ಬಿತ್ತನೆಗೂ ಮುನ್ನ ತಪ್ಪದೇ ಬೀಜೋಪಚಾರ ಮಾಡಿಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಮುಂಗಾರು ಹಂಗಾಮಿನ ವಿವಿಧ ತಳಿಯ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತದೆ. ಈ ಸಲ ಹೆಚ್ಚಿನ ಪ್ರದೇಶದಲ್ಲಿ ರೈತರು ತೊಗರಿ, ಮೆಕ್ಕೆಜೋಳ ಹಾಗೂ ವಿವಿಧ ದ್ವಿದಳ ಧ್ಯಾನ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ರೈತರು ಬಿತ್ತನೆಗೆ ಮುನ್ನ ತಪ್ಪದೇ ಬೀಜೋಪಚಾರ ಮಾಡಿ ಬಿತ್ತನೆಮಾಡಬೇಕು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ವಿಲಿಯಂ ರಾಜಶೇಖರ ಹೇಳಿದರು.