ಪ್ರಕರಣ ತ್ವರಿತ ಇತ್ಯರ್ಥವಾದರೆ ಕೋರ್ಟ್ಗೆ ಗೌರವಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ವಕೀಲರು ಕಕ್ಷಿದಾರರ ಹಿತ ಬಯಸಬೇಕಿದ್ದು, ತ್ವರಿತಗತಿಯಲ್ಲಿ ನ್ಯಾಯ ಪ್ರಕರಣ ಇತ್ಯರ್ಥಗೊಳಿಸಿದಾಗ ಮಾತ್ರ ನ್ಯಾಯಾಲಯಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ. ರಾಜ್ಯದಲ್ಲಿ ಕಾನೂನು ಬಿಗಿಗೊಳಿಸುವ ಪ್ರಯತ್ನದ ಜತೆಗೆ ತ್ವರಿತ ನ್ಯಾಯ ದೊರಕಿಸುವ ಉದ್ದೇಶವನ್ನು ನಮ್ಮ ಸರ್ಕಾರ ಹೊಂದಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು.