• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
.ಜೋಡೆತ್ತಿನ ಬಂಡಿಗಳ ಮೆರವಣಿಯಲ್ಲಿ ಪಾದಯಾತ್ರಿಗಳ ಬೀಳ್ಕೊಡುಗೆ
ಬಸವನಬಾಗೇವಾಡಿ: ತಾಲೂಕಿನ ವಡವಡಗಿ ಗ್ರಾಮದಲ್ಲಿ ಕಂಬಿ ಮಲ್ಲಯ್ಯನನ್ನು ಹೊತ್ತು ಪಾದಯಾತ್ರೆಯಲ್ಲಿ ತೆರಳುವ ಗ್ರಾಮದ ಭಕ್ತರನ್ನು ಜೋಡೆತ್ತಿನ ಬಂಡಿಗಳ ಮೆರವಣಿಗೆಯ ಮೂಲಕ ಮಂಗಳವಾರ ಬೀಳ್ಕೊಡಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅಭೀ ಫೌಂಡೇಶನ್ ಸಂಸ್ಥಾಪಕ ಬಸವರಾಜ ಬಿರಾದಾರ ಅವರು ಮಾತನಾಡಿ, ಕಂಬಿ ಮಲ್ಲಯ್ಯನು ಗ್ರಾಮದ ಜೋಡೆತ್ತುಗಳ ಭಾವೈಕ್ಯದ ಸಂಕೇತವಾಗಿದ್ದಾನೆ. ಗ್ರಾಮದಲ್ಲಿ ಜೋಡೆತ್ತುಗಳು ಸದಾ ಉಳಿಯಬೇಕು ಎಂಬ ಸಂದೇಶ ನೀಡುವವನಾಗಿದ್ದಾನೆ ಎಂದು ಹೇಳಿದರು.
ವಿವೇಕ ಬ್ರಿಗೇಡ್‌ದಿಂದ ನೀರಿನ ಅರವಟ್ಟಿಗೆ ವ್ಯವಸ್ಥೆ
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗ ಮಂಗಳವಾರ ವಿವೇಕ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳು ಬೇಸಿಗೆ ಕಾಲದಲ್ಲಿ ಜನರಿಗೆ ಕುಡಿಯುವ ನೀರಿನ ಅರವಟ್ಟಿಗೆ ವ್ಯವಸ್ಥೆ ಮಾಡಿದ್ದಾರೆ. ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು.
ಶಾಸಕರ ಭರವಸೆ ಮೇರೆಗೆ ಸತ್ಯಾಗ್ರಹ ಹಿಂದಕ್ಕೆ
ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಸ್ಥರ ಬೇಡಿಕೆ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಎಂಬ ಶಾಸಕ ಅಶೋಕ ಮನಗೂಳಿ ಅವರ ಭರವಸೆ ಹಿನ್ನೆಲೆಯಲ್ಲಿ ಗಬಸಾವಳಗಿ ಗ್ರಾಮದ ಬಸ್ನಿಲ್ದಾಣ ಬಳಿ ಅವಳಿ ಗ್ರಾಮಸ್ಥರು ಮೂರು ದಿನಗಳಿಂದ ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲೂಕಿಗೆ ಸೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಯಿತು.
30, 31 ರಂದು ವಿಜಯಪುರ ಸಾಂಸ್ಕೃತಿಕ ಜನೋತ್ಸವ
ರಂಗಮಂದಿರದಲ್ಲಿ 13ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಐಡಿವೈಒ ಸಂಘಟನೆ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಹೇಳಿದರು.
ಜಿಗಜಿಣಗಿಯವರಿಂದ ಸಾಧನೆ ಶೂನ್ಯ: ಆಲಗೂರ
ವಿಜಯಪುರ: ಇದು ಬದಲಾವಣೆಯ ಕಾಲ ರಮೇಶ ಜಿಗಜಿಣಗಿಯವರಿಂದ ಏನೂ ಲಾಭವಾಗಿಲ್ಲ ಎನ್ನುವುದು ನಮ್ಮ ಟೀಕೆಯಲ್ಲ. ಇದು ವಾಸ್ತವ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ಹೇಳಿದರು. ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಎರಡು ಸಲ ಚಿಕ್ಕೋಡಿ, ಮೂರು ಸಲ ವಿಜಯಪುರ ಎಂಪಿಯಾಗಿ ಅವರ ಸಾಧನೆ ಶೂನ್ಯ.
ಚೆಕ್‌ಪೋಸ್ಟ್‌ಗೆ ಸಿಇಒ ಭೇಟಿ, ಪರಿಶೀಲನೆ
ವಿಜಯಪುರ: ಲೋಕಸಭಾ ಚುನಾವಣೆ 2024ರ ಹಿನ್ನೆಲೆ ನಿಡಗುಂದಿ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 50ರ ಹತ್ತಿರ ಯಲಗೂರ ಕ್ರಾಸ್ ಬಳಿ ಚೆಕ್‌ಪೋಸ್ಟ್ ಆರಂಭಿಸಲಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಜಿಲ್ಲಾ ಗಡಿ ಭಾಗ ಚೆಕ್‌ಪೋಸ್ಟ್ ಇದಾಗಿದ್ದು, ಕಂದಾಯ, ಪೊಲೀಸ್, ಕೆಬಿಜೆಎನ್‌ಎಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಹಂತಿ ಪದ ಹಾಡಿ ರಂಜಿಸಿದ ಮಾಜಿ ಸಚಿವ ಬೆಳ್ಳುಬ್ಬಿ
ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿನ ದ್ಯಾಮವ್ವ ದೇವಿ ದೇಗುಲದ ಬಳಿ ರವಿವಾರ ತಡರಾತ್ರಿ ಹೋಳಿ ಹಬ್ಬದ ಕಾಮದಹನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹಂತಿಪದ ಹಾಡುವ ಮೂಲಕ ಗಮನ ಸೆಳೆದಿದ್ದು, ಹಾಡಿನ ಮೂಲಕ ಎಲ್ಲರನ್ನು ಬೆಳ್ಳುಬ್ಬಿ ರಂಜಿಸಿದರು. ರೈತರು ಹಾಗೂ ತಮ್ಮ ಸಂಗಡಿಗರೊಂದಿಗೆ ಸೇರಿ ಸಾಂಪ್ರದಾಯಿಕ ಜಾನಪದ ಕಲೆಯ ಹಂತಿ ಪದಗಳನ್ನು ಹಾಡುವ ಮೂಲಕ ಮಾಜಿ ಸಚಿವರು ಸಾಂಪ್ರದಾಯಿಕ ಹಬ್ಬದ ಸವಿಯನ್ನು ಸವಿದರು.
ರಂಗಿನಾಟದಲ್ಲಿ ಮಿಂದೆದ್ದ ಚಿಣ್ಣರ ಪಡೆ, ಮಹಿಳೆಯರು
ತಾಳಿಕೋಟೆ: ಪಟ್ಟಣದಲ್ಲಿ ಹೋಳಿ ಹುಣ್ಣಿಮೆ ನಿಮಿತ್ತ ಕಾಮದಹನ ಮಾಡುವ ಮೂಲಕ ರಂಗಿನಾಟದಲ್ಲಿ ಪರಸ್ಪರ ಬಣ್ಣ ಹಚ್ಚುವುದರೊಂದಿಗೆ ಮೊದಲ ದಿನದ ರಂಗಿನಾಟಕ್ಕೆ ಯುವಕರು ಚಾಲನೆ ನೀಡಿದರು. ವರ್ಷದಿಂದ ವರ್ಷಕ್ಕೆ ಕಳೆಗುಂದುತ್ತಾ ಸಾಗಿದ್ದ ರಂಗಿನಾಟಕ್ಕೆ ಮೆರಗು ತರಲು ಸ್ನೇಹಿತ ಹಿತೈಷಿಗಳಿಗೆ ಕೆಲವು ಯುವಕರು ಬಣ್ಣ ಹಚ್ಚುವುದರೊಂದಿಗೆ ರಂಗಿನಾಟದಲ್ಲಿ ಪಾಲ್ಗೊಂಡಿದ್ದರು.
1 ಟಿಎಂಸಿ ನೀರು ಹರಿಸಲು ಡಿಸಿಎಂ ಸೂಚನೆ
ವಿಜಯಪುರ: ಇಂಡಿ, ಚಡಚಣ ಮತ್ತು ಅಫಜಲಪುರ ತಾಲೂಕಿನ ಭೀಮಾ ನದಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಈ ಸಲುವಾಗಿ ಐಬಿಸಿ (ಇಂಡಿ ಬ್ರ್ಯಾಂಚ್ ಕ್ಯಾನಲ್) ಮುಖಾಂತರ 1.5 ಟಿಎಂಸಿ ನೀರನ್ನು ಹಾಗೂ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 1.5 ಟಿಎಂಸಿ ನೀರನ್ನು ಭೀಮಾ ನದಿಗೆ ಹರಿಸುವ ಕುರಿತು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹಾಗೂ ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ 1 ಟಿಎಂಸಿ ನೀರು ಬಿಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮುದ್ದೇಬಿಹಾಳದಲ್ಲಿ ಮಂಕಾದ ಹೋಳಿ ಹಬ್ಬ
ಮುದ್ದೇಬಿಹಾಳ: ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಮುದ್ದೆಬಿಹಾಳದಲ್ಲಿ ಹೋಳಿ ಹಬ್ಬ ಸ್ವಲ್ಪ ಮಂಕಾದಂತೆ ಕಂಡು ಬಂದಿತು. ಪ್ರತಿವರ್ಷ ಪಟ್ಟಣದಲ್ಲಿ ಎರಡು ದಿನಗಳ ಕಾಲ ಹೋಳಿ ಹಬ್ಬದ ಬಣ್ಣದೋಕುಳಿ ಆಚರಣೆ ಮಾಡಲಾಗುತ್ತದೆ. ಈ ಬಾರಿ ಸಂಭ್ರಮವಿದ್ದರೂ ಎಸ್ಸೆಸ್ಸೆಲ್ಸಿ ಮತ್ತು 5,8,9 ನೇ ತರಗತಿಗೆ ಬೋರ್ಡ್‌ ಪರೀಕ್ಷೆಯಿಂದಾಗಿ ಮಕ್ಕಳು ಅಧ್ಯಯನದಲ್ಲಿಯೇ ಬ್ಯುಜಿಯಾಗಿರುವುದು ಕಂಡು ಬಂತು.
  • < previous
  • 1
  • ...
  • 296
  • 297
  • 298
  • 299
  • 300
  • 301
  • 302
  • 303
  • 304
  • ...
  • 377
  • next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved