• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆ ಬಗೆಹರಿಸುವಂತೆ ಗ್ರಂಥಾಲಯ ಮೇಲ್ವಿಚಾರಕರಿಂದ ಸಿಇಒಗೆ ಮನವಿ
ವಿಜಯಪುರ: ಜಿಲ್ಲೆಯಲ್ಲಿ ಅರಿವು ಕೇಂದ್ರ ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ ಬೇಡಿಕೆಗಳು, ಕುಂದು ಕೊರತೆಗಳನ್ನು ಈಡೇರಿಸುವಂತೆ ಜಿಪಂ ಸಿಇಓ ರಿಷಿ ಆನಂದ್ ಅವರಿಗೆ ಮನವಿ ಸಲ್ಲಿಸಿದರು. 2020ರ ನಿಂದ ಇಲ್ಲಿವರೆಗೆ ಬಹುತೇಕ ಕಡೆಗೆ ಗ್ರಂಥಾಲಯಗಳ ಪತ್ರಿಕೆ ಬಿಲ್ ನೀಡದಿರುವುದು, 6 ತಿಂಗಳಿನಿಂದ ವೇತನ ಜಮೆ ಇದ್ದರೂ ನೀಡದಿರುವುದು, ಇ-ಅಟೆಂಡೆನ್ ಮಾಡುವಲ್ಲಿ ಮುತುವರ್ಜಿ ವಹಿಸದಿರುವುದ, ಗ್ರಂಥಾಲಯಗಳಿಗೆ ಅವಶ್ಯಕ ರಜಿಸ್ಟರ್, ರಶೀದಿ ಪುಸ್ತಕ, ಸೀಲು, ಕುರ್ಚಿ, ಪೀಠೋಪಕರಣ, ಡಿಜಿಟಲ್ ಗ್ರಂಥಾಲಯ ಗಳಿಗೆ ಅವಶ್ಯಕ ಪರಿಕರಗಳು, ವೈಫೈ, ಇಂಟರ್ನೆಟ್ ಕಲ್ಪಿಸುವದು, ವರ್ಗಾವಣೆ, ಅನುಕಂಪದ ನೌಕರಿ ಸೇರಿದಂತೆ ಅನೇಕ ವಿಷಯಗಳ ಕುರಿತು ಸಿಇಒ ಅವರಿಗೆ ಮನವಿಯ ಮೂಲಕ ಗಮನಕ್ಕೆ ತರಲಾಯಿತು. ಮನವಿ ಸ್ವೀಕರಿಸಿ ಕೂಡಲೆ ತಮ್ಮ ಸಮಸ್ಯೆಗಳನ್ನು ಪರಿಹರಿಸುವದಾಗಿ ಸಿಇಒ ಭರವಸೆ ನೀಡಿದರು.
ಪುರಸಭೆ ಕಚೇರಿಗೆ ಲೋಕಾ ಅಧಿಕಾರಿಗಳ ದಿಢೀರ ಭೇಟಿ: ತರಾಟೆ
ಸಿಂದಗಿ: ಸಿಂದಗಿ ಪುರಸಭೆಯಲ್ಲಿ ಲೋಪದೋಷಗಳು ಹೆಚ್ಚಾಗಿವೆ ಎಂದು ದೂರುಗಳು ಬಂದ ಹಿನ್ನಲೆಯಲ್ಲಿ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು. ದೂರುಗಳ ಆಧಾರದ ಮೇಲೆ ದಾಳಿ ನಡೆಸಿದಾಗ ಜಿಲ್ಲಾದ್ಯಂತ ಎಲ್ಲ ಸರಕಾರಿ ಕಚೇರಿಗಳಲ್ಲಿ ಕೆಲಸ ಕಾರ್ಯಗಳ ಬಗ್ಗೆ ನಿಗಾ ಇಡಬೇಕೆನ್ನುವ ಆದೇಶವಿರುವುದಾಗಿ ಲೋಕಾಯುಕ್ತ ಎಸ್ಪಿ ಟಿ.ಮಲ್ಲೇಶ ಹೇಳಿದರು.
ಗ್ರಾಫಿಕ್ ಡಿಸೈನ್ ಕ್ಷೇತ್ರದಲ್ಲಿ ವಿಫುಲ ಅವಕಾಶ: ಶಂಕರ್‌ಗೌಡ
ವಿಜಯಪುರ: ಗ್ರಾಫಿಕ್ ಡಿಸೈನ್ ಎನ್ನುವುದು ಪ್ರಸ್ತುತ ದಿನಗಳಲ್ಲಿ ಬಹುಬೇಡಿಕೆಯ ಕಲೆಯಾಗಿದ್ದು, ಈ ಕಾರ್ಯಾಗಾರದಲ್ಲಿ ಎಲ್ಲರು ಸಕ್ರಿಯವಾಗಿ ಭಾಗವಹಿಸುವ ಮೂಲ ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕುಲಸಚಿವ ಶಂಕರ್‌ಗೌಡ ಸೋಮನಾಳ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಅಹಲ್ಯಬಾಯಿ ಸಂಶೋಧನಾ ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ನಡೆದ ಗ್ರಾಫಿಕ್ ಡಿಸೈನಿಂಗ್ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಕೈಲಾಸನಾಥ ಶ್ರೀಗೆ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಕೊಲ್ಹಾರ: ಡಾ.ಪಂಡಿತ ಪುಟ್ಟರಾಜ ಗವಾಯಿಗಳ 110 ನೇ ಜಯಂತ್ಯುತ್ಸವದ ಪ್ರಯುಕ್ತ ನೀಡುವ ಗುರು ಪುಟ್ಟರಾಜ ಗವಾಯಿಗಳ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಶೀಲವಂತ ಹಿರೇಮಠದ ಘ.ಮ.ಪೂ ಧರ್ಮರತ್ನ ಡಾ.ಕೈಲಾಸನಾಥ ಮಹಾಸ್ವಾಮೀಜಿ ಭಾಜನರಾದರು. ಗದಗಿನ ಶ್ರೀರಾಮ ಭವನ ಕಳಸಾಪೂರದಲ್ಲಿ ಡಾ.ವಿ.ಬಿ.ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ ಸಹಯೋಗದಲ್ಲಿ ನಡೆದ ಗುರು ಪುಟ್ಟರಾಜ ಗವಾಯಿಗಳ ಜಯಂತ್ಯುತ್ಸವದ ಸಮಾರಂಭದಲ್ಲಿ 2024 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿಯನ್ನು ಪಟ್ಟಣದ ಶೀಲವಂತ ಹಿರೇಮಠದ ಘ.ಮ.ಪೂ ಧರ್ಮರತ್ನ ಡಾ.ಕೈಲಾಸನಾಥ ಸ್ವಾಮೀಜಿ ಪ್ರದಾನ ಮಾಡಲಾಯಿತು.
ಶಿರಾಡೋಣ -ಲಿಂಗಸೂರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ತಾಂಬಾ: ಗ್ರಾಮದ ಜನರಿಗೆ ಅಭಿವೃದ್ಧಿ ಜೊತೆಗೆ ದೇವಸ್ಥಾನ ಮಶೀದಿ ಮಂದಿರಗಳಿಗೆ ಅನುದಾನ ನೀಡಲಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಹೇಳಿದರು. ಗ್ರಾಮದ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಯೋಜನೆ ಅಡಿಯಲ್ಲಿ ಶಿರಾಡೋಣ -ಲಿಂಗಸೂರ ರಸ್ತೆ ಸುಧಾರಣೆಯ ₹163 ಲಕ್ಷ ಮೊತ್ತದ 1.40 ಕಿ.ಮೀ ಕಾಮಗಾರಿಗೆ ಭೂಮಿ ಪೂಜೆ ನೇರವರಿಸಿ ಮಾತನಾಡಿದರು,
ನಗರದಲ್ಲಿ ಶಿವಾಜಿ ಮಹಾರಾಜ ಅದ್ಧೂರಿ ಜಯಂತಿ
ವಿಜಯಪುರ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಗರದಲ್ಲಿ ಸೋಮವಾರ ಸಂಜೆ ಭವ್ಯ ಮೆರವಣಿಗೆ ನಡೆಯಿತು. ಸಂಜೆ 6.30ರಿಂದ ರಾತ್ರಿ 9ರ ವರೆಗೂ ನಗರದ ರಾಮಮಂದಿರದಿಂದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಮುಂಭಾಗದ ರಸ್ತೆಯ ಮೂಲಕ, ಮಹಾತ್ಮಾ ಗಾಂಧಿಜಿ ವೃತ್ತದಲ್ಲಿ ಸಂಚರಿಸಿ ಶಿವಾಜಿ ವೃತ್ತದ ವರೆಗೂ ಅದ್ಧೂರಿಯಾದ ಮೆರವಣಿಗೆ ನಡೆಸಲಾಯಿತು.
ಇಂಡಿಯಲ್ಲಿ ಬಿಎಲ್‌ಡಿಇ ಸಹಕಾರಿ ಸಂಘದ 7 ನೇ ಶಾಖೆ ಉದ್ಘಾಟನೆ
ಇಂಡಿ: ಸಹಕಾರಿ ಸಂಘಗಳು ಸಹಕಾರಿಯಾಗಿ ಕೆಲಸ ಮಾಡುತ್ತಿವೆ. ಇಂದು ಸಹಕಾರಿ ಸಂಸ್ಥೆಗಳು ಸಾಲ, ವಿವಿಧ ಸೌಲಭ್ಯ ನೀಡಿ ಮೇಲುಗೈ ಸಾಧಿಸಿವೆ. ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡಿದ ಸಹಕಾರಿ ಸಂಘಗಳಿಂದ ವಿಜಯಪುರ ಜಿಲ್ಲೆ ಸಹಕಾರಿ ಕ್ಷೇತ್ರದಲ್ಲಿ ಮುನ್ನುಗ್ಗುತ್ತಿರುವುದು ಸಂತಸದ ಸಂಗತಿ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಡಾ.ಅಂಬೇಡ್ಕರ್ ಮಾರ್ಗದಲ್ಲಿ ನಡೆದರೆ ಯಶಸ್ಸು ನಿಶ್ಚಿತ: ಅತನೂರ
ವಿಜಯಪುರ: ಡಾ.ಬಾಬಾಸಾಹೇಬ ಅಂಬೇಡ್ಕರ್ ಮಾರ್ಗದಲ್ಲಿ ನಡೆದು ಅವರ ತತ್ವ-ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಯಶಸ್ಸು ನಿಶ್ಚಿತ. ಅದಕ್ಕೆ ನಾನೇ ಜೀವಂತ ಉದಾಹರಣೆ ಎಂದು ಕರ್ನಾಟಕ ಸಿವಿಲ್ ನ್ಯಾಯಾಧೀಶ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು, ನ್ಯಾಯಾಧೀಶರಾಗಿ ಆಯ್ಕೆಯಾದ ಜಹೀರ್ ಅತನೂರ ಹೇಳಿದರು.
ನರ್ಸಿಂಗ್ ಕೋರ್ಸ್ ಗೆ ಬೇಡಿಕೆ ಹೆಚ್ಚು: ಹೊರ್ತಿ
ವಿಜಯಪುರ: ನರ್ಸಿಂಗ್ ಕೋರ್ಸ್ ಬೇಡಿಕೆ ಹೆಚ್ಚಾಗಿದ್ದು, ಈ ಕ್ಷೇತ್ರವೂ ಪವಿತ್ರವಾಗಿದೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲರಜಾಕ ಹೊರ್ತಿ ಹೇಳಿದರು. ನಗರದ ಅಲ್ ಅಮೀನ್ ಫಾತಿಮಾ ಸ್ಕೂಲ್ ಮತ್ತು ಕಾಲೇಜ ಆಫ್ ನರ್ಸಿಂಗ್ ಅಲ್ ಅಮೀನ್ ಮೆಡಿಕಲ್ ಕಾಲೇಜ ಹಾಗೂ ಆಸ್ಪತ್ರೆಯಲ್ಲಿ 19ನೇ ಬ್ಯಾಚ್ ನ ಡಿಪ್ಲೋಮಾ ನರ್ಸಿಂಗ್ ಮತ್ತು 25ನೇ ಬ್ಯಾಚ್ ನ ಬೇಸಿಕ್ ಬಿಎಸ್ಸಿ ನರ್ಸಿಂಗ್, 2019ನೇ ಬ್ಯಾಚ್ ನ ಬಿಎಸ್ಸಿ ನರ್ಸಿಂಗ್ ಹಾಗೂ 2021ನೇ ಬ್ಯಾಚ್ ನ ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಘಟಕೋತ್ಸವ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ದೇವರು, ಧರ್ಮದ ಮೊರೆ ಹೋಗಿದೆ
ವಿಜಯಪುರ: ಬಿಜೆಪಿ ನುಡಿದಂತೆ ನಡೆಯದೇ ದೇವರು, ಧರ್ಮದ ಮೊರೆ ಹೋಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಪ್ರೊ.ರಾಜು ಆಲಗೂರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2024ರ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಬಡವರ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗುತ್ತಿದೆ
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved