• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayapura

vijayapura

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನ್ನಾಳ ಗ್ರಾಮದ ಬಾಂದಾರಕ್ಕೆ ಹರಿದ ಕಾಲುವೆ ನೀರು
ಬಸವನಬಾಗೇವಾಡಿ: ಪ್ರತಿಭಟನೆ ವೇಳೆ ಅಧಿಕಾರಿಗಳು ನೀಡಿದ ಭರವಸೆಯಂತೆ ತಾಲೂಕಿನ ಕಾನ್ನಾಳ ಗ್ರಾಮದ ಬಾಂದಾರಕ್ಕೆ ಮುಳವಾಡ ಏತನೀರಾವರಿ ಯೋಜನೆಯ ಸಂಕನಾಳ ಮುಖ್ಯ ಕಾಲುವೆಯಿಂದ ನೀರು ಬಿಡಲು ಅಧಿಕಾರಿಗಳ ಸಮ್ಮುಖದಲ್ಲಿ ಫೈಪ್ ಲೈನ್ ಅಳವಡಿಕೆ ಮಾಡಲಾಯಿತು. ಕುಡಿಯುವ ನೀರಿನ ತಾಪತ್ರಯ, ಜಾನುವಾರುಗಳಿಗೆ ನೀರು ಇಲ್ಲದಂತಾಗಿದೆ. ಎರಡು ಕಿಮೀ ಅಂತರದಲ್ಲಿರುವ ಈ ಕಾಲುವೆಯಿಂದ ಗ್ರಾಮದ ಬಾಂದಾರಕ್ಕೆ ನೀರು ಬಿಟ್ಟರೆ ಗ್ರಾಮದಲ್ಲಿ ಅಂತರ್ಜಲ ಮಟ್ಟಕ್ಕೆ ಪೂರಕವಾಗುತ್ತದೆ.
ಪೋಲಿಯೋ ತಡೆಗೆ ಮಕ್ಕಳಿಗೆ ಲಸಿಕೆ ಹಾಕಿಸಿ
ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತಾಲೂಕು ವೈದ್ಯಾಧಿಕಾರಿ ಡಾ.ಎಸ್.ಎಸ್.ಓತಗೇರಿ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸಾಬೀರ ಪಟೇಲ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಿದ್ದೇಶ್ವರ ಶ್ರೀ ಸ್ಮರಣಾರ್ಥ ಉದ್ಯಾನವನ ಉದ್ಘಾಟನೆ
ವಿಜಯಪುರ: ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಸಿದ್ದೇಶ್ವರ ಸ್ವಾಮಿಜಿ ಸ್ಮರಣಾರ್ಥ 2.5 ಎಕರೆ ಪ್ರದೇಶದಲ್ಲಿ ಉದ್ಯಾನ ನಿರ್ಮಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಆವರಣದಲ್ಲಿನ ಉದ್ಯಾನವನವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.
ಮರಾಠಿ ಪ್ರಭಾವವಿದ್ದರೂ ಕನ್ನಡ ಭಾಷೆ ಬಳಕೆ
ಇಂಡಿ: ಗಡಿನಾಡು ಇಂಡಿ ತಾಲೂಕಿನಲ್ಲಿ ಮಹಾರಾಷ್ಟ್ರದ ಪ್ರಭಾವವಿದ್ದರೂ ಸಹ, ಅದನ್ನು ಬದಿಗಿಟ್ಟು ಇಲ್ಲಿನ ಜನರು ಕನ್ನಡ ಭಾಷೆಯನ್ನು ಬೆಳೆಸುತ್ತಿದ್ದಾರೆ. ಇಂಡಿ ಮತಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ಸಪ್ತ ಶೀಲಗಳನ್ನು ಅಳವಡಿಸಿಕೊಳ್ಳುವುದೆ ಶರಣ ಧಮ೯:ಡಾ.ಮಳಗಿ
ವಿಜಯಪುರ: ಅಂತರಂಗ ಮತ್ತು ಬಹಿರಂಗ ಶುದ್ಧಿಮಾಡಿಕೊಂಡು ಸಪ್ತ ಶೀಲಗಳನ್ನು ಮೈಗೂಡಿಸಿಕೊಳ್ಳುವದೇ ಶರಣ ಧರ್ಮ ಎಂದು ಮಾಜಿ ಕುಲಸಚಿವ ಡಾ.ವಿ ವಿ ಮಳಗಿ ಹೇಳಿದರು. ನಗರದ ಕಸಾಪ ಸಭಾಂಗಣದಲ್ಲಿ ಜಿಲ್ಲಾ, ತಾಲೂಕ, ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನಡೆದ ದತ್ತಿನಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಗರಿಕತೆ ಬೆಳೆದಂತೆ ವೈಚಾರಿಕತೆಯು ಬೆಳೆದು ಬಂದಿದೆ. ವೈಚಾರಿಕ ಕ್ರಾಂತಿಗೆ ಬಸವಣ್ಣನವರು ಬಹು ದೊಡ್ಡ ಕೊಡುಗೆ ನೀಡಿದ್ದಾರೆ ಎಂದರು.
ಪಾಲಿಕೆಯ ತ್ಯಾಜ್ಯ ವಿಲೇವಾರಿ ವಾಹನಗಳ ಲೋಕಾರ್ಪಣೆ
ವಿಜಯಪುರ: ಮಹಾನಗರ ಪಾಲಿಕೆಯಿಂದ ಸ್ವಚ್ಛ ಭಾರತ ಮಿಷನ್ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಖರೀದಿಸಲಾಗಿರುವ 100 ಟಿಪಿಡಿ ಸಾಮರ್ಥ್ಯದ ತ್ಯಾಜ್ಯ ಸಂಸ್ಕರಣ ಯಂತ್ರಗಳಿಗೆ ಹಾಗೂ ಘನತ್ಯಾಜ್ಯ ವಿಲೇವಾರಿ ವಾಹನಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಲೋಕಾರ್ಪಣೆಗೊಳಿಸಿದರು.
ರಾಮ ಮನಗೂಳಿಗೆ ಯಲಗೂರೇಶ್ವರ ಅನುಗ್ರಹ ಪ್ರಶಸ್ತಿ
ಆಲಮಟ್ಟಿ: ಯಲಗೂರೇಶ್ವರ ದೇವಸ್ಥಾನ ಸಮಿತಿ ನೀಡುವ ಪ್ರತಿಷ್ಠಿತ ಯಲಗೂರೇಶ ಅನುಗ್ರಹ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತ ದಿ.ರಾಮ ಮನಗೂಳಿ ಭಾಜನರಾಗಿದ್ದು, ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುತ್ತಿದೆ.
ಪೋಲಿಯೊ ಲಸಿಕಾ ಕೇಂದ್ರಕ್ಕೆ ಸಿಂಗಾರ
ಇಂಡಿ: ತಾಲೂಕಿನ ಚಿಕ್ಕಬೇವನೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಲಸಿಕಾ ಕೇಂದ್ರವನ್ನು ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಬಾಳೆ ದಿಂಡು, ಕಬ್ಬುಮಾವಿನ ಎಲೆಗಳಿಂದ ಸಿಂಗರಿಸಿ ಅಲಂಕಾರ ಮಾಡಿ ಹಬ್ಬದ ವಾತಾವರಣವನ್ನೆ ಸೃಷ್ಟಿ ಮಾಡಲಾಗಿತ್ತು.
ಪೋಲಿಯೊ ಲಸಿಕೆಗೆ ಶಾಸಕ ನಾಡಗೌಡ ಚಾಲನೆ
ಮುದ್ದೇಬಿಹಾಳ: ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಶಾಸಕರು ಹಾಗೂ ಅಧ್ಯಕ್ಷರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಸಿ.ಎಸ್ ನಾಡಗೌಡ (ಅಪ್ಪಾಜಿ)ಅವರು ಮಗುವಿಗೆ ಪಲ್ಸ್ ಪೋಲಿಯೊ ಹನಿ ಹಾಕವು ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ನಾಡಗೌಡ, ಜಿಲ್ಲೆಯಾದ್ಯಂತ ಮಾ.3 ರಿಂದ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ ಪೋಲಿಯೊ ಮುಕ್ತ ಭಾರತ ದೇಶವನ್ನಾಗಿ ನಿರ್ಮಿಸಲು ಸಹಕರಿಸಬೇಕು ಎಂದರು.
ಐಆರ್ ಬಿ ಸಭಾಂಗಣದಲ್ಲಿ ಕೌದಿ ನಾಟಕ ಪ್ರದರ್ಶನ
ವಿಜಯಪುರ: ಮೊಬೈಲ್ ಫೋನ್ ಜಗತ್ತಿನಲ್ಲಿ ನಾಟಕಗಳು ಕಡಿಮೆಯಾಗುತ್ತಿವೆ ಎಂದು ಐಆರ್ ಬಿ(ಭಾರತೀಯ ಪೊಲೀಸ್ ಮೀಸಲು ಪಡೆ) ಕಮಾಡೆಂಟ್ ಎನ್.ಬಿ.ಮೆಳ್ಳಿಗಟ್ಟಿ ವಿಷಾದ ವ್ಯಕ್ತಪಡಿಸಿದರು. ಅರಕೇರಿಯಲ್ಲಿರುವ ಐಆರ್ ಬಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಗಣೇಶ ಅಮೀನಗಡ ಅವರ ಕೌದಿ ನಾಟಕ ಪ್ರದರ್ಶನವನ್ನು ಐಆರ್ ಬಿ ಕಮಾಡೆಂಟ್ ಎನ್.ಬಿ.ಮೆಳ್ಳಿಗಟ್ಟಿ ಕೌದಿ ಬಿಡಿಸಿ ಪ್ರದರ್ಶಿಸುವ ಮೂಲಕ ಉದ್ಘಾಟಿಸಿದರು.
  • < previous
  • 1
  • ...
  • 331
  • 332
  • 333
  • 334
  • 335
  • 336
  • 337
  • 338
  • 339
  • ...
  • 398
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved