ಹೋರಾಟಗಾರ ಲಕ್ಷ್ಮೀನಾರಾಯಣ ನಾಗವಾರ ದಲಿತ ಚೇತನಕನ್ನಡಪ್ರಭ ವಾರ್ತೆ ವಿಜಯಪುರದಲಿತ ಜನಾಂಗವನ್ನು ಮೊದಲ ಸಾಲಿಗೆ ತರಬೇಕು, ಶೋಷಿತ ಸಮುದಾಯಗಳಿಗೆ ಎಲ್ಲ ಹಕ್ಕು ಭಾದ್ಯತೆಗಳು ಸಿಗಬೇಕು, ನೀರಿಗೆ ಜಾತಿ ಇಲ್ಲ, ಬೆಳಕಿಗೆ ಜಾತಿ ಇಲ್ಲ, ಗಾಳಿಗೆ ಜಾತಿ ಇಲ್ಲ, ಮನುಷ್ಯ ಜಾತಿ ಒಂದೇ ಎಂದು ಹೋರಾಟದ ಹೆಜ್ಜೆ ಹಾಕಿದವರು ಲಕ್ಷ್ಮೀ ನಾರಾಯಣ್ ನಾಗವಾರ. ಆದ್ದರಿಂದ ಅವರನ್ನು ಸಂಘಟನಾ ಚೇತನ ಎಂದು ಹೇಳಬೇಕು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.