದಿ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 50ರ ಹತ್ತಿರ ಯಲಗೂರ ಕ್ರಾಸ್ ಬಳಿ ಚೆಕ್ಪೋಸ್ಟ್ ಆರಂಭಿಸಲಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಜಿಲ್ಲಾ ಗಡಿ ಭಾಗ ಚೆಕ್ಪೋಸ್ಟ್ ಇದಾಗಿದ್ದು, ಕಂದಾಯ, ಪೊಲೀಸ್, ಕೆಬಿಜೆಎನ್ಎಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.