ಜಿಗಜಿಣಗಿಗೆ ಮೋದಿ ಸಂಪುಟದಲ್ಲಿ ಸ್ಥಾನ ನೀಡಲು ಒತ್ತಾಯಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಸಂಸದರಾಗಿ ರಮೇಶ ಜಿಗಜಿಣಗಿ ಸತತವಾಗಿ 7ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಮೇಲಾಗಿ ಹೈದರಾಬಾದ ಕರ್ನಾಟಕ ಮತ್ತು ಮುಂಬೈ ಕರ್ನಾಟಕದಲ್ಲಿ ಏಕೈಕ ದಲಿತ ವ್ಯಕ್ತಿಯಾಗಿದ್ದಾರೆ. ಅಲ್ಲದೇ, ಸಾರ್ವಜನಿಕ ಜೀವನದಲ್ಲಿ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಅನುಭವ ಹಿರಿಯ ರಾಜಕಾರಣಿ. ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದಲ್ಲಿ ಬರುವ ಬೀದರ್, ಕಲಬುರ್ಗಿ, ಯಾದಿಗಿರಿ, ಬಳ್ಳಾರಿ ಜಿಲ್ಲೆಗಳ ಬಿಜೆಪಿ ಬೆಳವಣಿಗೆಯ ದೃಷ್ಟಿಯಿಂದಾಗಿ ರಮೇಶ ಜಿಗಜಿಣಗಿಯವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಬೇಕು